Monday, March 16, 2026
Google search engine
Home Blog Page 103

ನಮಸ್ಕಾರ, ಚೆಗೆವಾರ..’

ಇಂದು ಚೆಗೆವಾರ ಹುಟ್ಟಿದ ದಿನ.
ಚೆಗೆವಾರನಿಗೂ ಭಾರತಕ್ಕೂ ಪ್ರೀತಿಯ ಸಂಬಂಧ.
ನಾನು ಕಂಡುಕೊಂಡದ್ದು ಇಲ್ಲಿದೆ-

ಜಿ ಎನ್ ಮೋಹನ್

ನಮಸ್ಕಾರ-
ಏನೋ ಬರೆಯುವುದರಲ್ಲಿ ತಲ್ಲೀನರಾಗಿದ್ದ ನೆಹರೂ ತಲೆ ಎತ್ತಿ ನೋಡಿದರು. ನೋಡಿದರು ಅಷ್ಟೇ ಮಾತು ಹೊರಡಲಿಲ್ಲ. ಅದೇ ಹಸಿರು ಪ್ಯಾಂಟ್, ಹಸಿರು ಶರ್ಟ್, ಹಸಿರು ಬೂಟು, ಅದೇ ಗಡ್ಡ, ಅದೇ ಹೊಂಗೂದಲು, ಅದೆಲ್ಲಕ್ಕಿಂತ ಹೆಚ್ಚಾಗಿ ಸದಾ ನಗು ತುಳುಕಿಸುವ ಅದೇ ಮುಖ. ಮಾತಿಲ್ಲದೆ ನಿಂತ ನೆಹರೂ ನಂತರ ತಮ್ಮ ಎದುರಿಗಿದ್ದ ಆ ಎತ್ತರದ ನಿಲುವಿನ ಹುಡುಗನ ಕೈ ಕುಲುಕಿ- ‘ನಮಸ್ಕಾರ, ಚೆಗೆವಾರ’ ಎಂದರು.

ನಂತರ ನೆಹರೂ, ಚೆಗೆವಾರ ಮಧ್ಯೆ ಸೇತುವೆಯಾಗಿ ನಿಂತದ್ದು ಆ ಅದೇ ಸಿಗಾರ್. ಕ್ಯೂಬನ್ ಸಿಗಾರ್. ಕ್ಯೂಬಾದ ಜನತೆ ತಮ್ಮ ಎದೆ ಹೊಲಗಳಲ್ಲಿ ಬೆಳೆಸಿದ್ದ ತಂಬಾಕನ್ನು ಸುರುಳಿ ಸುತ್ತಿ ಭಾರತಕ್ಕೆ ಪ್ರೀತಿಯಿಂದ ಕಳಿಸಿದ ಸಿಗಾರ್. ಒಂದು ಪೆಟ್ಟಿಗೆಯ ತುಂಬಾ ಸಿಗಾರ್ ಕಂತೆಯನ್ನೇ ಹೊತ್ತು ತಂದಿದ್ದ ಚೆಗೆವಾರ ಅದನ್ನು ನೆಹರೂ ಕೈಗಿತ್ತರು. ‘ಕ್ಯೂಬಾದಿಂದ, ಪ್ರೀತಿಯಿಂದ’ ಎಂದರು. ಒಂದು ಸಿಗಾರ್, ಒಬ್ಬ ಚೆಗೆವಾರ ಭಾರತ ಮತ್ತು ಕ್ಯೂಬಾದ ನಡುವಿನ ನಂಟಿಗೆ ಪ್ರತೀಕವಾಗಿ ನಿಂತಿದ್ದರು.


ಅವತ್ತು ಮೇ ದಿನಾಚರಣೆ. ಇಡೀ ಸಂಜೆ ಹಾಡಿ ಕುಣಿದು, ಗತ್ತು ಗಮ್ಮತ್ತಿನಿಂದ ಸಂಭ್ರಮದ ಹುಡಿ ಹಾರಿಸಿ ಹಿಂದಿರುಗುವಾಗ ಕಲಾವಿದ ಜಾನ್ ದೇವರಾಜ್ ಸ್ಕ್ರೀನ್ ಪ್ರಿಂಟ್ ನ ಒಂದು ಮುದ್ದಾದ ಪೋಸ್ಟರ್ ನನ್ನ ಕೈಗಿತ್ತರು. ಅದರಲ್ಲಿಯೂ ಅದೇ ಕಳೆ ಹೊತ್ತ ಮುಖ, ಎದುರಿಗಿದ್ದವರನ್ನು ಸಮ್ಮೋಹಿನಿಗೆ ಈಡು ಮಾಡುವ ಕಣ್ಣುಗಳು, ಅದೇ ಹರಕಲು ಗಡ್ಡ, ಕೆಳಗೆ ‘ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸಿಡಿದೆದ್ದರೆ ನೀನು ನನ್ನ ಸಂಗಾತಿ’ ಎನ್ನುವ ಸಾಲುಗಳು. ಆ ಸಾಲುಗಳನ್ನು ನಾನು ಮತ್ತೆ ಮತ್ತೆ ಕಂಡೆ. ಅದೇ ಜಾನ್ ದೇವರಾಜ್ ಅವರ ಕಲಾತ್ಮಕ ಅಕ್ಷರಗಳಲ್ಲಿ, ಬೆಂಗಳೂರಿನ ಬೀದಿ ಬೀದಿಯ ಗೋಡೆಗಳ ಮೇಲೆ. ನಾನೂ ಸಹಾ ‘ ನಮಸ್ಕಾರ, ಚೆಗೆವಾರ’ ಎಂದೆ.


ನಾನು ಹಾಗೆ ಚೆಗೆವಾರಾನಿಗೆ ನಮಸ್ಕಾರ ಎಂದು ವಿಶ್ ಮಾಡುವ ಮೊದಲೇ, ಹಾಗೆ ಆತನನ್ನು ಎದೆಗೂಡಿನೊಳಗೆ ಎಳೆದುಕೊಳ್ಳುವ ದಶಕಗಳ ಮೊದಲೇ ನೆಹರೂ ಚೆಗೆವಾರನಿಗೆ ನಮಸ್ಕಾರ ಹೇಳಿಬಿಟ್ಟಿದ್ದರು. ಆದರೆ ಆಗ ಅವರ ಎದುರು ನಿಂತದ್ದು ಭಾರತಕ್ಕೆ ಬರುವ ಮೊದಲು ಮ್ಯಾಡ್ರಿಡ್ ನಲ್ಲಿ ತನ್ನ ೩೧ ನೆಯ ಹುಟ್ಟುಹಬ್ಬ ಆಚರಿಸಿಕೊಂಡು ಬಂಡ ಪಡ್ಡೆ ತರುಣ ಚೆ. ಜಗತ್ತನ್ನು ಬೆಕ್ಕಸ ಬೆರಗಾಗುವಂತೆ ಮಾಡಿದ ‘ಡಾಕ್ಟರ್’. ಇಡೀ ಅಮೆರಿಕಾದ ಎದೆಯಲ್ಲಿ ಅವಲಕ್ಕಿ ಕುಟ್ಟುವಂತೆ ಮಾಡಿದ ‘ಮಹಾನ್ ಚತುರ’. ಇಡೀ ಜಗತ್ತಿನ ಬೀದಿಗಳಲ್ಲಿ, ಗಲ್ಲಿಗಳಲ್ಲಿ ಹುಚ್ಚರಂತೆ ಜನ ಪ್ರೀತಿಸಿದ ‘ಚೆ’. ಎದೆಯಲ್ಲಿ ಕಾವ್ಯ, ಕೈಯಲ್ಲಿ ಖಡ್ಗ.. ಅಲ್ಲಲ್ಲ.. ಕೋವಿ ಹಿಡಿದ ‘ಚೆ’. ಎಂದೆಂದೂ ಕವಿಯಾಗದ ಬಂಡಾಯಗಾರ ಎಂದು ನೋವಿನಿಂದ ತನ್ನನ್ನು ಬಣ್ಣಿಸಿಕೊಂಡ ‘ಚೆ’.


ಚೆಗೆವಾರ ಭಾರತಕ್ಕೆ ಬಂದಿದ್ದರು ಎಂದು ಗೊತ್ತಾದದ್ದೇ ನಾನು ಒಂದು ಕ್ಷಣ ಮಾತಿಲ್ಲದವನಾದೆ. ನಾನು ಆ ಚೆಗೆವಾರ ಪ್ರೀತಿಗೆ ಬಿದ್ದು, ಆ ಕಾರಣಕ್ಕಾಗಿಯೇ ಕ್ಯೂಬಾಕ್ಕೆ ಹೋಗಿ ಬಂದು, ಇದ್ದ ನೂರೆಂಟು ಮಾಹಿತಿಗಳನ್ನು ಗುಡ್ಡೆ ಹಾಕಿಕೊಂಡು, ನನ್ನೊಳಗಿನ ಎಲ್ಲಾ ಪ್ರೀತಿ ಧಾರೆ ಎರೆದು ‘ನನ್ನೊಳಗಿನ ಹಾಡು ಕ್ಯೂಬಾ’ ಎನ್ನುವ ಪ್ರವಾಸ ಕಥನ ಬರೆದಿದ್ದೆ. ಆಗಲೂ ಸಿಗದಿದ್ದ ಈ ಒಂದು ಮಾಹಿತಿ ಈಗ ಥಟ್ಟೆಂದು ನನ್ನೆದುರು ನಿಂತಿತ್ತು.

ಹಾಗೆ ಚೆಗೆವಾರ ಭಾರತಕ್ಕೆ ಬಂದದ್ದನ್ನು ಬಿಡಿಸಿಟ್ಟವರು ಓಂ ತನ್ವಿ, ಹೆಸರಾಂತ ಪತ್ರಕರ್ತ. ‘ಜನಸತ್ತಾ’ ದೈನಿಕದ ಸಂಪಾದಕರಾಗಿದ್ದ ಓಂ ತನ್ವಿ ಅವರಿಗೂ ನನ್ನಂತೆಯೇ ಚೆಗೆವಾರ ಹುಚ್ಚು. ಕ್ಯೂಬಾ ಪ್ರವಾಸ ಕಥನ ಬರೆಯುತ್ತಾ ನಾನು ಚೆಗೆವಾರ ಎನ್ನುವುದೇ ಒಂದು ಗುಂಗೀ ಹುಳು ಎಂದು ಬಣ್ಣಿಸಿದ್ದೆ. ಚೆ ಎನ್ನುವುದೊಂದು ಹುಚ್ಚು. ಚೆ ಎನ್ನುವುದು ಹುಚ್ಚೇ ಆದಲ್ಲಿ ಜಗತ್ತು ಹುಚ್ಚರ ಸಂತೆಯಾಗಲಿ, ಆಸ್ಪತ್ರೆ ಇಲ್ಲದಿರಲಿ ಎಂದು ಆಶಿಸಿದ್ದೆ. ಓಂ ತನ್ವಿ ಅವರು ಚೆ ಭಾರತಕ್ಕೆ ಬಂದದ್ದಕ್ಕೆ ಸಾಕ್ಷಿಯಾಗಿದ್ದರು. ಸರಣಿ ಲೇಖನಗಳನ್ನು ಬರೆದರು. ಅಷ್ಟಕ್ಕೇ ಸುಮ್ಮನಾಗಲಿಲ್ಲ. ನೇರ ಕ್ಯೂಬಾಗೆ ಹೊದರು. ಚೆ ಮಗ ಕ್ಯಾಮಿಯೋ ಗೆವಾರನ ಕೈ ಕುಲುಕಿದರು. ಹವಾನಾದಲ್ಲಿ ಚೆ ಇದ್ದ ಮನೆ ಈಗ ಚೆಗೆವಾರ ಅಧ್ಯಯನ ಕೇಂದ್ರವಾಗಿ ಬದಲಾಗಿದೆ. ಅಲ್ಲಿದ್ದ ಕಡತಗಳನ್ನು ತಿರುವು ಹಾಕಿದರು. ಸ್ಪಾನಿಶ್ ನಲ್ಲಿದ್ದ ವರದಿಗಳನ್ನು ಹಿಂದಿಗೆ ಭಾಷಾಂತರ ಮಾಡಿಸಿದರು. ಪ್ರೀತಿಯಿಂದ ಸಿಗಾರ್ ಪಡೆದಿದ್ದ ನೆಹರೂ ಅವರು ಆ ಭೇಟಿಯನ್ನು ಸ್ಮರಣೀಯವಾಗಿಸಲು ‘ಕುಕ್ರಿ’ಯೊಂದನ್ನು ಕೊಟ್ಟಿದ್ದರು. ಅದನ್ನೂ ನೋಡಿ ಬಂದರು.

ಭಾರತಕ್ಕೆ ವಾಪಸಾದ ತನ್ವಿ ಅವರು ಸುಮ್ಮನೆ ಕೂರಲಿಲ್ಲ. ಇನ್ನು ನನ್ನ ಕೆಲಸ ಭಾರತದ ಕಡತಗಳನ್ನು ತಿರುವಿಹಾಕುವುದು ಎಂದು ನಿರ್ಧರಿಸಿದರು. ಭಾರತ ಸರ್ಕಾರದ ಅನೇಕ ಕಚೇರಿಗಳಿಗೆ ಭೇಟಿ ಕೊಟ್ಟರು. ಭಾರತದ ಯಾವುದೇ ಕಡತಗಳಲ್ಲಿಯೂ ‘ಚೆ’ ಎನ್ನುವ ಹೆಸರೇ ಇಲ್ಲ. ಅವರು ಕಮಾಂಡೆಂಟ್ ಅರ್ನೆಸ್ಟೊ ಗೆವಾರ ಮಾತ್ರ.ಅರ್ಜೆಂಟೀನಾದ ಚೆ ಕ್ರಾಂತಿಗೆ ಸಾಥ್ ನೀಡಿದ್ದು ಕ್ಯೂಬಾಗೆ. ಆತ ಭಾರತಕ್ಕೆ ಬಂದಿಳಿದಾಗ ಚೆ ಯಾರು ಎನ್ನುವ ಗೊಂದಲ. ಯಾವ ದೇಶದ ನಾಗರಿಕ ಎಂದು. ಫಿಡೆಲ್ ಹೇಳಿದ್ದರು- ಚೆ ಕ್ಯೂಬಾದ ಸಹಜ ನಾಗರಿಕ ಎಂದು. ಕ್ರಾಂತಿ ಜರುಗಿ ಇನ್ನೂ ಆಗತಾನೆ ಫಿಡೆಲ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿತ್ತು. ಆಗ ಚೆ ಯಾವ ಹುದ್ದೆಯನ್ನೂ ಹೊಂದಿರಲಿಲ್ಲ. ಹಾಗಾಗಿಯೇ ಭಾರತಕ್ಕೆ ಮತ್ತೂ ಗೊಂದಲ. ಇವರನ್ನು ಏನೆಂದು ಗುರುತಿಸುವುದು ಅಂತ. ಕೊನೆಗೆ ಕ್ಯೂಬಾದ ನಾಯಕ ಅಂತ ಮಾತ್ರ ನಮೂದಿಸಿ ಕೈ ತೊಳೆದುಕೊಂಡಿತು.

ಚೆಗೆವಾರ ಭಾರತಕ್ಕೆ ಬಂದಾಗ ಉಳಿದುಕೊಂಡಿದ್ದು ಆಗ ತಾನೇ ಹೊಸದಾಗಿ ನಿರ್ಮಿಸಲಾಗಿದ್ದ ದೆಹಲಿಯ ಅಶೋಕಾ ಹೋಟೆಲ್ ನಲ್ಲಿ. ಆಕಾಶವಾಣಿಯ ಕೆ ಪಿ ಭಾನುಮತಿ ಅವರು ಅಲ್ಲಿಯೇ ಚೆಗೆವಾರನನ್ನು ಸಂದರ್ಶಿಸಿದ್ದರು. ಓಂ ತನ್ವಿ ಅವರ ಮನೆಯ ಕದವನ್ನೂ ತಟ್ಟಿದರು ಭಾನುಮತಿ ‘ಮಿಲಿಟರಿ ಧಿರಿಸಿನಲ್ಲಿದ್ದ ಸಂತ’ನ ಬಗೆಗಿನ ನೆನಪುಗಳ ಮಾಲೆ ಹೆಣೆದರು. ನಂತರ ತನ್ವಿ ಹಿಂದುಸ್ತಾನ್ ಟೈಮ್ಸ್ ಕಚೇರಿಗೆ ಭೇಟಿ ಕೊತ್ತರು. ಚೆ ಭಾರತ ಭೇಟಿಯ ಬಗ್ಗೆ ಇದ್ದ ವರದಿಗಳನ್ನೆಲ್ಲಾ ಸಂಗ್ರಹಿಸಿದರು. ಸರ್ಕಾರದ ಫೋಟೋ ಡಿವಿಷನ್ ನಲ್ಲಿದ್ದ ಫೋಟೋಗಳನ್ನು ಸಂಗ್ರಹಿಸಿದರು. ಚೆ ಭೇಟಿ ನೀಡಿದ ಕೊಲ್ಕೋತ್ತಕ್ಕೂ ಹೋಗಿ ಬಂದರು. ೧೯೬೨ ರಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರ ಅಬು ಅಬ್ರಹಾಂ ಲಂಡನ್ ನ ‘ ದಿ ಅಬ್ಸರ್ವರ್’ ಪತ್ರಿಕೆಯಲ್ಲಿದ್ದಾಗ ಹವಾನಾದಲ್ಲಿ ಚೆಗೆವಾರನ ಎದುರು ಕೂತು ರೇಖಾಚಿತ್ರ ಬಿಡಿಸಿದ್ದರು. ಆ ರೇಖಾಚಿತ್ರವನ್ನೂ ತನ್ವಿ ಸಂಗ್ರಹಿಸಿದರು. ಅಲ್ಲೊಂದು ವಿಶೇಷವಿತ್ತು. ಅಬು ಬರೆದ ಚಿತ್ರದ ಶರ್ಟ್ ನ ಕಾಲರ್ ಮೇಲೆ ಚೆಗೆವಾರ ಪ್ರೀತಿಯಿಂದ ‘ಚೆ’ ಎಂದು ಸಹಿ ಮಾಡಿದ್ದ.

ಭಾರತಕ್ಕೆ ಕ್ಯೂಬಾ ಬಗ್ಗೆ ಇದ್ದ ಪ್ರೀತಿ ಅಪಾರ, ಇದು ಆ ಫಿಡೆಲ್ ಕ್ಯಾಸ್ತ್ರೋಗೂ ಗೊತ್ತಿತ್ತು. ‘ಭಾರತ ತನ್ನ ಕಡುಕಷ್ಟ ಕಾಲದ ಸಂಗಾತಿ’ ಎಂದು. ಹಾಗಾಗಿಯೇ ಕ್ಯೂಬಾ ಅಮೆರಿಕಾವನ್ನು ಹಿಮ್ಮೆಟ್ಟಿಸಿ, ಮಣಿಸಿ ಸ್ವಾತಂತ್ರ್ಯ ಗಳಿಸಿಕೊಂಡ ೬ ತಿಂಗಳಿಗೇ ಚೆಗೆವಾರನನ್ನು ಭಾರತದತ್ತ ಮುಖ ಮಾಡುವಂತೆ ಮಾಡಿದ್ದರು.

ಚೆಗೆವಾರ ಎಂದರೆ ಚೆಗೆವಾರನೇ. ನಿನಗೆ ಅಸ್ತಮಾ ಇದೆ ಇನ್‌ಹೇಲರ್ ತೆಗೆದುಕೊಂಡು ಹೋಗಲು ಮರೆಯಬೇಡ ಎಂದು ಹೆಂಡತಿ ತಾಕೀತು ಮಾಡಿದಾಗ ಅತ್ಯಂತ ನಿಷ್ಥನಾಗಿ ಇನ್‌ಹೇಲರ್ ಮರೆತು ಕವಿತೆಯ ಸಂಕಲನಗಳನ್ನು ಪ್ಯಾಕ್ ಮಾಡಿಕೊಳ್ಳುತ್ತಿದ್ದಾತ, ಭಾರತಕ್ಕೆ ಬಂದಾಗಲೂ ಹಾಹಾಗೇ ಮಾಡಿದ್ದ. ನೆಹರೂ ಅವರ ‘ಡಿಸ್ಕವರಿ ಆಫ್ ಇಂಡಿಯಾ’ವನ್ನು ಓದಿ ಅವರೊಂದಿಗೆ ಊಟಕ್ಕೆ ಕುಳಿತಾಗ ಊಟ ಮಾಡುವುದನ್ನೂ ಮರೆತು ಅದರ ಬಗ್ಗೆ ಗಂಟೆಗಟ್ಟಲೆ ಮಾತನಾಡಿದ್ದ.

ನೆಹರೂ, ಕೃಷ್ಣ ಮೆನನ್ ಭೇಟಿ ಮಾಡಿದ ಚೆಗೆವಾರನಿಗೆ ಅಷ್ಟು ಮಾತ್ರವೇ ಗುರಿ ಆಗಿರಲಿಲ್ಲ. ಆತ ಹೊಲಗಳಲ್ಲಿ ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಕಬ್ಬು ಕತ್ತರಿಸಿದವನು. ಶಾಲೆಗಳಲ್ಲಿ ಮಕ್ಕಳು ಓದಲೆಂದು ಚಿಮಣಿ ದೀಪ ಹೊತ್ತಿಸಿದವನು. ಹಾಗಾಗಿಯೇ ಭಾರತದಲ್ಲೂ ಆತ ಮಾಡಿದ್ದು ಅದನ್ನೇ. ತನ್ನ ಆರು ಜನರ ನಿಯೋಗವನ್ನು ಹೊರಡಿಸಿಕೊಂಡು ಆತ ದೆಹಲಿಯ ಸನಿಹದಲ್ಲೇ ಇದ್ದ ಪಿಲಾನ್ ನ ಶಾಲೆ, ಹೊಲಗಳತ್ತ ನಡೆದ. ಶಾಲೆಯ ಪರಿಸ್ಥಿತಿ ಆತನನ್ನು ಕಂಗೆಡಿಸಿಹಾಕಿತು. ರೈತರು ಚೆಯನ್ನು ಕಂಡವರೇ ಹಾರ ಹಿಡಿದು ಬಂದರು. ಆದರೆ ಚೆ ಮನಸ್ಸು ಹಣ್ಣಾಗಿ ಹೋಗಿತ್ತು. ಆತನ ಕಣ್ಣೆದುರಿಗೆ ಕಂಡ ರೈತರ ಬಡತನ, ಕೈಗಾರಿಕೆಯ ಮಾಲೀಕರ ಶ್ರೀಮಂತಿಕೆ ಕುಗ್ದಿಸಿಹಾಕಿತ್ತು. ‘ಕೆಲವೇ ಮಂದಿಯ ಕೈಯಲ್ಲಿ ಎಷ್ಟೊಂದು, ಹಲವರ ಕೈನಲ್ಲಿ ಏನೂ ಇಲ್ಲ’ ಎಂದು ಬರೆದ.

ಕೊಲ್ಕೊತ್ತದ ಬೀದಿಗಳಲ್ಲಿ ಪಕ್ಕಾ ಪಡ್ಡೆ ಹುಡುಗನಂತೆ ಕ್ಯಾಮೆರಾ ಹಿಡಿದು ಬೀದಿ ಬೀದಿಗಳ ಫೋಟೋ ತೆಗೆಯುತ್ತಾ ಹೋದ. ನೆಹರೂ ಕೊಟ್ಟ ಕುಕ್ರಿಯ ಮೇಲಿದ್ದ ಕೆತ್ತನೆ ನೋಡಿ ಮಗುವಿನಂತೆ ಕಣ್ಣರಳಿಸಿದ. ಸಕ್ಕರೆಯ ನಾಡಿನಿಂದ ಬಂದವನು ಹಲವರ ಎದೆಯಲ್ಲಿ ಸಿಹಿ ಉಳಿಸಿ ಹೋದ. ಯಾಕೋ ತುಂಬಾ ನೆನಪಾಗುತ್ತಿದೆ. ಅವತ್ತು ಹವಾನಾದ ಕಾರ್ಮಿಕ ಕಾಲೋನಿಯಲ್ಲಿ ಗೆಳೆಯ ಸಿದ್ಧನಗೌಡ ಪಾಟೀಲ್ ತಮ್ಮ ಕಂಚು ಕಂಠವನ್ನು ಸರಿಮಾಡಿಕೊಂಡು ನಿಂತಿದ್ದರು. ಚೆಗೆವಾರನನ್ನು ನನ್ನಂತೆಯೇ ಇನ್ನಿಲ್ಲದಂತೆ ಪ್ರೀತಿಸಿದ ಜೀವ ಅದು. ‘ಭೂಮಿ ಮೇಲೆ ಸೂರ್ಯ ಚಂದ್ರ ಇರುವವರೆಗೂ ನಿನ್ನ ಹೆಸರು ಅಜರಾಮರ ಚೆಗೆವಾರ, ಚೆಗೆವಾರ’ ಎಂದು ಹಾಡುತ್ತಿದ್ದರು.

ಚೆಗೆವಾರ ಭಾರತಕ್ಕೆ ಬಂದದ್ದು ಜುಲೈ 1 ರಂದು 1959. ಆರು ದಿನಗಳ ಕಾಲ ಇದ್ದು ಹೋದ ಆ ‘ಚೆ ‘ಹೆಜ್ಜೆಗಳನ್ನು ಹುಡುಕಲು ನಾನು ಇದನ್ನು ಬರೆಯಲು ಕುಳಿತೆ..

ಶಿಕ್ಷಣ ಸಚಿವರ ರಾಜಿನಾಮೆಗೆ ಪ್ರಗತಿಪರ ಸಂಘಟನೆಗಳಿಂದ ಆಗ್ರಹ

Publicstory


ತುಮಕೂರು; ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಾನವೀಯ ಮೌಲ್ಯಗಳನ್ನು ಅವಮಾನಿಸಿ ಪಠ್ಯಕ್ರಮವನ್ನು ವಿಕೃತಗೊಳಿಸಿ ಪಠ್ಯ ಬದಲಿಸಿರುವ ಶಿಕ್ಷಣ ಸಚಿವರು ರಾಜೀನಾಮೆ ನೀಡುವಂತೆ ನಗರದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಗತಿಪರ ಚಿಂತಕರಾದ ಕೆ.ದೊರೈರಾಜ್, ರೋಹಿತ್ ಚಕ್ರವರ್ತಿ ತಮಗೆ ವಹಿಸಿದ ಜವಾಬ್ದಾರಿಯನ್ನು ಮೀರಿ ಮಹನೀಯರ ಮತ್ತು ಈ ನಾಡಿನ ಸಾಕ್ಷಿ ಪ್ರಜ್ಞೆಗಳಾದ ಕುವೆಂಪು, ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಪೂಲೆ, ನಾರಾಯಣಗುರು, ವಾಲ್ಮೀಕಿ, ಕೆಂಪೇಗೌಡ ಮುಂತಾದ ದಾರ್ಶನೀಕರ ವಿಚಾರಧಾರೆಗಳನ್ನು ವಿಕೃತಗೊಳಿಸಿದ್ದಾರೆ ಎಂದು ಆರೋಪಿಸಿದರು.

ಈ ದುಷ್ಕೃತ್ಯದ ಹೊಣೆಯನ್ನು ಹೊತ್ತು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜಿನಾಮೆ ನೀಡಬೇಕೆಂದು ಸರ್ಕಾರವನ್ನು ಕೆ.ದೊರೈರಾಜ್ ರವರು ಆಗ್ರಹಿಸಿದರು.

ನಂತರ ಮಾತನಾಡಿದ ಪಂಡಿತ್ ಜವಾಹರ್ ಡಾ.ಬಿ,ಆರ್ ಅಂಬೇಡ್ಕರ್ ರವರ ಸಂವಿಧಾನದಲ್ಲಿ ಅಳವಡಿಸಿರುವ ಎಲ್ಲವನ್ನು ಒಳಗೊಳ್ಳುವ ತತ್ವವನ್ನು ರೋಹಿತ್ ಚಕ್ರತೀರ್ತ ಸಮಿತಿ ಬದಿಗಿಟ್ಟಂತೆ ಕಾಣುತ್ತಿದ್ದು ಇದೇ ಸರ್ಕಾರ ೨೦ ವರ್ಷಗಳು ಮುಂದುವರಿದರೇ ಗಾಂಧೀಜಿ ಚರಿತ್ರೆಯನ್ನೇ ಹೊಸಕಿಹಾಕುವ ಹುನ್ನಾರವನ್ನು ಹೊಂದಿದೆ ಎಂದರು.

ಕೂಡಲೇ ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕೆಂದು ಕಾರ್ಮಿಕ ಸಂಘಟನೆಯ ಮುಖಂಡ ಸೈಯದ್ ಮುಜೀಬ್ ಒತ್ತಾಯಿಸಿದರು.

ನಂತರ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಮಯ್ಯ ಪರಿಷ್ಕಣೆಯಿಂದಾಗಿ ಬೊಕ್ಕಸದ ಮೇಲಾಗಿರುವ ವೆಚ್ಚವನ್ನು ಶಿಕ್ಷಣ ಸಚಿವರು ಮತ್ತು ರೋಹಿತ್ ಚಕ್ರತೀರ್ಥರಿಂದಲೇ ಭರಿಸಬೇಕು ಎಂದು ಆಗ್ರಹಿಸಿದರು.

SFI ಜಿಲ್ಲಾದ್ಯಕ್ಷರಾದ ಶಿವಣ್ಣ. ಈ ಮಾತನಾಡಿ ತುಮಕೂರು ವಿ.ವಿ.ಯಲ್ಲೂ ಅಂಬೇಡ್ಕರ್ ಪಠ್ಯ ಕೈ ಬಿಡಲಾಗಿದ್ದು ಅದನ್ನು ಕೂಡಲೆ ಸೇರ್ಪಡೆ ಮಾಡಬೇಕು ಮತ್ತು ರಾಜ್ಯಸರ್ಕಾರ ಪಠ್ಯ ತಿರುಚುವ ಕೆಲಸ ಕೈ ಬಿಡಬೆಕು ಎಂದು ಒತ್ತಾಯಿಸಿದರು.

ಪಠ್ಯಪರಿಷ್ಕರಣೆಯಿಂದ ವಿದ್ಯಾರ್ಥಿಗಳ ಅರಿವಿನ ಮತ್ತು ಬೆಳವಣಿಗೆಯನ್ನು ಸಂಪೂರ್ಣವಾಗಿ ಸರ್ಕಾರ ನಿರ್ಲಕ್ಷಿಸಿದೆ ಬೇಗನೆ ಹಳೇ ಪಠ್ಯಪುಸ್ತಕ ಕ್ರಮಗಳನ್ನೇ ಎಲ್ಲಾ ಶಾಲಾ ಮಕ್ಕಳಿಗೆ ಸಿಗುವಂತಾಗಬೇಕು ಎಂದು ರಂಗದಾಮಯ್ಯ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ರೈತಸಂಘಟನೆಯ ಬಿ.ಉಮೇಶ್. ಕೊಳಗೇರಿ ಸಮಿತಿಯ ಅರುಣ್ ಮಾತನಾಡಿದರು. ಪ್ರತಿಭಟನೆ ನೇತೃತ್ವನ್ನು ಸುಬ್ರಮಣ್ಯ, ತಿರುಮಲಯ್ಯ, ವೆಂಕಟೇಶ್, ನಾಗರಾಜು ಹನುಮಂತರಾಯಿ,ರವೀಶ್.ಲೋಕೇಶ್ ರಫೀಕ್.ಗುಲ್ಜಾರ್.ಮಹಾಲಕ್ಷ್ಮಿ ಗಂಗಾಮ್ಮ. ಮುಂತಾದವರು ವಹಿಸಿದ್ದರು

ಶಿಕ್ಷಣ ಸಚಿವರ ರಾಜಿನಾಮೆಗೆ ಪ್ರಗತಿಪರ ಸಂಘಟನೆಗಳಿಂದ ಆಗ್ರಹ

0

Publicstory


ತುಮಕೂರು: ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಾನವೀಯ ಮೌಲ್ಯಗಳನ್ನು ಅವಮಾನಿಸಿ ಪಠ್ಯಕ್ರಮವನ್ನು ವಿಕೃತಗೊಳಿಸಿ ಪಠ್ಯ ಬದಲಿಸಿ ಕೋಮುವಾಧಿಕರಣ ವಿರೋಧಿಸಿ ಶಿಕ್ಷಣ ಸಚಿವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಗತಿಪರ ಚಿಂತಕರಾದ ಕೆ.ದೊರೈರಾಜ್ ರವರು ಪ್ರಸಕ್ತ ಸಾಲಿನ ಶಾಲಾ ಪಠ್ಯಗಳಲ್ಲಿ ಇರಬಹುದಾದ ಸೂಕ್ಷö್ಮ ಸಂಕೀರ್ಣ ವಿಷಯಗಳನ್ನು ಕುರಿತು ಪರಿಶೀಲಿಸಿ ವರದಿ ನೀಡುವುದಕ್ಕೆ ರಚಿಸಲಾದ ರೋಹಿತ್ ಚಕ್ರವರ್ತಿ ತಮಗೆ ವಹಿಸಿದ ಜವಾಬ್ದಾರಿಯನ್ನು ಮೀರಿ ಮಹನೀಯರ ಮತ್ತು ಈ ನಾಡಿನ ಸಾಕ್ಷಿ ಪ್ರಜ್ಞೆಗಳಾದ ಕುವೆಂಪು, ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಪೂಲೆ, ನಾರಾಯಣಗುರು, ವಾಲ್ಮೀಕಿ, ಕೆಂಪೇಗೌಡ ಮುಂತಾದ ದಾರ್ಶನೀಕರ ವಿಚಾರಧಾರೆಗಳನ್ನು ವಿಕೃತಗೊಳಿಸಿ ಶೈಕ್ಷಣೀಕ ಕ್ಷೇತ್ರದಲ್ಲಿ ಸಂವಿಧಾನ ಬಾಹೀರವಾಗಿ ಕೇಸರೀಕರಣವನ್ನು ಸೇರಿಸುವ ಹುನ್ನಾರದಿಂದ ಪರಿಷ್ಕೃತ ಪಠ್ಯಕ್ರಮವನ್ನು ಪರಿಷ್ಕರಣಕ್ಕೆ ಮುಂದಾದ ದುಷ್ಕೃತ್ಯವನ್ನು ಖಂಡಿಸಿ ಈ ಹೊಣೆಯನ್ನು ಹೊತ್ತು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜಿನಾಮೆ ನೀಡಬೇಕೆಂದು ಸರ್ಕಾರವನ್ನು ಕೆ.ದೊರೈರಾಜ್ ರವರು ಆಗ್ರಹಿಸಿದರು.
ನಂತರ ಮಾತನಾಡಿದ ಪಂಡಿತ್ ಜವಾಹರ್ ಡಾ.ಬಿ,ಆರ್ ಅಂಬೇಡ್ಕರ್ ರವರ ಸಂವಿಧಾನದಲ್ಲಿ ಅಳವಡಿಸಿರುವ ಎಲ್ಲವನ್ನು ಒಳಗೊಳ್ಳುವ ತತ್ವವನ್ನು ರೋಹಿತ್ ಚಕ್ರತೀರ್ತ ಸಮಿತಿ ಬದಿಗಿಟ್ಟಂತೆ ಕಾಣುತ್ತಿದ್ದು ಇದೇ ಸರ್ಕಾರ ೨೦ ವರ್ಷಗಳು ಮುಂದುವರಿದರೇ ಗಾಂಧೀಜಿ ಚರಿತ್ರೆಯನ್ನೇ ಹೊಸಕಿಹಾಕುವ ಹುನ್ನಾರವನ್ನು ಹೊಂದಿದೆ ಎಂದರು.
ಹಾಲಿ ಶಿಕ್ಷಣ ಸಚಿವರು ಸಬ್ಯತೆಯನ್ನು ಮೀರಿ ಪಠ್ಯಪುಸ್ತಕ ಪರಿಷ್ಕರಣೆಯನ್ನು ಅವೈಜ್ಞಾನಿಕವಾಗಿ ನಾಡಿನ ಎಲ್ಲಾ ಮಹನೀಯರ ಮೌಲ್ಯಗಳನ್ನು ತಿರುಚುವ ಮತ್ತು ಪಠ್ಯಕ್ರಮಗಳನ್ನು ಕೈಬಿಡುವ ಮತ್ತು ಕೋಮುವಾದಿಕರಣಕ್ಕೆ ಮುಂದಾಗಿರುವ ಕ್ರಮಗಳನ್ನು ಖಂಡಿಸಿ ಕೂಡಲೇ ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕೆಂದು ಕಾರ್ಮಿಕ ಸಂಘಟನೆಯ ಮುಖಂಡ ಸೈಯದ್ ಮುಜೀಬ್ ಒತ್ತಾಯಿಸಿದರು.
ನಂತರ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಮಯ್ಯ ಮಾತನಾಡಿ ಹಿಂದಿನ ಪಠ್ಯಕ್ರಮವನ್ನೇ ಮುಂದುವರಿಸಬೇಕು ಪರಿಷ್ಕರಣಾ ಪಟ್ಟಿಯ ಹೆಸರಿನಲ್ಲಿ ಬೊಕ್ಕಸದ ಮೇಲಾಗಿರುವ ವೆಚ್ಚವನ್ನು ಶಿಕ್ಷಣ ಸಚಿವರು ಮತ್ತು ರೋಹಿತ್ ಚಕ್ರತೀರ್ತರಿಂದಲೇ ಬರಿಸಬೇಕು ಎಂದು ಆಗ್ರಹಿಸಿದರು.
ಪಠ್ಯಪರಿಷ್ಕರಣೆಯಿಂದ ವಿದ್ಯಾರ್ಥಿಗಳ ಅರಿವಿನ ಮತ್ತು ಬೆಳವಣಿಗೆಯನ್ನು ಸಂಪೂರ್ಣವಾಗಿ ಸರ್ಕಾರ ನಿರ್ಲಕ್ಷಿಸಿದೆ ಬೇಗನೆ ಹಳೇ ಪಠ್ಯಪುಸ್ತಕ ಕ್ರಮಗಳನ್ನೇ ಎಲ್ಲಾ ಶಾಲಾ ಮಕ್ಕಳಿಗೆ ಸಿಗುವಂತಾಗಬೇಕು ಎಂದು ರಂಗದಾಮಯ್ಯ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ರೈತಸಂಘಟನೆಯ ಬಿ.ಉಮೇಶ್. ಕೊಳಗೇರಿ ಸಮಿತಿಯ ಅರುಣ್. ವಿದ್ಯಾರ್ಥಿ ಸಂಘಟನೆಯ ಶಿವಣ್ಣ ಮಾತನಾಡಿದರು. ಪ್ರತಿಭಟನೆ ನೇತೃತ್ವನ್ನು ಸುಬ್ರಮಣ್ಯ, ತಿರುಮಲಯ್ಯ, ವೆಂಕಟೇಶ್, ನಾಗರಾಜು ಹನುಮಂತರಾಯಿ,ರವೀಶ್.ಲೋಕೇಶ್ ರಫೀಕ್.ಗುಲ್ಜಾರ್ ಮುಂತಾದವರು ವಹಿಸಿದ್ದರು

ಸಾಗರವೇ ಶಾಂತವಾಗುವುದಾದರೆ…

0

ಡಾ.ರಜನಿ ಎಂ

ಸಮುದ್ರ-3


ನಿನ್ನ ಕೋಪ
ತಾಪಕ್ಕೆ ಆವಿಯಾದರೂ …
ಬಿಂದುವಾಗಿ
ಮತ್ತೆ ನಿನ್ನ ಸೇರುವೆ.

ಅಂತಾ ಸಾಗರವೇ
ಶಾಂತವಾಗುವುದಾದರೆ…
ನೀನೇಕೆ
ಶಾಂತ ವಾಗಲಾರೆ ?

ಆ ಸಮುದ್ರದಂತೆ
ನಾನೂ
ಉಪ್ಪು ಪ್ಪು.

ಸಾಗರದ
ಭೋರ್ಗರೆತ ದಂತೆ
ನಿನ್ನ ಉಸಿರಾಟವೂ.
ನನ್ನನ್ನು ಚಿಂತನೆಗೆ
ತಳ್ಳುವುದು.

ದಡದಲ್ಲಿ ನಿಂತ
ಹಡಗು ಸುರಕ್ಷಿತ….
ಹಾಗಂತ
ಪ್ರೀತಿ ಅಲೆಯಲ್ಲಿ
ತೇಲದೆ ಇರುವುದೆ?

ಸಮುದ್ರ – series 3


ಮತ್ಸ್ಯ ಕನ್ಯೆ
ತಿಮಿಂಗಿಲವಾಗಿ
ನುಂಗಿದ್ದು
ಯಾವಾಗ?

ದ್ವೀಪಗಳು
ಬರೇ ಮೇಲೆ ಕಾಣಲು
ಕೆಳಗೆ….
ಒಂದೇ ಸಮುದ್ರ
ನಮ್ಮಿಬ್ಬರ ಹಾಗೆ.

ದಣಿದು
ಬಂದರೆ
ಕಾಲು ತೊಳೆದು
ಕರೆಯುವೆಯೆಲ್ಲ….

ನನ್ನ ಪ್ರೀತಿಗೂ
ಅಲೆಯಂತೆ
ಏರಿಳಿತ ಇವೆ…
ಸಹಿಸಿಕೊ.

ಪೂರ್ಣ
ಚಂದಿರನ ನೋಡಿ…
ಉಬ್ಬದ
ಸಾಗರವೇ

ಸಮುದ್ರ / ಸಾಗರ ದಿನ ಸಾಗರ ದಿನವನ್ನು ಜೂನ್ 8 ಆಚರಿಸುತ್ತಾರೆ. ಜಲ ಸಂಪತ್ತು , ಜಲ ಮಾಲಿನ್ಯ ತಡೆಯುವಿಕೆ ಇತ್ಯಾದಿ ಇದರ ಉದ್ದೇಶ. ಆದಾಗ್ಯೂ, ಕವಿ ಮನಸ್ಸಿನವರಿಗೆ ಸಾಗರ ಬೇರೆಯದೇ ಭಾವ .

ಸಚಿವರ ಮನೆಗೆ ಮುತ್ತಿಗೆ ಪ್ರಕರಣ: ಜಾಮೀನು ಮಂಜೂರು

Publicstory


ತಿಪಟೂರು : ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಿದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ 24 (ಎನ್‍ಎಸ್‍ಯುಐ) ಕಾರ್ಯಕರ್ತರುಗಳಿಗೆ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಬುಧವಾರ ಸಂಜೆ ಮಂಜೂರಾಗಿದೆ.

ಜೂ.1ರಂದು ಘಟನೆ ನಡೆದ ದಿನವೇ ಎನ್‍ಎಸ್‍ಯುಐನ 15 ಹಾಗೂ ಜೂ.2ರಂದು 7 ಹಾಗೂ ಇಬ್ಬರು ಒಟ್ಟು 24 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ತಿಪಟೂರಿನ ಹಿರಿಯ ಶ್ರೇಣಿ ನ್ಯಾಯಾಲಯ ಮುಂದೆ ಹಾಜರು ಪಡಿಸಿದ್ದು ಘನ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.

ಇನ್ನೂ ಬಂಧಿತ ಜೂ.3 ರಿಂದ ಕಳೆದ 5-6 ದಿನಗಳಿಂದಲೂ ಜಾಮೀನಿಗಾಗಿ ತಿಪಟೂರಿನ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಬಂಧಿತ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಶನಿವಾರಕ್ಕೆ ಜಾಮೀನು ತೀರಸ್ಕøತಗೊಂಡಿದ್ದು ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಜಾಮೀನಿಗಾಗಿ ಪುನಃ ಅರ್ಜಿ ಸಲ್ಲಿಸಿದ್ದು, ಬುಧವಾರ ಸಂಜೆ ಜಾಮೀನು ಮಂಜೂರಾಗಿದೆ.

ಜಾಮೀನು ಮಂಜೂರಾಗಿದ್ದು ಅಧಿಕೃತವಾಗಿ ನ್ಯಾಯಾಲಯದಿಂದ ಆದೇಶದ ಪ್ರತಿಯೂ ಸಂಜೆ ಸಿಗಲಿದ್ದು ಅದನ್ನು ನಗರಠಾಣೆ ಹಾಗೂ ತುಮಕೂರಿನ ಕಾರಾಗೃಹಕ್ಕೆ ಕಳುಹಿಸುವ ವೇಳೆಗೆ ಸಂಜೆ ಆಗಲಿದ್ದು ವಕೀಲರೇ ತಿಳಿಸುವವಂತೆ ಗುರುವಾರ ಬೆಳ್ಳಿಗ್ಗೆ ಎಲ್ಲರಿಗೂ ಬಿಡುಗಡೆಯ ಭಾಗ್ಯ ದೊರೆಯಲಿದೆ.

ಸಸ್ಯ ವೈವಿಧ್ಯ

ತೇಜಸ್ವಿನಿ ಪಿ

ಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿ ಪರ್ವತ ಶ್ರೇಣಿ ಭಾರತದ ಪಶ್ಚಿಮ ಭಾಗದಲ್ಲಿರುವ ಒಂದು ಪ್ರಬುದ್ಧವಾದ ಪರ್ವತ ಶ್ರೇಣಿಯಾಗಿದೆ.  ಪಶ್ಚಿಮ ಘಟ್ಟ ಮಹಾರಾಷ್ಟ್ರ – ಗುಜರಾತ್ ಗಡಿ ಭಾಗದಲ್ಲಿರುವ ತಾಪ್ತಿ ನದಿಯ ದಕ್ಷಿಣದಲ್ಲಿ ಆರಂಭವಾಗಿ ಕನ್ಯಾಕುಮಾರಿಯವರೆಗೆ ಹರಡಿಕೊಂಡಿದೆ. ಸುಮಾರು ೧೬೦೦ ಕಿಮಿ ಉದ್ದವಿರುವ ಸಹ್ಯಾದ್ರಿ ಮಹಾರಾಷ್ಟ್ರ, ಗೋವ, ಕರ್ನಾಟಕ, ಕೇರಳ ಮತ್ತು ತಮಿಳುನಾಡುಗಳಲ್ಲಿ  ಹಬ್ಬಿದೆ.

ಸಹ್ಯಾದ್ರಿ ವಿಶ್ವದ ಅತ್ಯಂತ ಸಕ್ರಿಯ ಜೀವವೈವಿಧ್ಯ ನೆಲೆಗಳಲ್ಲಿ ಒಂದಾಗಿದ್ದು, ಸುಮಾರು 7402 ವಿವಿಧ ಹೂ ಬಿಡುವ( Angiosperms) ಸಸ್ಯಗಳನ್ನು ಹೊಂದಿದೆ. ಅದರಲ್ಲೂ ಅಂದಾಜು 1273 ವಿವಿಧ ಸಸ್ಯಗಳಿಗೆ ತವರೂರು ಆಗಿದೆ. ಹಾಗೆಯೇ 139 ಬಗೆಯ ಸಸ್ತನಿಗಳು, 508 ಪ್ರಭೇದದ ಪಕ್ಷಿಗಳು ಮತ್ತು 179 ಉಭಯವಾಸಿಗಳಿಗೆ ನೆಲೆಯಾಗಿದೆ. ವಿಶ್ವದಲ್ಲಿ ಅಳಿವಿನಂಚಿನಲ್ಲಿರುವ ಜೀವಿಗಳು ಸಹ ಪಶ್ಚಿಮಘಟ್ಟಗಳಲ್ಲಿ ನೆಲೆಸಿವೆ. ನಾಲ್ಕು ಬಗೆಯ ಅರಣ್ಯ ವಲಯಗಳನ್ನು ಇಲ್ಲಿ ನೋಡಬಹುದಾಗಿದೆ ಯಾವುದೆಂದರೆ ಉತ್ತರ – ಪಶ್ಚಿಮ ಘಟ್ಟಗಳ ಎಲೆ ಉದುರಿಸುವ ಕಾಡುಗಳು, ಮಳೆಕಾಡುಗಳು, ದಕ್ಷಿಣ – ಪಶ್ಚಿಮ ಎಲೆ ಉದುರಿಸುವ ಕಾಡುಗಳು ಹಾಗೂ ದಕ್ಷಿಣ – ಪಶ್ಚಿಮ ಮಳೆಕಾಡುಗಳು. ಇನ್ನು ಹೆಚ್ಚಿನ ಎತ್ತರದಲ್ಲಿನ ಭಾಗದಲ್ಲಿ ಸದಾ ಹಸಿರಿನ ಕಾಡುಗಳಿದ್ದು ( Evergreen forest) ಲಾರೆಸಿ ( Lauraceae), ರುಬಿಯೇಸಿ ( Rubiaceae), ಮೊರೆಸಿ (Moraceae) ಕುಟುಂಬಕ್ಕೆ ಸೇರಿದ ಮರಗಳು ಹೆಚ್ಚಾಗಿ ಕಾಣಬರುತ್ತದೆ.

ಜಗತ್ತಿನ ಬೇರೆ ಯಾವ ಭಾಗಗಳಲ್ಲೂ ಕಾಣದ ಸುಮಾರು 84 ಜಾತಿಯ ದ್ವಿಚರಿಗಳು, 16 ಪಕ್ಷಿಗಳು, 7 ಸಸ್ತನಿಗಳು ಪಶ್ಚಿಮ ಘಟ್ಟದಲ್ಲಿ ನೋಡಬಹುದಾಗಿದೆ. ಇಂತಹ ಸಂಪತ್ತನ್ನು ಹೊಂದಿರುವ ಶ್ರೇಣಿಯನ್ನು ಸಂರಕ್ಷಿಸುವ ಸಲುವಾಗಿ ಭಾರತ ದೇಶವು ಅನೇಕ ಕ್ರಮಗಳನ್ನು ಕೈಗೊಂಡಿದೆ. ಅದರಂತೆಯೇ ಸುಮಾರು 13 ರಾಷ್ಟ್ರೀಯ ಉದ್ಯಾನವನಗಳು, ರಕ್ಷಿತ ಅರಣ್ಯಗಳು, ವನ್ಯಜೀವಿ ಧಾಮಗಳನ್ನು ರಚಿಸಲಾಗಿದೆ. ಪಶ್ಚಿಮ ಘಟ್ಟ ಸಾವಿರಾರು ಪ್ರಾಣಿ ಪಕ್ಷಿಗಳ ನೆಲೆಯಾಗಿದ್ದು ಜಾಗತಿಕವಾಗಿ  ವಿನಾಶದ ಅಂಚಿನಲ್ಲಿರುವ ಪ್ರಾಣಿಗಳನ್ನು ಸಹ ಒಳಗೊಂಡಿದೆ.      

ಸಹ್ಯಾದ್ರಿ ಕಾಡಿನಲ್ಲಿ ಹಲವಾರು ಔಷದೀಯ ಗುಣಗಳಿರುವ ಸಸ್ಯಗಳನ್ನು ಕಾಣಬಹುದು ಅದನ್ನು ಬಳಸಿ ವಿವಿಧ ಗಿಡಮೂಲಿಕೆಗಳನ್ನು  ಅರಣ್ಯ ವಾಸಿಗಳು ತಯಾರಿಸುತ್ತಾರೆ ಹಾಗೂ ಅದನ್ನು ಹಲವಾರು ಕಾಯಿಲೆಗಳಿಗೆ ಮದ್ಧಾಗಿ ಬಳಸುತ್ತಾರೆ. ಅಷ್ಟಲ್ಲದೆ ನಮ್ಮ ದೇಶದಲ್ಲಿ ಆಯುರ್ವೇದ ಔಷಧ ಪದತ್ತಿಯು ಬಹಳ ಪ್ರಾಚೀನ ಕಾಲದಿಂದಲೂ ಅನುಸರಿಸುತ್ತ ಬಂದಿದೆ. ಔಷಧಿ ಸಸ್ಯಗಳ ತೊಗಟೆ, ಬೇರು, ನಾರು, ಎಲೆ, ಹೂ, ಹಣ್ಣು ಮುಂತಾದವನ್ನು ಬಳಸಿ ಗಿಡಮೂಲಿಕೆಗಳನ್ನು ತಯಾರಿಸುತ್ತಾರೆ. ಅದು ಎಷ್ಟೋ ಕಾಯಿಲೆಗಳಿಗೆ ರಾಮಬಾಣವಾಗಿದೆ. ಆಯುರ್ವೇದ ಪದ್ಧತಿಯ ಪಿತಾಮಹರಾದ ಶುಶೃತ ಮತ್ತು ಚರಕರು ಸಂಸ್ಕೃತದಲ್ಲಿ ಬರೆದಿರುವ ಪುಸ್ತಕದಲ್ಲಿ ಅಂದಾಜು 700 ಔಷದೀಯ ಗುಣಗಳಿರುವ ಸಸ್ಯವನ್ನು ಹೆಸರಿಸಿದ್ದಾರೆ. ಇಂತಹ ಮಹತ್ವದ ಬರವಣಿಗೆಗಳನ್ನು ಇಟ್ಟುಕೊಂಡು ಕೆಲವು ಪಶ್ಚಿಮ ಘಟ್ಟಗಳಲ್ಲಿ ಸಿಗುವ ನೈಸರ್ಗಿಕ ಗುಣಗಳನ್ನು ಹೊಂದಿರುವ ಸಸ್ಯಗಳನ್ನು ಕುರಿತು ಪರಿಚಯ ಮಾಡಬಯಸುತ್ತೇನೆ.

  1. ವೈಜ್ಞಾನಿಕ ಹೆಸರು: ಅಪೋರೋಸಾ ಲಿಂಡ್ಲಿಯಾನ (Aporosa lindleyana)  

ಕುಟುಂಬ: ಯುಫೋರ್ಬಿಯೇಸಿ( Euphorbiaceae)

ಕನ್ನಡ ಹೆಸರು: ಸರಳಿ ಮರ

ಅಪೋರೋಸ ಸುಮಾರು 15 ಮಿ ಎತ್ತರ ಬೆಳೆಯುವ ಯುಫೋರ್ಬಿಯೇಸಿ ಪರಿವಾರಕ್ಕೆ ಸೇರಿದ ಮರವಾಗಿದೆ.

ಎಲೆಗಳು ಸಾಮಾನ್ಯ ಹಸಿರಾಗಿದ್ದು ಅದರ ತೊಟ್ಟು ದಪ್ಪವಾಗಿರುತ್ತದೆ. ಇದರ ಪುಷ್ಪ ವಿನ್ಯಾಸವನ್ನು ಕಂಡರೆ ಗಂಡು ಹೂಗಳು ತುದಿಯಲ್ಲಿ ಹಾಗೂ ತೂಗು ಪುಷ್ಪ ಮಂಜರಿಯಲ್ಲಿ (catkin) ಹಾಗು ಹೆಣ್ಣು ಹೂಗಳು ಸೀಮಾಕ್ಷ ಪುಷ್ಪ ಮಂಜರಿಯಲ್ಲಿ (cymose) ಕಾಣ ಸಿಗುತ್ತದೆ. ಇದರ ಹಣ್ಣುಗಳನ್ನು ಕ್ಯಾಪ್ಸೂಲ್ ಎಂದು ಕರೆಯುತ್ತಾರೆ. ಇಂತಹ ಮರಗಳನ್ನು ಪಶ್ಚಿಮ ಘಟ್ಟ ಹಾಗೂ ಶ್ರೀಲಂಕಾದ ದಟ್ಟ ಕಾಡುಗಳಲ್ಲಿ ನೋಡಬಹುದು.

ಉಪಯೋಗಗಳು:

  1. ಬೇರುಗಳ ಕಷಾಯವನ್ನು ಜ್ವರ ಮತ್ತು ಚರ್ಮ ಕಾಯಿಲೆಗಳಿಗೆ ಬಳಸುತ್ತಾರೆ.
  2. ಹಣ್ಣುಗಳನ್ನು ತಿನ್ನಬಹುದು ಹಾಗೂ ಅದರಲ್ಲಿ Vit-C ಹೇರಳವಾಗಿರುತ್ತದೆ.
  3. ತೊಗಟೆಯ ಕಷಾಯವನ್ನು ಹೊಟ್ಟೆ ನೋವಿಗೆ ಬಳಸುತ್ತಾರೆ  

 

  • ವೈಜ್ಞಾನಿಕ ಹೆಸರು: ಆರ್ಟೋಕಾರ್ಪಸ್ ಗೊಮೆಜಿಯಾನಸ್( Artocarpus gomezianus)

ಕುಟುಂಬ: ಮೋರೆಸಿ ( Moraceae )

ಕನ್ನಡ ಹೆಸರು: ವಾಟೆ ಹುಳಿ

ಇಂಗ್ಲಿಷ್ ಹೆಸರು: ಮಂಕಿ ಜಾಕ್( Monkey jack )

ಸಂಸ್ಕೃತ ಹೆಸರು: ದಾಹು

ವಾಟೆ ಹುಳಿ ಮರವು ಸದಾ ಹಸಿರು ಕಾಡುಗಳಲ್ಲಿ ಬೆಳೆಯುವ ಹಲಸಿನ ಜಾತಿಗೆ ಸೇರಿದ ಒಂದು ಮರವಾಗಿದೆ. ಇದರ ಎತ್ತರ ಸುಮಾರು 35 ಮೀ ಇದ್ದು ಇದರ ಎಲೆಗಳು ಸಾಮಾನ್ಯ, ಎಲೆಗಳ ಜೋಡಣೆಯ ಕ್ರಮ ಅಕ್ಕ – ಪಕ್ಕ ವಾಗಿರುತ್ತದೆ. ಇದರ ಪುಷ್ಪ ವಿನ್ಯಾಸದಲ್ಲಿ, ಗಂಡು ಹೂಗಳು ಗೊಂಡೆ (Head) ವಿನ್ಯಾಸದಲ್ಲಿ ಹಾಗೂ ಹೆಣ್ಣು ಹೂಗಳು ಮತ್ತೊಂದು ಗೊಂಡೆ ಪುಷ್ಪ ವಿನ್ಯಾಸದಲ್ಲಿ ನೋಡಬಹುದಾಗಿದೆ. ಇದರ ಹಣ್ಣುಗಳನ್ನು ಸೋರೋಸಿಸ್ ಎಂದು ಕರೆಯುತ್ತಾರೆ. ಈ ಮರವು ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಸಿಗುವ ಒಂದು ಅಪರೂಪದ ಮರವಾಗಿದೆ.

ಉಪಯೋಗಗಳು:

  1. ಇದರ ಹಣ್ಣುಗಳನ್ನು ಸಣ್ಣದಾಗಿ ಹೆಚ್ಚಿ ಬಿಸಿಲಿನಲ್ಲಿ ಒಣಗಿಸಿ, ಪುಡಿಮಾಡಿ ಅದನ್ನು ಹುಳಿಯ ಪದಾರ್ಥವಾಗಿ ಅಡುಗೆಗೆ ಬಳಸುತ್ತಾರೆ.
  2. ತೊಗಟೆಯನ್ನು ಚೆನ್ನಾಗಿ ಒಣಗಿಸಿ, ಪುಡಿಮಾಡಿ ಹಸುವಿನ ಹಾಲಿನಲ್ಲಿ ಬೆರೆಸಿ ಹರ್ಪಿಸ್ಗೆ ಲೇಪನ ಮಾಡುತ್ತಾರೆ.
  3. ತೊಗಟೆಯ ಕಷಾಯವನ್ನು ಜೆಂತು ಹುಳುವಿನ ನಿವಾರಣೆಗೆ ಬಳಸುತ್ತಾರೆ.

 

 

 

 

 

ಕ.ಸಾ.ಪ. ಮಾಜಿ ಅಧ್ಯಕ್ಷರಾದ ಮೇಜರ್ ಡಿ.ಚಂದ್ರಪ್ಪ ಇನ್ನಿಲ್ಲ

Publicstory


ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ಪ್ರೊ.ಮೇಜರ್ ಡಿ.ಚಂದ್ರಪ್ಪ (76ವರ್ಷ) ಅವರು ಇಂದು ಮಧ್ಯಾಹ್ನ 2 ಗಂಟೆಯಲ್ಲಿ ನಿಧನ ಹೊಂದಿದರು.

ಚಂದ್ರಪ್ಪ ಅವರು ಕಳೆದ ಒಂದು ವಾರದಿಂದ ಅನಾರೋಗ್ಯ ಕ್ಕೆ ತುತ್ತಾಗಿ ಸಿದ್ಧಗಂಗಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ.

ಮೇಜರ್ ಡಿ.ಚಂದ್ರಪ್ಪ ಅವರು ತಮ್ಮ ಅಧ್ಯಾಪಕ ವೃತ್ತಿಯಿಂದ ನಿವೃತ್ತಿ ಹೊಂದಿದ ನಂತರ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಕಳೆದ ಎರಡು ಕ.ಸಾ.ಪ.ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಚಟುವಟಿಕೆ ಯಿಂದಲೇ ಇದ್ದ ಚಂದ್ರಪ್ರನವರು ಕಳೆದ ವಾರ ತೀವ್ರ ಅನಾರೋಗ್ಯ ಕ್ಕೆ ತುತ್ತಾಗಿ ಆಸ್ಪತ್ರೆ ಗೆ ದಾಖಲಾಗಿದ್ದರು.

ಮೃತರು ಮೂವರು ಹೆಣ್ಣು ಮಕ್ಕಳು, ಪತ್ನಿ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಾಳೆ ಅಂತ್ಯಕ್ರಿಯೆ :- ಗುಬ್ಬಿ ತಾಲ್ಲೂಕಿನ ತಿಪ್ಪೂರು ಪಾಳ್ಯದ ಅವರ ತೋಟದಲ್ಲಿ ನಾಳೆ (ಜೂನ್ 9) ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಸಾಗರ ದಿನದ ನೆನಪಿನಲ್ಲಿ

0

ಡಾ. ರಜನಿ ಎಂ

ಸಮುದ್ರ / ಸಾಗರ ದಿನ ಸಾಗರ ದಿನವನ್ನು ಜೂನ್ 8 ಆಚರಿಸುತ್ತಾರೆ. ಜಲ ಸಂಪತ್ತು , ಜಲ ಮಾಲಿನ್ಯ ತಡೆಯುವಿಕೆ ಇತ್ಯಾದಿ ಇದರ ಉದ್ದೇಶ. ಆದಾಗ್ಯೂ, ಕವಿ ಮನಸ್ಸಿನವರಿಗೆ ಸಾಗರ ಬೇರೆಯದೇ ಭಾವ .

ಸಾಗರ


ನೀನು ಸಾಗರದಂತೆ..
ನನ್ನೆಡೆಗೆ
ಒಮ್ಮೆ ಚಿಪ್ಪು
ಇನ್ನೊಮ್ಮೆ ಮುತ್ತು.
ಶಂಖು … ಕಸ .. ಏನನ್ನು
ಎಸೆಯುವೆ ಎಂದು
ಎಸೆದಾಗಲೇ
ಗೊತ್ತಾಗುವುದು.

ನೀನು ಕೈ ಬೀಸಿ
ಕರೆದದ್ದಕ್ಕೆ…
ತಾನೇ
ನಾನು
ಬಂದದ್ದು.

ನಿನ್ನೊಂದಿಗೆ
ನನ್ನ ಕನಸುಗಳು…
ಸಮುದ್ರ ದಂಡೆಯ
ಮರಳ ಮೇಲೆ ಕಟ್ಟಿದ
ಮನೆಯಂತೆ.

ಸಮುದ್ರ


ನಿನ್ನಂತೆ …..
ಮತ್ತೆ ಮತ್ತೆ
ಕರೆಯುತ್ತದೆ
ನನ್ನನ್ನು .

ಬಗೆದಷ್ಟು
ಆಳ …
ನಿಲುಕದ್ದು…
ನಿನ್ನಂತೆ.

ಥೇಟ್ ನಿನ್ನಂತೆ
ಕಟ್ಟಾಕಲು
ಸಾಧ್ಯವಿಲ್ಲ.

ಬಾಗಿಲು ಲಾಕ್ ಮಾಡಿ 22 ಮೇಕೆ ಕದ್ದೊಯ್ದ ಖದೀಮರು

Publicstory


ಕೊರಟಗೆರೆ :- ತಾಲ್ಲೂಕಿನ ಬೋಡಬಂಡೇನಹಳ್ಳಿ ಗ್ರಾಮದ ರಮೇಶ್ ನಾಗರತ್ನಮ್ಮ ಎಂಬ ದಂಪತಿಗೆ ಸೇರಿದ 22 ಮೇಕೆಗಳನ್ನು ತಡರಾತ್ರಿ ಕಳ್ಳತನ ಮಾಡಲಾಗಿದೆ.

ಅಕ್ಕಪಕ್ಕದ ಮನೆಗಳ ಬಾಗಿಲುಗಳಿಗೆ ಬೀಗ ಹಾಕಿದ ಖದೀಮರು ಸುಮಾರು 3 ಲಕ್ಷ ಬೆಲೆಯ ಮೇಕೆಗಳನ್ನು ಕದ್ದು ಹೋಗಿದ್ದಾರೆ.

ಮೇಕೆಗಳ ಒಡತಿ ನಾಗರತ್ನಮ್ಮ ಮಾತನಾಡಿ :-

ಸಾಲವನ್ನು ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ನಮ್ಮ ಮುಂದಿನ ಭವಿಷ್ಯಕ್ಕೆ ಎಂದು 22ಮೇಕೆಗಳನ್ನು ಸಾಕಿದ್ದೆವು. ಆದರೆ ತಡರಾತ್ರಿ ಎಲ್ಲರೂ ಮಲಗಿದ ಸಮಯವನ್ನು ನೋಡಿದ ಕಳ್ಳರು 1ಮೇಕೆಯನ್ನು ಬಿಡದಂತೆ ಕದ್ದುಕೊಂಡು ಹೋಗಿದ್ದಾರೆ. ನಮ್ಮ ಜೀವನಕ್ಕೆ ಆಧಾರವಾಗಿದ್ದ ಮೇಕೆಗಳನ್ನು ನಮಗೆ ಹುಡುಕಿಸಿ ಕೊಡಿ ಎಂದು ಅಂಗಲಾಚಿದರು.

ಪಕ್ಕದ ಮನೆಯ ಯುವತಿ ಸಿಂಧು ಮಾತನಾಡಿ :- ರಾತ್ರಿ 11 ಗಂಟೆವರೆಗೂ ಎಲ್ಲರೂ ಮಾತನಾಡಿಕೊಂಡು ಹೊರಗಡೆಯೇ ಇದ್ದೆವು ತದನಂತರ ಮಲಗಲು ಒಳಹೋದಾಗ 1ಗಂಟೆ ಸುಮಾರಿಗೆ ಹೊರಗಿನಿಂದ ನಮ್ಮ ಮನೆಗಳ ಲಾಕ್ ಮಾಡಿದ್ದಾರೆ. ಹೊರಗಡೆ ಬರಬೇಕಾದರೆ ಬಾಗಿಲು ಓಪನ್ ಆಗಲಿಲ್ಲ. ಅಕ್ಕಪಕ್ಕದ ಮನೆಯವರಿಗೆ ಫೋನ್ ಮೂಲಕ ಮಾತನಾಡಿ ಡೋರ್ ಓಪನ್ ಮಾಡಿಸಿಕೊಂಡು ಹೊರಬಂದು ಏನಾಗಿದೆ ಎಂದು ನೋಡಿದಾಗ ಮೇಕೆಗಳನ್ನು ಕದ್ದುಕೊಂಡು ಹೋಗಿರುವುದು ನಮಗೆ ತಿಳಿಯಿತು ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ

0

Publicstory


ತಿಪಟೂರು : ನಗರದ ವಿನಾಯಕ ನಗರದಲ್ಲಿ ನ್ಯಾಯಾಧೀಶರ ನಿವಾಸದಲ್ಲಿ ಕಳ್ಳತನ ನಡೆದಿದ್ದು ಸೋಮವಾರ ರಾತ್ರಿ ಪ್ರಕರಣ ತಿಪಟೂರು ನಗರಠಾಣೆಯಲ್ಲಿ ದೂರು ದಾಖಲಾಗಿದೆ.

ತಿಪಟೂರು ನ್ಯಾಯಾಲಯದ ನ್ಯಾಯಾಧೀಶ ಚಂದನ್‍ರ ಕುಟುಂಬಸ್ಥರು ಮದುವೆಯ ಸಂಬಂಧ ಮೇ.24 ರಿಂದ ಜೂ.5ರವರಗೆ ಊರಿನಲ್ಲಿ ಇರುವುದಿಲ್ಲ.

ಇದನ್ನು ಗಮನಿಸಿದ ಕಳ್ಳರು ಹೊಂಚು ಹಾಕಿ ಹಿಂಭಾಗಿಲಿನಿಂದ ಬಂದು ಕಳ್ಳತನ ಮಾಡಿದ್ದು ಜೂ.6 ರಂದು ಸೋಮವಾರ ಮನೆಗೆ ಬಂದಾಗ ಅವರ ಗಮನಕ್ಕೆ ಬಂದಿದೆ. ಪ್ರಕರಣದಲ್ಲಿ ಕಳ್ಳರು ಮನೆಯಲ್ಲಿನ ಸಿಸಿ ಕ್ಯಾಮರದ ಡಿವಿಆರ್ ಕಳ್ಳತನ ಮಾಡಿದ್ದಾರೆ.

ಸುಮಾರು 1 ಲಕ್ಷ 11 ಸಾವಿರ ಮೌಲ್ಯದ ಕಳ್ಳತನ ನಡೆದಿದ್ದು 46 ಸಾವಿರ ನಗದು, 600 ಗ್ರಾಂ ಬೆಳ್ಳಿ ವಸ್ತುಗಳು, ಸಿಸಿ ಕ್ಯಾಮರಾದ ಡಿವಿಆರ್ ಕಳುವಾಗಿದೆ.