Friday, October 18, 2024
Google search engine
HomeUncategorizedರಾಗಿ ಬೆಳೆ ರಕ್ಷಣೆಗೆ ಪ್ರಾಮುಖ್ಯತೆ ; ಶಿವರಾಜಕುಮಾರ್

ರಾಗಿ ಬೆಳೆ ರಕ್ಷಣೆಗೆ ಪ್ರಾಮುಖ್ಯತೆ ; ಶಿವರಾಜಕುಮಾರ್

ಚಿಕ್ಕನಾಯಕನಹಳ್ಳಿ : ತಾಲ್ಲೂಕಿನಲ್ಲಿ ಪ್ರಸ್ತುತ ಬಂದೊದಗಿರುವ ಮಳೆ ಕೊರತೆಯಿಂದ ಈ ಸಾಲಿನ ರಾಗಿ ಬೆಳೆಗೆ ಉಂಟಾಗಿರುವ ಪ್ರತಿಕೂಲ ಪರಿಣಾಮ ತಡೆಯಲು ರೈತರಿಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ಕೆಲವು ಸಲಹೆಗಳನ್ನು ನೀಡಿದರು.

ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ಉದ್ದೇಶಿತ ಗುರಿಯನ್ನು ಮೀರಿ ತಾಲ್ಲೂಕಿನ ರೈತರು 31500 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ಮಾಡಿದ್ದಾರೆ. ಆಗಸ್ಟ್ ತಿಂಗಳಿಂದಲೇ ಮಳೆ ಕಡಿಮೆಯಾಗುತ್ತಾ ಬಂದಿತ್ತು. ಪ್ರಸ್ತುತ ಬೆಳೆಯು 45 ದಿನದ ಹಂತದಲ್ಲಿದ್ದು ಸೆಪ್ಟೆಂಬರ್ ತಿಂಗಳಲ್ಲಿ ಉತ್ತಮ ಮಳೆಯಾಗದೆ ಇರುವುದು ಚಿಂತೆಗೆ ಕಾರಣವಾಗಿದೆ.

ಅದೇರೀತಿ ಕಳೆದ ಎರಡು ವಾರಗಳಲ್ಲಿ ಮಳೆ ಕೈಕೊಟ್ಟ ಪರಿಣಾಮವಾಗಿ ಬಿತ್ತಿರುವ ರಾಗಿ ಸೇರಿದಂತೆ ಹಲವು ಬೆಳೆಗಳಿಗೆ ತೇವಾಂಶದ ಕೊರತೆ ಉಂಟಾಗಿದೆ. ಇದರಿಂದ ಬೆಳೆಗಳು ಒಣಗತೊಡಗಿವೆ. ಬೆಳೆ ಒಣಗದಂತೆ ತಡೆಯಲು ತುಂತುರು ನೀರಾವರಿ ಮೂಲಕ ನೀರನ್ನು ಹಾಯಿಸಿ ಬೆಳೆ ಹಾಳಾಗುವುದನ್ನು ರೈತರು ತಡೆಯಬಹುದಾಗಿದೆ.

ಕಳೆದ ಸಾಲಿನಲ್ಲಿ 6150 ಸೂಕ್ಷ್ಮ ನೀರಾವರಿ ಘಟಕಗಳನ್ನು ಇಲಾಖೆಯಿಂದ ರೈತರಿಗೆ ವಿತರಿಸಲಾಗಿದೆ. ಅವನ್ನು ರೈತರು ಈಗ ಸಮರ್ಪಕವಾಗಿ ಬಳಸಬಹುದು. ಕೃಷಿ ಹೊಂಡಗಳಲ್ಲಿ ನೀರನ್ನು ಸಂಗ್ರಹಿಸಿಟ್ಟುಕೊಂಡಿದ್ದರೆ ಡೀಸೆಲ್ ಇಂಜಿನ್ ಸಹಾಯದಿಂದ ಆ ನೀರನ್ನು ಸೆಳೆದು ತುಂತುರು ನೀರಾವರಿ ಮೂಲಕ ಬೆಳೆಗಳಿಗೆ ನೀರುಣಿಸಿಕೊಂಡು ತೇವಾಂಶವನ್ನು ಕಾಪಾಡಿಕೊಳ್ಳಬೇಕು. ಇಲಾಖೆಯ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ ಕೃಷಿಯಲ್ಲಿ ತುಂತುರು ಅಥವಾ ಹನಿ ನೀರಾವರಿ ವಿಧಾನಗಳನ್ನು ಬಳಸುವ ವಿಧಾನಗಳ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ. ಸಹಾಯಕ್ಕಾಗಿ, ಘಟಕದ ಅವಶ್ಯಕತೆ ಇರುವವರು ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿದರೆ ಒಂದು ವಾರದೊಳಗೆ ಅದನ್ನು ವಿತರಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ರೈತನ ಅನುಭವ :
ದೊಡ್ಡೆಣ್ಣೆಗೆರೆ ರಮೇಶ್ ಎಂಬ ರೈತರ ಪ್ರಕಾರ ಆರಂಭದಲ್ಲಿ ಸುರಿದ ಮಳೆಯ ನಂತರ ಬಿಸಿಲಿನ ಪ್ರಕೋಪ ಹೆಚ್ಚಳ ಕಂಡಿದೆ. ಅದರಿಂದಾಗಿ ರಾಗಿ ಬೆಳೆಗೆ ನೀರು ಹರಿಸುವ ಅನಿವಾರ್ಯತೆಗೆ ರೈತರು ಸಿಲುಕಿದ್ದಾರೆ. ಅಂತೆಯೇ ತುಂತುರು ನೀರಾವರಿ ಘಟಕವನ್ನು ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಪಡೆದಿದ್ದು ನೀರನ್ನು ಇದರ ಮೂಲಕ ರಾಗಿ ಬೆಳೆಗೆ ಹರಿಸಿ ಬೆಳೆ ಸಂರಕ್ಷಣೆ ಮಾಡಿಕೊಂಡಿದ್ದೇನೆ. ತಾಲ್ಲೂಕಿನ ರೈತರು ಈ ಬಗೆಯಲ್ಲಿ ತಮ್ಮ ಬೆಳೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂದು ರೈತ ರಮೇಶ್ ತಮ್ಮ ಅನುಭವದ ಆಧಾರದಲ್ಲಿ ಸಲಹೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?