ತುಮಕೂರು/ಹಾಸನ: ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್ಆರ್ಸಿ ಕಾಯ್ದೆಗಳನ್ನು ವಿರೋಧಿಸಿ ಪ್ರಗತಿಪರ ನಾಗರಿಕ ಸಂಘಟನೆಗಳ ಒಕ್ಕೂಟದಿಂದ ಗುರುವಾರ ತುಮಕೂರು, ಹಾಸನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ತುಮಕೂರಿನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರೊಂದಿಗೆ ವಾಗ್ವಾದ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆ ಸಜ್ಜಾಗಿದ್ದ ಮುಖಂಡರನ್ನು ಸುತ್ತುವರಿದ ನೂರಾರು ಪೊಲೀಸರು ನಿಷೇಧಾಜ್ಞೆ ಜಾರಿಯಲ್ಲಿದೆ. ಹೀಗಾಗಿ ಪ್ರತಿಭಟನೆ ಅವಕಾಶ ನೀಡುವುದಿಲ್ಲ ಎಂದರು. ಇದಕ್ಕೆ ಪ್ರಗತಿಪರ ನಾಗರಿಕ ಸಂಘಟನೆಗಳ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆಗ ಪೊಲೀಸರಿಗೂ-ಮುಖಂಡರ ನಡುವೆ ವಾಗ್ವಾದ ನಡೆಯಿತು.

ಹಾಸನದಲ್ಲಿ ಸೇರಿದ್ದ ಪ್ರತಿಭಟನಾಕಾರರು
ಪೊಲೀಸರು ಸುತ್ತುವರಿಯುತ್ತಿದ್ದಂತೆಯೇ ಅಲ್ಲಲ್ಲಿ ಚದುರಿದಂತಿದ್ದ ಪ್ರತಿಭಟನಾಕಾರರು ಪೊಲೀಸರತ್ತ ಧಾವಿಸಿದರು. ಆಗ ಮೈಕ್ ಮೂಲಕ 144 ನಿಷೇಧಾಜ್ಞೆ ಜಾರಿಯಲ್ಲಿದೆ. ಗುಂಪು ಸೇರಬಾರದು ಎಂದು ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿ ಕಳಿಸಿದರು.
ಹಾಸನದಲ್ಲಿ ನಿಷೇಧಾಜ್ಞೆ ಉಲ್ಲಂಗಿಸಿ NRC CAA ವಿರೋಧಿಸಿ ಎಡಪಕ್ಷಗಳು ಮತ್ತು ಜಾತ್ಯಾತೀತ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಹಾಸನದಲ್ಲಿ ಸೇರಿದ್ದ ಪ್ರತಿಭಟನಾಕಾರರು
ತುಮಕೂರಿನಲ್ಲಿ ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್. ರಾಮಯ್ಯ, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಸ್ಲಂ ಜನಾಂದೋಲ ಸಂಚಾಲಕ ಎ.ನರಸಿಂಹಮೂರ್ತಿ, ಸಾಮಾಜಿಕ ಕಾರ್ಯಕರ್ತರಾದ ತಾಜುದ್ದೀನ್, ಅತೀಕ್ ಅಹಮದ್, ಸೈಯದ್ ಮುಜಪೀರ್, ಕರ್ನಾಟಕ ಪ್ರಾಂತ ಸಂಘದ ಸಹಸಂಚಾಲಕ ಬಿ.ಉಮೇಶ್, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಅವರನ್ನು ಪೊಲೀಸರು ಮಾತುಕತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಕರೆದೊಯ್ದರು.
ಎಎಸ್ಪಿ ನೇತೃತ್ವದಲ್ಲಿ ಮಾತುಕತೆ ನಡೆಯಿತು.

ತುಮಕೂರಿನಲ್ಲಿ ….
ಪ್ರತಿಭಟಟನೆ ನಮ್ಮ ಹಕ್ಕು ಅದನ್ನು ಹತ್ತಿಕ್ಕುವುದು ಸರಿಯಲ್ಲ. ಸಂವಿಧಾನಬದ್ದವಾಗಿರುವ ಪ್ರತಿಭಟನೆಯ ಹಕ್ಕನ್ನು ನಿಷೇಧಾಜ್ಞೆ ಜಾರಿಗೊಳಿಸಿ ಬೆದರಿಸಿರುವುದು ಖಂಡನೀಯ. ಪ್ರತಿಭಟನೆ ನಡೆಸಲು ನಮಗೆ ಅವಕಾಶ ನೀಡಬೇಕು ಎಂದು ನಾಯಕರು ಪಟ್ಟುಹಿಡಿದರು. ನಂತರ ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿಯಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿ ಅಂಗೀಕರಿಸಿ ಕಾಯ್ದೆಯನ್ನಾಗಿ ಜಾರಿಗೆ ತರಲು ಹೊರಟಿದೆ. ಸಿಎಎ-2019 ಕಾಯ್ದೆಯಂತೆ ಆಫ್ಘಾನಿಸ್ತಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ದಿಂದ ಬಂದಿರುವ ಅಲ್ಪಸಂಖ್ಯಾತರಾದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯದವರು ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಬಂದು ಕೇವಲ ಐದು ವರ್ಷ ನೆಲೆಸಿದ್ದರೆ ಅವರನ್ನು ಅಕ್ರಮ ವಲಸಿಗರೆಂದು ಪರಿಗಣಿಸದೆ ಪೌರತ್ವ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಆದಿವಾಸಿಗಳು, ದಲಿತರು, ಬಡವರು, ನಿರಾಶ್ರಿತರು, ದೊಡ್ಡ ಯೋಜನೆಗಳಿಂದ ಸ್ಥಳಾಂತರಗೊಂಡವರು, ವಲಸೆ ಕಾರ್ಮಿಕರು, ಅಲೆಮಾರಿಬುಡಕಟ್ಟು ಸಮುದಾಯಗಳು, ಕಳ್ಳಸಾಗಾಣಿಕೆಯಾದವರು, ಮದುವೆ ನಂತರ ಗಂಡನ ಮನೆಗೆ ಹೋದ ಮಹಿಳೆಯರು ಸೇರಿದಂತೆ ಇವರೆಲ್ಲರೂ ಎನ್.ಆರ್.ಸಿ. ಪೌರತ್ವದ ಆಧಾರಕ್ಕಾಗಿ ಬೇಕಾಗುವ 50 ವರ್ಷಗಳ ದಾಖಲೆಗಳನ್ನು ಪಡೆಯುವುದು ಕಷ್ಟಸಾಧ್ಯವೇ ಸರಿ ಎಂದು ತಿಳಿಸಲಾಗಿದೆ.
ಕೇಂದ್ರ ಸರ್ಕಾರದ ಈ ಕ್ರಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಸಂವಿಧಾನ ಆರ್ಟಿಕಲ್ 14 ಮತ್ತು 21ರ ಪ್ರಕಾರ ನೀಡಿರುವ ಸಮಾನತೆ ಹಕ್ಕನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಆದರೆ ಈಗ ಜಾರಿಗೊಳ್ಳುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿ ಕಾಯ್ದೆ ಮೂಲಭೂತ ಹಕ್ಕುಗಳು, ನೈಸರ್ಗಿಕ ಹಕ್ಕುಗಳು ಮತ್ತು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.
ಈಗಾಗಲೇ ಅಸ್ಸಾಂನಲ್ಲಿ ಎನ್ಆರ್ಸಿ ಯಿಂದ 19 ಲಕ್ಷ ಮಂದಿ ಪೌರತ್ವದಿಂದ ವಂಚಿತರಾಗಿದ್ದಾರೆ. ಇದೇ ದೇಶದಲ್ಲಿ ಹುಟ್ಟಿ ಬೆಳೆದು ಮರಣದ ಸಮೀಪದಲ್ಲಿರುವ ಜನರು ಪೌರತ್ವವನ್ನು ಸಾಬೀತುಪಡಿಸಲು ದಾಖಲೆಗಳಿಗಾಗಿ ಕಚೇರಿಗಳಿಗೆ ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದೆಯೂ ಇದೇ ಪರಿಸ್ಥಿತಿ ದೇಶಾದ್ಯಂತ ಉದ್ಭವವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಎ ಮತ್ತು ಎನ್ಆರ್ಎ ಕಾಯ್ದೆ ಜಾರಿಗೊಳಿಸಬಾರದೆಂದು ತಮ್ಮಲ್ಲಿ ಮನವಿ ಮಾಡುತ್ತೇವೆ ಎಂದು ಕೋರಿಕೊಂಡಿದ್ದಾರೆ.



ವಸ್ತು ಪ್ರದರ್ಶನದಲ್ಲಿ ರಾಜ್ಯದ 34 ಶೈಕ್ಷಣಿಕ ಜಿಲ್ಲೆಯಿಂದ 646 ಸ್ಪರ್ಧಾರ್ಥಿಗಳು ಭಾಗವಹಿಸಲಿದ್ದು, ಪಾರದರ್ಶಕವಾಗಿ ಸ್ಪರ್ಧೆ ಏರ್ಪಡಿಸಿ ತೀರ್ಪು ನೀಡಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಬೇಕು ಎಂದು ತಿಳಿಸಿದರು.ಕಾರ್ಯಕ್ರಮಕ್ಕೆ ಆಗಮಿಸುವ ಮಕ್ಕಳಿಗೆ ಸಿದ್ದಗಂಗಾ ಮಠದಲ್ಲಿ ಊಟ ಹಾಗೂ ವಸತಿಯ ವ್ಯವಸ್ಥೆ ಮಾಡಿರುವ ಬಗ್ಗೆ ಮಠದ ಆಡಳಿತಾಧಿಕಾರಿಗಳಿಂದ ಖಾತ್ರಿ ಪಡಿಸಿಕೊಂಡರು. ನಂತರ ಈ ಕಾರ್ಯಕ್ರಮಕ್ಕಾಗಿ ರಚನೆ ಮಾಡಿರುವ ವಿವಿಧ ಸಮಿತಿಯ ಸದಸ್ಯರು ತಮ್ಮ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಯಾಗುವಂತೆ ನೋಡಿಕೊಳ್ಳಿ ಎಂದು ಅವರು ತಿಳಿಸಿದರು.ಸಭೆಯಲ್ಲಿ ತುಮಕೂರು ಡಯಟ್ ಪ್ರಾಂಶುಪಾಲ ಬಸವರಾಜು, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ರಾಮಕೃಷ್ಣಯ್ಯ, ಹಿರಿಯ ಉಪನ್ಯಾಸಕ ಮಹೇಶ, ಶಿಕ್ಷಣಾಧಿಕಾರಿ ಅಶ್ವಥನಾರಾಯಣ, ಶಿಕ್ಷಣಾಧಿಕಾರಿ ಪ್ರಭುಸ್ವಾಮಿ, ಡಿವೈಎಸ್ಪಿ ಸೂರ್ಯ ನಾರಾಯಣ, ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥ್, ವಿಜ್ಞಾನ ಕೇಂದ್ರದ ಅಧ್ಯಕ್ಷ ಮರುಳಯ್ಯ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಬಿಇಒ, ಮಧುಗಿರಿ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಎಸ್.ಆರ್. ವೃಷಭೇಂದ್ರಪ್ಪ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್ ಸೇರಿದಂತೆ ಮತ್ತಿತರ ಶಿಕ್ಷಕರ ಸಂಘದ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.
ಗುಬ್ಬಿವೀರಣ್ಣ ಕಲಾಕ್ಷೇತ್ರಲ್ಲಿ ಕೇಂದ್ರೀಯ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ ಪೋಷಕರು ಸದಾ ಕಾಲ ಮಕ್ಕಳ ಜೊತೆಗೆ ಇರಲು ಸಾಧ್ಯವಿಲ್ಲ ಆದರೆ ಒಂದು ಉತ್ತಮ ಅಭ್ಯಾಸವನ್ನು ಮಕ್ಕಳಿಗೆ ಕಲಿಸಿದರೆ ಸದಾ ಕಾಲ ಮಕ್ಕಳ ಜೊತೆಗೆ ಇದ್ದು ಅವರಿಗೆ ಸಹಾಯ ಮಾಡುತ್ತದೆ ಹಾಗಾಗಿ ಮಕ್ಕಳ ಆಸಕ್ತಿಗನುಗುಣವಾಗಿ ಒಂದು ಉತ್ತಮ ಅಭ್ಯಾಸವನ್ನು ರೂಢಿಸಿ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.
ಪೋಷಕರು ಮಕ್ಕಳ ವ್ಯಕ್ತಿತ್ವದ ಕಡೆ ಗಮನಹರಿಸುವುದರ ಜೊತೆಗೆ ಮಕ್ಕಳು ಮಾತನಾಡುವ ಶೈಲಿ, ನಡವಳಿಕೆ ಸರಿಯಾದ ರೀತಿಯಲ್ಲಿರುವಂತೆ ಹೇಳಿಕೊಡಬೇಕು. ಮಕ್ಕಳ ನಡವಳಿಕೆಯಲ್ಲಿ ತಪ್ಪು ಕಂಡು ಬಂದರೆ ತಿದ್ದಿ ಬುದ್ದಿ ಹೇಳಬೇಕು ಎಂದರಲ್ಲದೆ ಮಕ್ಕಳಿಗೆ ಶ್ರದ್ಧೆ, ಸಮಯಪಾಲನೆ ಅರಿವು ಮೂಡಿಸಬೇಕು ಎಂದರು.ಸಮಾರಂಭದಲ್ಲಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಆರ್.ಎಂ.ಸೊಕಲ್ಲ, ವಿದ್ಯಾಲಯದ ಸಿಬ್ಬಂದಿ ಸೇರಿದಂತೆ ಮಕ್ಕಳು, ಪೋಷಕರು ಉಪಸ್ಥಿರಿದ್ದರು.

