ರಾಜ್ಯಾದ್ಯಂತ ಪೊಲೀಸ್ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯದ ಏಳು ಸ್ಥಳಗಳಲ್ಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ತೆರೆಯಲಾಗುವುದು. ಪೊಲೀಸ್ ಕ್ಯಾಂಟೀನ್ ಕಲ್ಪಿಸಲಾಗಿದೆ. ವಿಶೇಷ ಗುಂಪು ಯೋಜನೆಯಡಿ 20 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕರ್ತವ್ಯದಲ್ಲಿ ಇರುವ ವೇಳೆ ಹುತಾತ್ಮರಾದ ಪೊಲೀಸರಿಗೆ 50 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಸಿಎಂ ತಿಳಿಸಿದರು.
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ? ಇಲ್ಲಿದೆ ಮಾಹಿತಿ
ತುಮಕೂರು: ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಭೀತಿ ಎದುರಾಗಿದೆ. ಮಳೆ ಕೊರತೆ ಹೀಗೆ ಮುಂದುವರೆದಲ್ಲಿ ಜಿಲ್ಲೆಯ ಸುಮಾರು 415 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದುದೆಂದು ಅಂದಾಜಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ನೀರಿನ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕೆ, ತಂದರು.
ಜಿಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಈಗಾಗಲೇ ಎಲ್ಲಾ ತಾಲ್ಲೂಕುಗಳ 186 ಕಾಮಗಾರಿಗಳಿಗೆ 360.75ಲಕ್ಷ ರೂ.ಗಳ ಕಾಂಟೆಜೆನ್ಸಿ ಕ್ರಿಯಾ ಯೋಜನೆ ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮಳೆ ಕೊರತೆ ಹೀಗೆ ಮುಂದುವರೆದಲ್ಲಿ ಜಿಲ್ಲೆಯ ಸುಮಾರು 415 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರು ಸಮಸ್ಯೆ ಬಾರದಂತೆ ಜಲಜೀವನ ಮಿಷನ್ ಯೋಜನೆಯಡಿ 881 ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನಲ್ಲಿ ಏಳನೇ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಡಾ. ರಾಘವೇಂದ್ರ ದೈಹಿಕ ಶಿಕ್ಷಕ ನಿರ್ದೇಶಕರು ಶೇಷಾದ್ರಿಪುರಂ ಪದವಿ ಕಾಲೇಜು ಮೈಸೂರು, ರಾಷ್ಟ್ರ ಪ್ರಶಸ್ತಿ ವಿಜೇತರು ಎನ್ಎಸ್ಎಸ್ ಕಾರ್ಯಕ್ರಮದ ಅಧಿಕಾರಿಗಳು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆ ಇರುವುದು ಬರೀ ಸ್ಪರ್ಧೆಗಾಗಿ ಅಲ್ಲ, ನಮ್ಮ ಆರೋಗ್ಯ ದೃಷ್ಟಿಯಿಂದ ಕೂಡ ಒಳ್ಳೆಯದು. ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಸದೃಢಗೋಳಿಸುತ್ತದೆ. ಮೊಬೈಲ್ ಬಳಕೆ ಕಡಿಮೆಮಾಡಿ ಎಂದು ಮಕ್ಕಳಿಗೆ ಸಲಹೆ ನೀಡಿದರು, ದೈಹಿಕ ಶ್ರಮ ವಹಿಸುವ ಕ್ರೀಡೆಗಳನ್ನು ಆಡಬೇಕು. ಮುಂದಿನ ಭವಿಷ್ಯಕ್ಕಾಗಿ ಸದೃಢ ಭಾರತಕ್ಕಾಗಿ ಸದೃಢ ಯುವಜನತೆ ಬೇಕು. ನೀವೆ ನಮ್ಮ ಭಾರತದ ಭವಿಷ್ಯ. ಪ್ರತಿ ದಿನ ಒಂದು ಗಂಟೆ ಕ್ರೀಡೆಗಾಗಿ ಮೀಸಲಿಡಿ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಸ್ವಾಮಿ ಕೆ ಟ್ರಸ್ಟಿ ಶೇಷಾದ್ರಿಪುರಂ ಎಜುಕೇಶನಲ್ ಟ್ರಸ್ಟ್ ಬೆಂಗಳೂರು ಇವರು ವಹಿಸಿದ್ದರು. ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಇವರು “ ಇರುವೆಗಿರುವ ಚೈತನ್ಯ ರೂಢಿಸಿಕೊಳ್ಳಬೇಕು” ಸದಾ ಕ್ರಿಯಾಶೀಲವಾಗಿರಬೇಕು. “sound mind in a sound body” ಕ್ರೀಡೆ, ಯೋಗದ ಪ್ರಯೋಜನ ಸಾಕಷ್ಟಿದೆ. ಜಗತ್ತಿಗೆ ಯೋಗವನ್ನು ಪರಿಚಯಿಸಿದ್ದು ಭಾರತೀಯರು. ಜಗತ್ತೆ ಯೋಗವನ್ನು ಪಾಲಿಸುವಾಗ, ನಾವೇಕೆ ಪಾಲಿಸಬಾರದು? ಎಂದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಶಶಾಂಕ್ ಎಂ ಗೋಪಾಲ್ ಟ್ರಸ್ಟಿ ಶೇಷಾದ್ರಿಪುರಂ ಎಜುಕೇಶನ್ ಟ್ರಸ್ಟ್ ಬೆಂಗಳೂರು ಇವರು ಆಗಮಿಸಿದ್ದರು.
ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿ ಕುಶಲ್ ಜಿ ಕೆ ರಾಷ್ಟ್ರೀಯ ಕಬ್ಬಡಿ ಆಟಗಾರರು ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ಜಿ ಟಿ ಹಾಗೂ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜು ಬಿ ವಿ ಉಪಸ್ಥಿತರಿದ್ದರು
ತುಮಕೂರು : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ಎನಲ್ಲಿ ಕ್ರಮ ಸಂಖ್ಯೆ 1(ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪವಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾ ಒಕ್ಕಲಿಗ, ದಾಸ್ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (Gouda)/ ಗೌಡ (Gowda), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡ, ನಾಮಧಾರಿಗೌಡ, ಉಪ್ಪಿನ ಕೊಳಗ ಉತ್ತಮ ಕೊಳಗ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ,
ಶೈಕ್ಷಣಿಕ ಸಾಲ ಯೋಜನೆ(Fresh Students), ಶೈಕ್ಷಣಿಕ ಸಾಲ ಯೋಜನೆ(Renewal), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(Fresh Students) ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯ ಒದಗಿಸಲಾಗುವುದು. ಈ ಯೋಜನೆಯಡಿ ಅರ್ಜಿ ಸಲ್ಲಿಸಬಯಸುವವರು ಸೇವಾಸಿಂಧು
ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
https://www.sevasindhu.karnat aka.gov.in)ಗ್ರಾಮ ಒನ್
(https://gramaone.karnataka.gov
.in) ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಕೌಶಲ್ಯ ತಂತ್ರಾಂಶ (https://www.kaushalkar.com) ಲ್ಲಿ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತುಮಕೂರು : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ಎನಲ್ಲಿ ಕ್ರಮ ಸಂಖ್ಯೆ 1(ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪವಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾ ಒಕ್ಕಲಿಗ, ದಾಸ್ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (Gouda)/ ಗೌಡ (Gowda), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡ, ನಾಮಧಾರಿಗೌಡ, ಉಪ್ಪಿನ ಕೊಳಗ ಉತ್ತಮ ಕೊಳಗ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ,
ಶೈಕ್ಷಣಿಕ ಸಾಲ ಯೋಜನೆ(Fresh Students), ಶೈಕ್ಷಣಿಕ ಸಾಲ ಯೋಜನೆ(Renewal), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(Fresh Students) ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯ ಒದಗಿಸಲಾಗುವುದು. ಈ ಯೋಜನೆಯಡಿ ಅರ್ಜಿ ಸಲ್ಲಿಸಬಯಸುವವರು ಸೇವಾಸಿಂಧು
ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
https://www.sevasindhu.karnat aka.gov.in)ಗ್ರಾಮ ಒನ್
(https://gramaone.karnataka.gov
.in) ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಕೌಶಲ್ಯ ತಂತ್ರಾಂಶ (https://www.kaushalkar.com) ಲ್ಲಿ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತುಮಕೂರಿನಲ್ಲಿ ವಿಜೃಂಭಣೆಯಿಂದ ದಸರಾ ಆಚರಣೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಸರಾ ಸಂಭ್ರಮ ಸಡಗರ ಆವರಿಸಿದೆ. ನಗರದ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ನಗರದ ವಿವಿಧ ಕಲಾತಂಡಗಳು ದಸರಾ
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರದರ್ಶನ ನೀಡುತ್ತಿವೆ. ಜಾನಪದ ಗೀತೆಗಳ ಗಾಯನ ಸ್ಪರ್ಧೆ,ಜಾನಪದ ನೃತ್ಯ, ನಾಟಕ ಪ್ರದರ್ಶನ ಹಾಗೂ ನಗರ ಗುಬ್ಬಿ ವೀರಣ್ಣ ಕಲಾ ಮಂದಿರದಲ್ಲಿ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ. ಹಾಸ್ಯ ಕಾರ್ಯಕ್ರಮ, ರಂಗೋಲಿ ಸ್ಪರ್ಧೆ ಭಜನಾ ಸ್ಪರ್ಧೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ನಗರದ ಲೇಖಕಿರಯರ ಸಂಘದ ಸದಸ್ಯರೂ ಸೇರಿದಂತೆ ದೌರ್ಜನ್ಯ ವಿರೋಧಿ ವೇದಿಕೆ, ಸಾಹಿತ್ಯ ಪರಿಷತ್ ಸದಸ್ಯರು ಎಲ್ಲರೂ ಪಾಲ್ಗೊಳ್ಳುವ ಮೂಲಕ ದಸರಾ ರಂಗೇರಿದೆ. ತುಕೂರು ದಸರಾವನ್ನು ಮಹೇಶ್ ಜೋಶಿ ನೆರವೇರಿಸಲಿದ್ದಾರೆ. ಪ್ರತಿದಿನ ಸಿಡಿಮದ್ದಿನ ಪ್ರದರ್ಶನವೂ ಇದೆ. ಎಂದಿನಂತೆ ಈ ವರ್ಷದ ದಸರವು ಕಳೆಗಟ್ಟಿದೆ.
ತುಮಕೂರು- ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ 47ನೇ ವರ್ಷದ ಗಣೇಶಮೂರ್ತಿಯನ್ನು ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ ಹಾಗೂ ಅದ್ದೂರಿ ತೆಪ್ಪೋತ್ಸವದೊಂದಿಗೆ ನಗರದ ಅಮಾನಿಕೆರೆಯಲ್ಲಿ ಸಂಜೆ ವಿಸರ್ಜಿಸಲಾಯಿತು.
ಗಣೇಶಮೂರ್ತಿ ವಿಸರ್ಜನೆ ಅಂಗವಾಗಿ ನಡೆದ ತೆಪ್ಪೋತ್ಸವ ನಡೆಯುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಗಣೇಶೋತ್ಸವದಲ್ಲಿ ಸಿದ್ದಿವಿನಾಯಕ ಸೇವಾ ಮಂಡಳಿಯ ಉಪಾಧ್ಯಕ್ಷ ಹೆಚ್.ಆರ್. ನಾಗೇಶ್, ಕಾರ್ಯದರ್ಶಿ ರಾಘವೇಂದ್ರರಾವ್, ಸಹಕಾರ್ಯದರ್ಶಿ ಜಗಜ್ಯೋತಿ ಸಿದ್ದರಾಮಯ್ಯ, ಖಜಾಂಚಿ ಪ್ರಭು, ಸಾಂಸ್ಕೃತಿಕ ಸಮಿತಿಯ ಟಿ.ಹೆಚ್. ಪ್ರಸನ್ನಕುಮಾರ್, , ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜಣ್ಣ, ಎನ್. ವೆಂಕಟೇಶ್ ಕಲ್ಪನ ಹಾಲಪ್ಪ, ನಿರ್ದೇಶಕರಾದ ಎಂ.ಲಿಂಗಪ್ಪ, ಜಿ.ಎಸ್.ಸಿದ್ದರಾಜು, ಕೆ.ನರಸಿಂಹಮೂರ್ತಿ, ಟಿ.ಆರ್ ನಟರಾಜು, ಟಿ.ಹೆಚ್.ಮಹೇಶ್, ಜಿ.ಸಿ.ವಿರುಪಾಕ್ಷ, ಡಾ.ಎಸ್.ವಿ.ವೆಂಕಟೇಶ್, ಹೇಮರಾಜು ಸಿಂಚ, ಎ.ಎಸ್.ವಿಜಯಕುಮಾರ್, ಟಿ.ಆರ್.ವೆಂಕಟೇಶ್ಬಾಬು, ಟಿ.ಕೆ.ಪದ್ಮರಾಜ್, ಎಂ.ಎನ್.ಉಮಾಶಂಕರ್, ಆರ್.ಎಲ್.ರಮೇಶ್ಬಾಬು, ಡಾ.ಅನುಸೂಯ ರುದ್ರಪ್ರಸಾದ್, ರೇಣುಕಾ ಪರಮೇಶ್, ಇಂದ್ರಾಣಿ ಮತ್ತಿತರರು ಉಪಸ್ಥಿತರಿದ್ದರು.
ಒಕ್ಕಲಿಗರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಪೊ. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮೈಸೂರು ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ.
ಭಗವಾನ್ ರಿಗೆ ಒಕ್ಕಲಿಗರ ಪೂರ್ಣ ಮಾಹಿತಿ ತಿಳಿಯಲು “ಕರ್ನಾಟಕ ಗೆಸೆಟಿಯರ್” ನಲ್ಲಿ ಓದಿ ತಿಳಿದುಕೊಳ್ಳಬೇಕು ಹಾಗೂ ಸಮಾದಲ್ಲಿ ಸ್ವಾಸ್ಥ್ಯ ಹಾಳು ಮಾಡು ಇಂತಹವರ ಮೇಲೆ ಕಾನೂನಾತ್ಮಕ ಕ್ರಮಕೈಗೊಳ್ಳಬೇಕೆಂದು ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದಲಿಂಗೇಗೌಡರು ಮೈಸೂರಿನ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕರ್ನಾಟಕ ಕನ್ನಡ ಪ್ರಕಾಶಕರ ಹಾಗೂ ಬರಹಗಾರರ ಸಂಘದ ಗೌರವ ಅಭಿನಂದನೆ
ಪುಸ್ತಕ ಎನ್ನುವುದು ಸಂಸ್ಕೃತಿಯ ಭಾಗವೇ ಹೊರತು ಮಾರಾಟದ ಸರಕಲ್ಲ ಎಂದು ಹಿರಿಯ ಸಾಹಿತಿ, ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾದ ಡಾ ಕರೀಗೌಡ ಬೀಚನಹಳ್ಳಿ ಅವರು ಅಭಿಪ್ರಾಯಪಟ್ಟರು.
ಕರ್ನಾಟಕ ಕನ್ನಡ ಬರಹಗಾರರ ಹಾಗೂ ಪ್ರಕಾಶಕರ ಸಂಘವು ಸಪ್ನ ಬುಕ್ ಹೌಸ್ ನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗೌರವ ಅಭಿನಂದನೆ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.
ಪುಸ್ತಕವನ್ನು ಕೇವಲ ಉದ್ಯಮವನ್ನಾಗಿ ಮಾತ್ರ ನೋಡದೆ ಅದನ್ನು ಸಂಸ್ಕೃತಿಯ ಭಾಗವಾಗಿ ನೋಡುವಂತೆ ಮಾಡಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ. ಅದಕ್ಕಾಗಿ ಪುಸ್ತಕದ ಗುಣಮಟ್ಟ, ಉತ್ಪಾದನೆಯ ಮೌಲ್ಯ ಹೆಚ್ಚುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ಕನ್ನಡ ಪ್ರಕಾಶಕರ ಹಾಗೂ ಬರಹಗಾರರ ಸಂಘದ ಬೇಡಿಕೆಗಳನ್ನು ಜಾರಿ ಮಾಡುವಲ್ಲಿ ಎಲ್ಲಾ ರೀತಿಯ ಪ್ರಯತ್ನವನ್ನೂ ಮಾಡಲಾಗುವುದು ಎಂದರು.
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಇಂದು ಬೆಂಗಳೂರಿನಲ್ಲಿ ರಾಜ್ಯ ಗ್ರಂಥಾಲಯ ಇಲಾಖೆಯ ಪುಸ್ತಕ ಆಯ್ಕೆ ಸಮಿತಿ ನೂತನ ಅಧ್ಯಕ್ಷರಾದ ಡಾ ಕರೀಗೌಡ ಬೀಚನಹಳ್ಳಿ ಅವರನ್ನು ಸನ್ಮಾನಿಸಿತು. (ಎಡದಿಂದ ಬಲಕ್ಕೆ) ಸಂಘದ ಕಾರ್ಯದರ್ಶಿ ಆರ್. ದೊಡ್ಡೆಗೌಡ, ವಿದ್ವಾಂಸರಾದ ಡಾ ಮಲ್ಲೇಪುರಂ ವೆಂಕಟೇಶ್, ಅಧ್ಯಕ್ಷರಾದ ನಿಡಸಾಲೆ ಪುಟ್ಟಸ್ವಾಮಯ್ಯ, ಚಿಂತಕ ರಾ ನಂ ಚಂದ್ರಶೇಖರ್ ಅವರು ಇದ್ದಾರೆ.
ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟ್ಟಸ್ವಾಮಯ್ಯ ಅವರು ಮಾತನಾಡಿ ಗ್ರಂಥಾಲಯಗಳಲ್ಲಿ ಹೊಸ ಪುಸ್ತಕಗಳನ್ನು ಸೇರ್ಪಡೆ ಮಾಡುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಪುಸ್ತಕ ಖರೀದಿಯಲ್ಲಿ ಆಗುತ್ತಿರುವ ವಿಳಂಬ. ಇದರೊಂದಿಗೆ ಪುಸ್ತಕ ಪ್ರಕಾಶನ ರಂಗ ಎದುರಿಸುತ್ತಿರುವ ಹಲವು ಸಮಸ್ಯೆಗಳತ್ತ ಸರಕಾರ ಗಮನ ಹರಿಸಬೇಕಾಗಿದೆ. ಪುಟಕ್ಕೆ 40 ಪೈಸೆ ನಿಗದಿಮಾಡಬೇಕೆನ್ನುವ ಮನವಿ ನೆನೆಗುದಿಗೆ ಬಿದ್ದಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಂಘದ ಕಾರ್ಯದರ್ಶಿಗಳಾದ ಆರ್ ದೊಡ್ಡೆಗೌಡ ಅವರು ಮಾತನಾಡಿ ಎರಡು ಮಹತ್ವದ ವಿಶ್ವವಿದ್ಯಾಲಯಗಳಲ್ಲಿ ಪ್ರಸಾರಾಂಗದ ನಿರ್ದೇಶಕ ಜವಾಬ್ದಾರಿಯನ್ನು ನಿರ್ವಹಿಸಿರುವ ಕರೀಗೌಡ ಬೀಚನಹಳ್ಳಿ ಅವರಿಗೆ ಪುಸ್ತಕೋದ್ಯಮದ ಪ್ರತೀ ಸಮಸ್ಯೆಯ ಅರಿವಿದೆ. ಕನ್ನಡ ಪುಸ್ತಕ ಉದ್ಯಮಕ್ಕೆ ಅವರು ಒಳ್ಳೆಯ ಭರವಸೆ ಎನ್ನುವ ಆಶಯವನ್ನು ವ್ಯಕ್ತಪಡಿಸಿದರು.
ವಿದ್ವಾಂಸರಾದ ಡಾ ಮಲ್ಲೇಪುರಂ ಜಿ ವೆಂಕಟೇಶ್, ಕಲಬುರ್ಗಿ ವಿವಿ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ ಎಚ್ ಟಿ ಪೋತೆ, ಕನ್ನಡ ಚಿಂತಕರಾದ ರಾ ನಂ ಚಂದ್ರಶೇಖರ್, ಡಾ ಚಂದ್ರಪ್ಪ, ಶ್ರೀಶೈಲ ನಾಗರಾಳ, ಪತ್ರಕರ್ತ ಜಿ ಎನ್ ಮೋಹನ್ ಹಾಗೂ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅದೊಂದು ಕೂಡು ಕುಟುಂಬ ಚೆನ್ನಾಗಿ ಓದುತ್ತಿದ್ದ ಆ ಹುಡುಗನನ್ನು ಕಂಡರೆ ಅವರ ಚಿಕ್ಕಪ್ಪನಿಗೆ ಇನ್ನಿಲ್ಲದ ಕೋಪ. ತನ್ನ
ತುಂಬಾ ಚೆಂದವಾಗಿ ಓದುತ್ತಿದ್ದಾರೆ ನನ್ನ ಮಕ್ಕಳು ಓದುವುದಿಲ್ಲ ಎಂಬುದು ತಮ್ಮನ ಕೊರಗು. ಹೀಗಾಗಿ ತನ್ನ ಅಣ್ಣನ ಮಗನಿಗೆ ಇನ್ನಿಲ್ಲದಂತೆ ಕಿರುಕುಳ ಕೊಡಲು ಆರಂಭಿಸಿದ ಚಿಕ್ಕಪ್ಪ.
ಚಿಕ್ಕಪ್ಪನ ಕಿರಿಕುಳವನ್ನು ತಾಳಲಾಗದೆ ಹಾಗೂ ಹೀಗೂ ಹಳ್ಳಿ ಹುಡುಗ 7 ತರಗತಿ ಪಾಸ್ ಆಗಿಬಿಟ್ಟ . ಮುಂದೆ ಶಿಕ್ಷಣಕ್ಕೆ ಸೇರಬೇಕೆಂದು ಎಷ್ಟೇ ಮನವಿ ಮಾಡಿದರು ಸಹ ಚಿಕ್ಕಪ್ಪ ಒಪ್ಪಲೇ ಇಲ್ಲ. ಚಿಕ್ಕಪ್ಪನಿಗೆ ಅಣ್ಣನ ಮಗ ಓದಲು ಇಷ್ಟ ಇರಲಿಲ್ಲ. ಮನೆ ಕೆಲಸ ಕೃಷಿ ಕೆಲಸ ಮಾಡಿ ಕೊಡುವಂತೆ ಒತ್ತಾಯ ಮಾಡತೊಡಗಿದ.
ದೊಡ್ಡಪ್ಪನ ಕಿರಿಕ್ಕೊಳಕ್ಕೆ ಹುಡುಗ ಸಹಿಸಲಾರದೆ ಊರು ಬಿಟ್ಟು ಓಡಿ ಹೋದ. ಏನು ಮಾಡಲೆಂದು ಗೊತ್ತಾಗದ ಹುಡುಗ ಊರೂರು ತಿರುಗಿದ.
ಕೊನೆಗೂ ಸಣ್ಣ ಪುಟ್ಟ ಕೆಲಸ ಮಾಡಿಕೊಂಡ. ಓದುವುದನ್ನು ಮಾತ್ರ ಬಿಡಲಿಲ್ಲ. ಅವನಿಗೆ ಸಾಂಪ್ರದಾಯಿಕ ಶಿಕ್ಷಣ ಸಿದ್ಧಿಸಲಿಲ್ಲ ಆದರೆ ಓದಿನ ಕಲೆ ಹತ್ತಿದ್ದು. ಸಿಕ್ಕಸಿಕ್ಕ ಪುಸ್ತಕಗಳನ್ನೆಲ್ಲ ಓದಿದ.
ಸಿಟಿಯಲ್ಲಿ ಸಿಕ್ಕ ಸಣ್ಣ ಸಣ್ಣಪುಟ್ಟ ಕೆಲಸಗಳನ್ನೆಲ್ಲ ಮಾಡಿದ. ಓದುವನಲ್ಲಿ ಅಗಾಧ ಬದಲಾವಣೆ ತಂದಿತು. ಯಾವುದೋ ಒಂದು ಫ್ಯಾಕ್ಟರಿಯನ್ನು ಸೇರಿದ. ಅಲ್ಲೇ ಕೆಲಸವನ್ನು ಸಹ ಕಲಿತ. ಓದಿನ ಕಾರಣದಿಂದಲೇ ಅವನಲ್ಲಿ ಕಿಚ್ಚು ಹತ್ತಿದ್ದು, ಒಂದು ಸಣ್ಣ ವ್ಯಾಪಾರ ಆರಂಭಿಸಿದ. ಅವನಿಂದ ದೊಡ್ಡ ವ್ಯಾಪಾರಿ. ಕೋಟಿ ಕೋಟಿ ಹಣವಂತ.
ನಮ್ಮನ್ನು ಯಾವುದು ಹುಡುಕಿಕೊಂಡು ಬರುವುದಿಲ್ಲ, ನಾವು ಹುಡುಕಿಕೊಂಡು ಹೋಗಬೇಕು. ನಮಗೆ ಯಾವುದು ಬಗ್ಗುವುದಿಲ್ಲ, ನಾವೇ ಬಗ್ಗಿಸಿಕೊಳ್ಳಬೇಕು. ಇದು ಅವನ ದುಡಿಮೆಯ ಮೂಲ ಮಂತ್ರ.
ದೊಡ್ಡಪ್ಪನ ಮಾತಿಗೆ ಮಣಿದಿದ್ದರೆ ನಾನು ಊರಿನಲ್ಲಿ ಕೂಲಿ ಕಾರ್ಮಿಕನಾಗುತ್ತಿದ್ದೆ. ಯಾವುದೇ ಪರಿಸ್ಥಿತಿಯಲ್ಲಿ ನಮ್ಮ ಕನಸನ್ನು ಬಿಟ್ಟುಕೊಡಬಾರದು. ಮನಸು ಮಾಡಿದರೆ ನಾವು ಅಂದುಕೊಂಡ ಡೆಸ್ಟಿನೇಷನ್ ತಲುಪಬಹುದು.