Thursday, March 12, 2026
Google search engine
Home Blog Page 36

ಶಿರಾದಲ್ಲಿ ಸಿಹಿಯೂಟ, ಸಿಹಿ ಸಂಭ್ರಮ

0

ಸಿರಾ: ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಇಂದು ಹೊಸತನದೊಂದಿಗೆ ಸಡಗರ, ಸಂಭ್ರಮ ಮನೆ ಮಾಡಿತ್ತು. 2023-24ನೇ ಸಾಲಿನ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಬುಧವಾರದಿಂದ ಪುನರಾರಂಭಗೊಂಡಿದ್ದು, ಸಿಹಿಯೂಟದೊಂದಿಗೆ ಶಿಕ್ಷಕರು ಸೇರಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡರು.


ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯ ಸಂತಸದಲ್ಲಿದ್ದ ಮಕ್ಕಳು ಇಂದು ಶಾಲೆಗೆ ಹಾಜರಾಗಿ, ಗೆಳೆಯರ ಜತೆ ಕುಣಿದು, ಕುಪ್ಪಳಿಸಿದರು. ಶಾಲಾವರಣಕ್ಕೆ ಆಗಮಿಸಿದ ಎಲ್ಲಾ ಮಕ್ಕಳಿಗೂ ಗುಲಾಬಿ ನೀಡುವ ಮೂಲಕ ಶಿಕ್ಷಕರು ಸ್ವಾಗತಿಸಿ, ತಳಿರು-ತೋರಣ, ಹೂಗುಚ್ಛ ಹಾಗೂ ಸಿಹಿಯೂಟ ವಿತರಿಸಿ ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.
ತಾಲ್ಲೂಕಿನ ಗಾಣದಹುಣಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಗಂಗಾಧರ್, ಮುಖ್ಯ ಶಿಕ್ಷಕ ನರಸಿಂಹಮೂರ್ತಿ ಹಾಗೂ ಶಿಕ್ಷಕ ವೃಂದದವರು ಮಕ್ಕಳಿಗೆ ಬಲೂನುಗಳು ಹಾಗೂ ಗುಲಾಬಿ ಹೂ ಕೊಡುವ ಸ್ವಾಗತಿಸಿದ್ದು, ವಿಶೇಷವೆನಿಸಿತು.
ಕಳೆದ ಏ.10ರಿಂದ ಮಕ್ಕಳಿಗೆ ಬೇಸಿಗೆ ರಜೆ ನೀಡಲಾಗಿತ್ತು. ಶಿಕ್ಷಕರು ಕಳೆದ ಎರಡು ದಿನಗಳಿಂದ ಶಾಲಾ ಸ್ವಚ್ಛತೆ ನಡೆಸಿ, ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧತೆ ನಡೆಸಿ, ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ರೂಪಿಸಿದ್ದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶನದಂತೆ ಅಧಿಕೃತವಾಗಿ ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ಶಾಲೆಗೆ ಬಂದ ಮೊದಲ ದಿನವೇ ಪಾಯಸ, ಸಿಹಿ ವಿತರಣೆ, ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಿ, ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಂದ ವಿದ್ಯುಕ್ತವಾಗಿ ಚಾಲನೆ ದೊರೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ ಮಾತನಾಡಿ, ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಇಂದಿನಿಂದ ಪಾಠಪ್ರವಚನ ಪ್ರಾರಂಭವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಉತ್ತಮ ವಿದ್ಯಾರ್ಹತೆ ಹಾಗೂ ಕ್ರಿಯಾಶೀಲ ಶಿಕ್ಷಕರು ಇದ್ದು, ಒಂದನೇ ತರಗತಿಯಿಂದಲೇ ಇಂಗ್ಲೀಷ್ ಭಾಷೆಯನ್ನು ಬೋಧಿಸಲಾಗುತ್ತದೆ. ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಸಮೀಪದ ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಗಂಗಾಧರ್ ಮಾತನಾಡಿ, ಮಕ್ಕಳಿಗೆ ಪಾಠದ ಜತೆಗೆ ಆರೋಗ್ಯ ತಪಾಸಣೆ, ಪೌಷ್ಠಿಕ ಆಹಾರ, ಕೆನೆಭರಿತ ಹಾಲು, ಮೊಟ್ಟೆ ಸೇರಿದಂತೆ ವಿಟಮಿನ್ ಮಾತ್ರೆಗಳನ್ನು ನಿಯಮಿತವಾಗಿ ನೀಡುವ ಮೂಲಕ ಮಕ್ಕಳ ದೈಹಿಕ ಆರೋಗ್ಯವನ್ನೂ ಸಹ ಸುಧಾರಿಸಲಾಗುತ್ತದೆ. ಆದ್ದರಿಂದ 6 ರಿಂದ 14 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ತಪ್ಪದೇ ಶಾಲೆಗೆ ದಾಖಲಾಗುವಂತೆ ಕ್ರಮವಹಿಸಿ ಎಂದರು.
ಗಾಣದಹುಣಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 115 ಮಕ್ಕಳಲ್ಲಿ 75 ಮಕ್ಕಳು ಮೊದಲನೇ ದಿನವೇ ಶಾಲೆಗೆ ಹಾಜರಾಗಿ ಆಟವಾಡಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಲ್ಲಿ ಸಿದ್ಧಪಡಿಸಿದ್ದ ಪಾಯಸ, ಚಿತ್ರನ್ನ ಸೇವಿಸಿ, ಇಂದು ಗೈರುಹಾಜರಾದ ಮಕ್ಕಳ ಮನೆಗಳಿಗೆ ತೆರಳಿ ನಾಳೆಯಿಂದಲೇ ಶಾಲೆಗೆ ಹಾಜರಾಗುವಂತೆ ವಿದ್ಯಾರ್ಥಿ ಹಾಗೂ ಪೋಷಕರ ಮನವೊಲಿಸಲಾಯಿತು.
ದಾಖಲಾತಿ ಆಂದೋಲನ ಜಾಥಾವನ್ನು ಹಮ್ಮಿಕೊಂಡು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಕ್ಕಳೊಂದಿಗೆ ಸಂಚರಿಸಿ, ಶಿಕ್ಷಣದ ಮಹತ್ವವನ್ನು ಸಾರುವ ಹಾಡು ಹಾಡುತ್ತಾ, ಘೋಷಣೆಗಳನ್ನು ಕೂಗುತ್ತಾ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, 6 ರಿಂದ 14 ವರ್ಷದೊಳಗಿನ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲು ಮಾಡುವಂತೆ ಜಾಗೃತಿ ಮೂಡಿಸಲಾಯಿತು
ಈ ಸಂದರ್ಭದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನರಸಿಂಹಮೂರ್ತಿ, ಸಹಶಿಕ್ಷಕರಾದ ಮಹಮ್ಮದ್ ಗೌಸ್, ಷಂಷೀರ್ ಬೇಗ್, ಆರ್.ತಿಪ್ಪೇಸ್ವಾಮಿ, ಎಸ್ ಡಿ ಎಂ ಸಿ ಸದಸ್ಯರು ಹಾಗೂ ಹಲವು ಪೋಷಕರು ಹಾಜರಿದ್ದರು.

ಪೋಟೋ: ಶಿರಾ ತಾಲ್ಲೂಕಿನ ಗಾಣದಹುಣಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಪ್ರಯುಕ್ತ ಬುಧವಾರ ಮಕ್ಕಳಿಗೆ ಗುಲಾಬಿ ಹಾಗೂ ಬಲೂನ್ ಗಳನ್ನು ನೀಡುವ ಮೂಲಕ ಸ್ವಾಗತ ಕೋರಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಗಂಗಾಧರ್, ಬಿಐಈಆರ್ ಟಿ ದಶರಥಕುಮಾರ್, ಮುಖ್ಯ ಶಿಕ್ಷಕ ನರಸಿಂಹಮೂರ್ತಿ, ಮಹಮದ್ ಗೌಸ್, ಷಂಷೀರ್ ಬೇಗ್, ಆರ್.ತಿಪ್ಪೇಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.

ಊರಿಗೊಂದು ಸ್ಮಶಾನ: ಸುರೇಶಗೌಡರ ಗುರಿ

ತುಮಕೂರು: ಕ್ಷೇತ್ರದಲ್ಲಿ ಪ್ರತಿ ಗ್ರಾಮಕ್ಕೊಂದು ಸಾರ್ವಜನಿಕ ಸ್ಮಶಾನ ಸ್ಥಳ ಗುರುತಿಸುವಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶಗೌಡರು ಅಧಿಕಾರಿಗಳಿಗೆ ತಿಳಿಸಿದರು.

ಮಂಗಳವಾರ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಸ್ಮಶಾನ ಇಲ್ಲದೇ ಬಡಜನರು, ಪರಿಶಿಷ್ಟ ವರ್ಗದವರು ಪರದಾಡಬಾರದು. ವಿಧಾನ ಸಭಾ ಅಧಿವೇಶನದಲ್ಲಿ ಈ ಸಂಬಂಧ ಸರ್ಕಾರದ ಗಮ‌ನ ಸೆಳೆದು ಭೂಮಿ ಮಂಜೂರಾತಿಗೆ ಪ್ರಯತ್ನಿಸುವುದಾಗಿ ಹೇಳಿದರು.

ಅಯಾ ಗ್ರಾಮಗಳಲ್ಲಿ ಇರುವ ಗೋಮಾಳದ ಜಾಗವನ್ನು ಕೂಡಲೇ ಗುರುತಿಸಬೇಕು. ಈ ಜಾಗವನ್ನು ನಿವೇಶನವಾಗಿ ಪರಿವರ್ತನೆ ಮಾಡಿ ಪ್ರತಿ ಬಡವರಿಗೂ ನಿವೇಶನ ಹಂಚುವ ಯೋಜನೆ ರೂಪಿಸುವಂತೆ ಹೇಳಿದರು.

ಎಲ್ಲೂ ಕೂಡ ಪ್ಲೆಕ್ಸ್ ಗಳನ್ನು ಅಳವಡಿಸದಂತೆ ನೋಡಿಕೊಳ್ಳಬೇಕು. ಪ್ಲೆಕ್ಸ್ ಗಳಿಂದ ಅಂದ ಕೆಡುವುದಲ್ಲದೇ ಪರಿಸರಕ್ಕೂ ಮಾರಕ ಎಂದು ಎಚ್ಚರಿಸಿದರು.

ಶುದ್ಧ ಕುಡಿಯುವ ನೀರು ಪೂರೈಕೆಗೆ ಗಮನ ಕೊಡಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜನರೊಂದಿಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಇಗೋ ಬಂತು ಸಿಡಿಲು ಬಡಿತ ತಿಳಿಸುವ ಆ್ಯಪ್

0

ತುಮಕೂರು: ವಿಕೋಪದ ಸಂದರ್ಭದಲ್ಲಿ ನೆರವಾಗುವ ಉದ್ದೇಶದಿಂದ ಸಿಡಿಲು ಆ್ಯಪ್‍ಪರಿಚಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ಮುಂಗಾರು ಮಳೆ ಎದುರಿಸಲು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಆ್ಯಪ್ ಬಳಕೆದಾರ ಇರುವ ಜಾಗದಿಂದ ಎಷ್ಟು ಕಿ.ಮೀ. ಅಥವಾ ಮೀಟರ್ ದೂರದಲ್ಲಿ ಸಿಡಿಲು, ಗುಡುಗು ಕಂಡು ಬರುತ್ತಿದೆ ಎಂಬ ಅಪಾಯಗಳನ್ನು ಹಲವು ಬಣ್ಣಗಳಲ್ಲಿ ತಿಳಿಸುತ್ತದೆ. ಈ ಮೂನ್ಸೂಚನೆ ಅರಿತು ಪ್ರಕೃತಿ ವಿಕೋಪಗಳಿಂದ ಆಗುವ ನಷ್ಟವನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗಿದೆ. ಸಿಡಿಲು ಬಡಿಯುವ ಸಾಧ್ಯತೆಯನ್ನು ಶೇ. 95ರಷ್ಟು ನಿಖರವಾಗಿ ಈ ಆ್ಯಪ್ ತಿಳಿಸುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಿಆರ್‍ಇಡಿ ಸೇರಿದಂತೆ ಬಹಳಷ್ಟು ಕೆರೆಗಳಲ್ಲಿ ಸದ್ಯ ನೀರಿದೆ. ಮುಂದೆ ಮಳೆ ಬಂದಲ್ಲಿ ಶೀಘ್ರ ಭರ್ತಿಯಾಗುತ್ತವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರು, ತಮ್ಮ ವ್ಯಾಪ್ತಿಗೆ ಬರುವ ಜಿಲ್ಲೆಯ ಕೆರೆಗಳ ಸಾಮಥ್ರ್ಯ ಪರಿಶೀಲನೆಗೆ ಸಮೀಕ್ಷೆ ಕೈಗೊಳ್ಳಬೇಕು. ಕೆರೆಗಳು ಒಡೆಯದಂತೆ, ಕೆರೆಗಳ ಬಂಡ್‍ಗಳನ್ನು ಬಲಪಡಿಸುವುದು ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಕೆರೆಗಳ ಕೋಡಿ ಹಾಗೂ ನೀರು ಹರಿವ ಮಾರ್ಗಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು, ತಗ್ಗು ಪ್ರದೇಶದ ಮನೆಗಳಿಗೆ ಎಚ್ಚರಿಕೆ ನೀಡಬೇಕು, ಯಾವುದೇ ದುರಸ್ಥಿಯಿದ್ದಲ್ಲಿ ಪರಿಶೀಲಿಸಿ ದುರಸ್ತಿಗೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿ.ಡಿ.ಎಲ್.ಆರ್ ಸುಜಯ್ ಕುಮಾರ್, ಕೃಷಿ ಇಲಾಖೆಯ ಜಂಟಿ ನಿದೇಶಕರಾದ ರವಿ ಕೆ.ಹೆಚ್, ತುಮಕೂರು ತಾಲೂಕು ತಹಸೀಲ್ದಾರ್ ಸಿದ್ದೇಶ್, ಚಿಕ್ಕನಾಯಕನಹಳ್ಳಿ ತಾಲೂಕು ತಹಸೀಲ್ದಾರ್ ಅರ್ಚನಾ ತಹಸೀಲ್ದಾರ್ ಮೋಹನ್, ಸೇರಿದಂತೆ ಜಿಲ್ಲೆಯ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್‍ಗಳು, ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಕಾಶನ ರಂಗದ ಸಮಸ್ಯೆ ಪರಿಹಾರ: ಸಚಿವ ಮಧು ಬಂಗಾರಪ್ಪ ಭರವಸೆ

0

ಸಚಿವರ ಬಳಿಗೆ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನಿಯೋಗ

ಪ್ರಕಾಶನ ರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.

ಇಂದು ಬೆಂಗಳೂರಿನಲ್ಲಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ಪ್ರಕಾಶಕರ ನಿಯೋಗವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟಸ್ವಾಮಯ್ಯ, ಕಾರ್ಯದರ್ಶಿ ಆರ್ ದೊಡ್ಡೇಗೌಡ, ಹಿರಿಯ ಪ್ರಕಾಶಕರುಗಳಾದ ನಿತಿನ್ ಶಾ, ಜಿ ಎನ್ ಮೋಹನ್, ಮಾನಸ, ಬಿ ಕೆ ಸುರೇಶ್, ನಿಡಸಾಲೆ ವಿಜಯ್ ನಿಯೋಗದಲ್ಲಿದ್ದರು.

ಪ್ರಕಾಶನ ರಂಗ ಇತರ ರಾಜ್ಯಗಳಲ್ಲಿ ಉತ್ತಮ ಸ್ಥಿತಿಯಲ್ಲಿದ್ದು ಕರ್ನಾಟಕದಲ್ಲಿ ಕಳೆದ ಕೆಲವು ವರ್ಷಗಳಿಂದ ದುಸ್ಥಿತಿಯಲ್ಲಿರುವ ಬಗ್ಗೆ ನಾನು ತಿಳಿದಿದ್ದೇನೆ. ಈ ಸಮಸ್ಯೆಗಳನ್ನು ನಾನು ಅಧ್ಯಯನ ಮಾಡಿ ಕ್ರಮೇಣ ಓದು ಸಂಸ್ಕೃತಿಯನ್ನು ಬಲಪಡಿಸುವ ಈ ಮಹತ್ವವಾದ ಕ್ಷೇತ್ರಕ್ಕೆ ಆದ್ಯತೆಯ ಮೇಲೆ ಪರಿಹಾರ ಒದಗಿಸುತ್ತೇನೆ ಎಂದು ಅವರು ತಿಳಿಸಿದರು.

2020 ರಿಂದ ಮೂರು ವರ್ಷಗಳ ಪುಸ್ತಕಗಳನ್ನು ಖರೀದಿಸಿಲ್ಲ. ಇದರಿಂದಾಗಿ ರಾಜ್ಯದ ಎಲ್ಲೆಡೆ ಹೊಸ ಕೃತಿಗಳಿಂದ ಓದುಗರು ವಂಚಿತರಾಗಿದ್ದಾರೆ. ಬಿಬಿಎಂಪಿ ಗ್ರಂಥಾಲಯ ಕರ ಎಂದು 450 ಕೋಟಿ ರೂಗಳನ್ನು ಸಂಗ್ರಹಿಸಿದೆ. ಇದನ್ನು ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಿಲ್ಲ. ಇದರಿಂದಾಗಿ ಪ್ರಕಾಶನ ಉದ್ಯಮ ಕಂಗಾಲಾಗಿದೆ ಎಂದು ಪ್ರಕಾಶಕರ ಸಂಘ ಸಚಿವರ ಗಮನಕ್ಕೆ ತಂದಿತು.

ಪುಸ್ತಕ ಪ್ರಕಟನೆಯ ವೆಚ್ಚ ಇಂದು ಗಗನಕ್ಕೇರಿದೆ. ಆದರೆ ಸಗಟು ಖರೀದಿಯಲ್ಲಿ ಮಾತ್ರ ಹಳೆಯ ದರವನ್ನೇ ನಿಗದಿಪಡಿಸಿದ್ದಾರೆ. ಹೆಚ್ಚಿರುವ ಕಾಗದ, ಇಂಕು, ಮುದ್ರಣ ಬೆಲೆ, ಜಿ ಎಸ್ ಟಿ ಯಿಂದಾಗಿ ಪ್ರಕಾಶನ ರಂಗ ತತ್ತರಿಸಿದೆ. ಆದ್ದರಿಂದ ಒಂದು ಪುಟದ ಬೆಲೆಯನ್ನು ಇನ್ನೂ 40 ಪೈಸೆ ಹೆಚ್ಚಳ ಮಾಡಬೇಕು ಎಂದು ಸಂಘ ಮನವಿ ಮಾಡಿತು.

ಕನ್ನಡ ಪುಸ್ತಕಗಳನ್ನು ಖರೀದಿಸಲು ಈಗ ಮಂಡಿಸಲಿರುವ ಬಜೆಟ್ ನಲ್ಲಿ 25 ಕೋಟಿ ರೂಗಳನ್ನು ಮೀಸಲಿಡಬೇಕು ಎಂದು ಸಂಘ ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರನ್ನು ಸಂಘ ಸನ್ಮಾನಿಸಿತು.

PHOTO CAPTION

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನೇತೃತ್ವದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಸನ್ಮಾನಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು. ಪ್ರಕಾಶಕರ ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟಸ್ವಾಮಯ್ಯ, ಕಾರ್ಯದರ್ಶಿ ಆರ್ ದೊಡ್ಡೇಗೌಡ, ಹಿರಿಯ ಪ್ರಕಾಶಕರಾದ ನಿತಿನ್ ಶಾ ಅವರು ಉಪಸ್ಥಿತರಿದ್ದರು.

ಪ್ರಕಾಶನ ರಂಗದ ಸಮಸ್ಯೆ ಪರಿಹಾರ: ಸಚಿವ ಮಧು ಬಂಗಾರಪ್ಪ ಭರವಸೆ

ಸಚಿವರ ಬಳಿಗೆ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನಿಯೋಗ

ಪ್ರಕಾಶನ ರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.

ಇಂದು ಬೆಂಗಳೂರಿನಲ್ಲಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ಪ್ರಕಾಶಕರ ನಿಯೋಗವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟಸ್ವಾಮಯ್ಯ, ಕಾರ್ಯದರ್ಶಿ ಆರ್ ದೊಡ್ಡೇಗೌಡ, ಹಿರಿಯ ಪ್ರಕಾಶಕರುಗಳಾದ ನಿತಿನ್ ಶಾ, ಜಿ ಎನ್ ಮೋಹನ್, ಮಾನಸ, ಬಿ ಕೆ ಸುರೇಶ್, ನಿಡಸಾಲೆ ವಿಜಯ್ ನಿಯೋಗದಲ್ಲಿದ್ದರು.

ಪ್ರಕಾಶನ ರಂಗ ಇತರ ರಾಜ್ಯಗಳಲ್ಲಿ ಉತ್ತಮ ಸ್ಥಿತಿಯಲ್ಲಿದ್ದು ಕರ್ನಾಟಕದಲ್ಲಿ ಕಳೆದ ಕೆಲವು ವರ್ಷಗಳಿಂದ ದುಸ್ಥಿತಿಯಲ್ಲಿರುವ ಬಗ್ಗೆ ನಾನು ತಿಳಿದಿದ್ದೇನೆ. ಈ ಸಮಸ್ಯೆಗಳನ್ನು ನಾನು ಅಧ್ಯಯನ ಮಾಡಿ ಕ್ರಮೇಣ ಓದು ಸಂಸ್ಕೃತಿಯನ್ನು ಬಲಪಡಿಸುವ ಈ ಮಹತ್ವವಾದ ಕ್ಷೇತ್ರಕ್ಕೆ ಆದ್ಯತೆಯ ಮೇಲೆ ಪರಿಹಾರ ಒದಗಿಸುತ್ತೇನೆ ಎಂದು ಅವರು ತಿಳಿಸಿದರು.

2020 ರಿಂದ ಮೂರು ವರ್ಷಗಳ ಪುಸ್ತಕಗಳನ್ನು ಖರೀದಿಸಿಲ್ಲ. ಇದರಿಂದಾಗಿ ರಾಜ್ಯದ ಎಲ್ಲೆಡೆ ಹೊಸ ಕೃತಿಗಳಿಂದ ಓದುಗರು ವಂಚಿತರಾಗಿದ್ದಾರೆ. ಬಿಬಿಎಂಪಿ ಗ್ರಂಥಾಲಯ ಕರ ಎಂದು 450 ಕೋಟಿ ರೂಗಳನ್ನು ಸಂಗ್ರಹಿಸಿದೆ. ಇದನ್ನು ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಿಲ್ಲ. ಇದರಿಂದಾಗಿ ಪ್ರಕಾಶನ ಉದ್ಯಮ ಕಂಗಾಲಾಗಿದೆ ಎಂದು ಪ್ರಕಾಶಕರ ಸಂಘ ಸಚಿವರ ಗಮನಕ್ಕೆ ತಂದಿತು.

ಪುಸ್ತಕ ಪ್ರಕಟನೆಯ ವೆಚ್ಚ ಇಂದು ಗಗನಕ್ಕೇರಿದೆ. ಆದರೆ ಸಗಟು ಖರೀದಿಯಲ್ಲಿ ಮಾತ್ರ ಹಳೆಯ ದರವನ್ನೇ ನಿಗದಿಪಡಿಸಿದ್ದಾರೆ. ಹೆಚ್ಚಿರುವ ಕಾಗದ, ಇಂಕು, ಮುದ್ರಣ ಬೆಲೆ, ಜಿ ಎಸ್ ಟಿ ಯಿಂದಾಗಿ ಪ್ರಕಾಶನ ರಂಗ ತತ್ತರಿಸಿದೆ. ಆದ್ದರಿಂದ ಒಂದು ಪುಟದ ಬೆಲೆಯನ್ನು ಇನ್ನೂ 40 ಪೈಸೆ ಹೆಚ್ಚಳ ಮಾಡಬೇಕು ಎಂದು ಸಂಘ ಮನವಿ ಮಾಡಿತು.

ಕನ್ನಡ ಪುಸ್ತಕಗಳನ್ನು ಖರೀದಿಸಲು ಈಗ ಮಂಡಿಸಲಿರುವ ಬಜೆಟ್ ನಲ್ಲಿ 25 ಕೋಟಿ ರೂಗಳನ್ನು ಮೀಸಲಿಡಬೇಕು ಎಂದು ಸಂಘ ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರನ್ನು ಸಂಘ ಸನ್ಮಾನಿಸಿತು.

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನೇತೃತ್ವದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಸನ್ಮಾನಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು. ಪ್ರಕಾಶಕರ ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟಸ್ವಾಮಯ್ಯ, ಕಾರ್ಯದರ್ಶಿ ಆರ್ ದೊಡ್ಡೇಗೌಡ, ಹಿರಿಯ ಪ್ರಕಾಶಕರಾದ ನಿತಿನ್ ಶಾ ಅವರು ಉಪಸ್ಥಿತರಿದ್ದರು.

ಕ್ಲಾಸ್ ತೆಗೆದುಕೊಂಡ ಎಂ.ಟಿ.ಕೃಷ್ಣಪ್ಪ::ಸುಸ್ತಾದ ಅಧಿಕಾರಿಗಳು

0

ತುರುವೇಕೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲ ಯಂತ್ರಗಳಿದ್ದೂ ಡಯಾಲಿಸಿಸ್ ನಿಲ್ಲಿಸಲಾಗಿದ್ದು ರೋಗಿಗಳು ಡಯಾಲಿಸಿಸ್ ಮಾಡಿಸಲು ತುಮಕೂರಿಗೆ ಹೋಗುವಂತಾಗಿದೆ ಕೂಡಲೇ ಇದನ್ನು ಸರಿಪಡಿಸಿ ಇಲ್ಲಿಯೇ ಡಯಾಲಿಸಿಸ್ ಸೇವೆ ನೀಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ವೈದ್ಯಾಧಿಕಾರಿಗೆ ತಾಕೀತು ಮಾಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು

‘ಹೆರಿಗೆ ಮಾಡಲು 10ರಿಂದ 15 ಸಾವಿರ ಹಣ ನೀಡಬೇಕು ಇಲ್ಲವಾದರೆ ತಮ್ಮ ಖಾಸಗಿ ಆಸ್ಪತ್ರೆಗೆ ಕರೆಯಿಸಿಕೊಂಡು ಬಡವರಿಂದ ಹಣ ಕೀಳುತ್ತಿದ್ದಾರೆ ಎಂದು ಸಾರ್ವಜನಿಕರ ದೂರು ಇದೆ ಕೂಡಲೇ ಆಸ್ಪತ್ರೆಯ ವೈದ್ಯಾಧಿಕಾರಿ ಸಭೆ ಮಾಡಿ ಸರಿಪಡಿಸಿ ನಂತರ ನಾನು ಸಭೆಯನ್ನು ಮಾಡುತ್ತೇನೆ ನಾನು ವೈದ್ಯರನ್ನು ಬೈಯುವುದಿಲ್ಲ ಸರಿಯಾದ ತಮ್ಮ ಕರ್ತವ್ಯ ಮಾಡಬೇಕು ಮುಂದೆ ಈ ರೀತಿಯ ತಪ್ಪುಗಳಾಗದಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಪ್ರಿಯಾಗೆ ಸೂಚಿಸಿದರು.’

‘ತಾಲ್ಲೂಕಿನ ಮಾಯಸಂದ್ರದ ಟಿ.ಬಿ.ಕ್ರಾಸ್‍ನಿಂದ ಕ್ಷೇತ್ರದ ಗಡಿಯಾದ ಯಡಿಯೂರು ವರೆಗಿನ ಮಧ್ಯೆದಲ್ಲಿ ಬರುವ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿ ಗ್ರಾಮಸ್ಥರ ಓಡಾಟಕ್ಕೆ ಅನುಕೂಲವಾಗುವಂತೆ ಡಾಂಬರ್ ಹಾಕಿ ಎಂದು ಲೋಕಪಯೋಗಿ ಎಇಇ ಪ್ರಭಾಕರ್ಗೆ ಖಡಕ್ ಸೂಚನೆ ಕೊಟ್ಟರು.’

‘ತಾಲ್ಲೂಕಿನ ಕೆರೆಗಳನ್ನು ಮೀನುಗಾರಿಕೆ ನೀಡಿರುವ ಗುತ್ತಿಗೆಯನ್ನು ಮತ್ತೆ ಮರು ಗುತ್ತಿಗೆ ಮಾಡಬೇಕು. ಲಕ್ಷಾಂತರ ರೂಪಾಯಿಗಳ ಆದಾಯ ಬರುವಂತಹ ತಾಲ್ಲೂಕಿನ ಮಲ್ಲಾಘಟ್ಟ ಕೆರೆ ಟೆಂಡರ್ ಅನ್ನು ಕಡಿಮೆಗೆ ಟೆಂಡರ್ ನೀಡಿದ್ದು ಕೂಡಲೇ ರದ್ದು ಪಡಿಸಬೇಕು ನೀನು ಎಲ್ಲ ಕೆರೆಗಳಿಗಳಿಗೂ ಪಾಟ್ನರ್ ಹಾಗಿದ್ದೀಯಾ ಎಂಬುದು ಗೊತ್ತಿದೆ ಕೂಡಲೇ ಸರಿಪಡಿಸಬೇಕು ಎಂದು ಮೀನುಗಾರಿಗೆ ಇಲಾಕೆಯ ಸಹಾಯಕ ನಿರ್ದೇಶಕ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.’

‘ತಾಲ್ಲೂಕಿನಲ್ಲಿ 34 ಸಾವಿರ ಕೃಷಿಕರಿದ್ದು ಸಾವಿರಾರು ಎಫ್.ಐ.ಡಿ ಫೇಕ್ ಐಡಿ ಮಾಡಿಕೊಂಡು ಅಕ್ರಮವಾಗಿ ನ್ಯಾಪೆಡ್ಗೆ ರಾಗಿ ಬಿಟ್ಟು ಅಕ್ರಮ ಹಣ ಮಾಡಿದ್ದಾರೆ ಕೇವಲ 2 ಸಾವಿರ ರೂಪಾಯಿಗಳಿಗೆ ಪೇಕ್ ಐಡಿ ಮಾಡಿಕೊಟ್ಟಿದ್ದಾರೆ ಎಂಬ ಮಾಹಿತಿ ಇದೆ. ತಾಲ್ಲೂಕಿನಲ್ಲಿ ಎಷ್ಟು ಎಫ್.ಐ.ಡಿ ಇವೆ, ಎಷ್ಟು ಕ್ವಿಂಟಾಲ್ ಬೆಳೆ ಬೆಳೆದಿದ್ದಾರೆ ಎಂಬುದನ್ನು ಎಪಿಎಂಸಿಗೆ ತಿಳಿಸಬೇಕು. ನಮ್ಮ ತಾಲ್ಲೂಕಿನ ರೈತರಿಗೆ ಅನುಕೂಲವಾಗಲಿ ಬೇರೆ ಕಡೆಯಿಂದ ರಾಗಿ ತಂದು ಹಾಕಿ ಹಣ ಮಾಡುತ್ತಿದ್ದಾರೆ ಇನ್ನು ಮುಂದೆ ಈ ರೀತಿ ಹಾಗಬಾರದು ಎಂದು ಕೃಷಿ ಸಹಾಯಕ ನಿರ್ದೇಶಕಿ ಪೂಜಾ.ಬಿ ಗೆ ಸೂಚನೆ ನೀಡಿದರು.’

ಸಭೆಯಲ್ಲಿ ತಹಶೀಲ್ದಾರ್ ವೈ.ಎಂ. ರೇಣುಕುಮಾರ್, ತಾಲ್ಲೂಕು ಪಂಚಾಯಿತಿ ಇ.ಓ.ಸತೀಶ್ ಕುಮಾರ್, ಬೆಸ್ಕಾಂ ಎಇಇ ಚಂದ್ರಾನಾಯಕ್, ಜಿಲ್ಲಾ ಪಂಚಾಯಿತಿ ಎಇಇ ವಾಸುದೇವ್, ಬಿಇಓ ಎಸ್‍.ಕೆ.ಪದ್ಮನಾಭ, ತೋಟಗಾರಿಕೆ ಇಲಾಕೆ ಸಹಾಯಕ ನಿರ್ದೇಶಕ ಅಂಜನರೆಡ್ಡಿ, ಪಶು ಇಲಾಕೆ ಸಹಾಯಕ ನಿರ್ದೇಶಕ ಸದಾಶಿವಯ್ಯ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಇದ್ದರು.

ಶಾಲೆಗೆ ಬಂದ ಮಕ್ಕಳು ಕುಣಿದಾಡಿದರು…

ತುರುವೇಕೆರೆ: ತಾಲ್ಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 2023-24 ನೇ ಸಾಲಿನ ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವದ ಪೂರ್ವ ಸಿದ್ಧತಾ ಕಾರ್ಯ ಸೋಮವಾರ ಭರದಿಂದ ಸಾಗಿತು.

ಪ್ರತಿಯೊಂದು ಶಾಲೆಗಳಲ್ಲೂ ಶಿಕ್ಷಕರು, ಸಿಬ್ಬಂದಿಗಳು ಹಾಗು ಮಕ್ಕಳು ಶಾಲಾ ಆವರಣ, ಕೈ ತೋಟದ ಸ್ವಚ್ಛತಾ ಕಾರ್ಯ ಮಾಡಿದರು. ಬಿಸಿಯೂಟ ತಯಾರಿಸುವ ಕೊಠಡಿ, ಅಡುಗೆ ಪಾತ್ರೆಗಳು, ಆಹಾರ ಪದಾರ್ಥಗಳು, ಕುಡಿಯುವ ನೀರಿನ ಟ್ಯಾಂಕ್ಗಳನ್ನು ಹಾಗು ಶೌಚಾಲಯವನ್ನು ಶುಚಿಗೊಳಿಸಿದರು.

ಇದಾದ ಮೇಲೆ ಎಲ್ಲ ತರಗತಿ ಕೊಠಡಿಗಳ ದೂಳನ್ನು ಒಡೆದು ನೆಲವನ್ನು ಸ್ವಚ್ಛಗೊಳಿಸಿ ಕಟ್ಟಡಗಳ ಶಿಥಿಲಾವ್ಯವಸ್ಥೆಯ ರಿಪೇರಿ ಮಾಡಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಗ್ರಾಮಗಳಲ್ಲಿ ಫ್ಲೆಕ್ಸ್ ಮತ್ತು ಕರ ಪತ್ರ ಹಂಚುವ ಮೂಲಕ ಶಿಕ್ಷಕರು ಮತ್ತು ಮಕ್ಕಳು ಮನೆಮನೆ ದಾಖಲಾತಿ ಆಂದೋಲನ ನಡೆಸಿದರು.

ಆಯಾ ಶಾಲೆಗಳಲ್ಲಿ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಸೇರಿ ಸಭೆ ನಡೆಸಿ ಪ್ರಸಕ್ತ ಸಾಲಿನ ಶೈಕ್ಷಣಿಕ ಕಾರ್ಯಯೋಜನೆಗಳ ಬಗ್ಗೆ ಚಚರ್ಿಸಿದರು.

‘ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ ಕೆಲ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಪ್ರಾರಂಭೋತ್ಸವದ ಸಿದ್ಧತೆ, ದಾಖಲಾತಿ ಬಿಸಿಯೂಟದ ವ್ಯವಸ್ಥೆ, ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಯ ಸಿದ್ಧತೆ ಪರಿಶೀಲನೆ ನಡೆಸಿ ಶಿಕ್ಷಕರೊಂದಿಗೆ ಸಭೆ ನಡೆಸಿ ಕಳೆದ ಸಾಲಿನ ಫಲಿತಾಂಶದ ಪರಾಮಶರ್ೆ ಮಾಡಿ ಮುಂದಿನ ವರ್ಷದ ಫಲಿತಾಂಶ ಉತ್ತಮ ಪಡಿಸಿಕೊಳ್ಳಬೇಕೆಂದು ಸೂಚಿಸಿದರು.’

ವಕೀಲರಿಗಾಗಿ‌ ನನ್ನವೇ ಕನಸಿವೆ: ಕೆಂಪರಾಜು

ಸಂದರ್ಶನ: ರವಿಗೌಡ


ತುಮಕೂರು ವಕೀಲರ ಸಂಘದ ಚುನಾವಣೆಯ ಕಾವು ಜೋರಾಗಿದೆ. ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ವಕೀಲ ಕೆಂಪರಾಜಯ್ಯ ಅವರು ಎಲ್ಲರೊಂದಿಗೆ ಬೆರೆಯುವ ಸರಳ ಸ್ವಭಾವದವರು. ವಕೀಲರಿಗೆ ದನಿಯಾಗುವಲ್ಲಿ ಯಾವಾಗಲೂ ಮುಂದೆ ನಿಲ್ಲುವ ಅವರನ್ನು ಮತ್ತೊಬ್ಬ ಹಿರಿಯ ವಕೀಲರಾದ ರವಿ ಗೌಡ ಅವರು ಸಂದರ್ಶನ ಮಾಡಿದ್ದಾರೆ. ಸಂದರ್ಶನದ ಆಯ್ದ ಭಾಗ ಇಲ್ಲಿದೆ.

# ನಿಮ್ಮ‌ ಬಗ್ಗೆ ಸ್ವಲ್ಪ ಹೇಳಿ?

ನಾನು, 2003 ರಲ್ಲಿ ಕರ್ನಾಟಕ ರಾಜ್ಯ ವಕೀಲ ಪರಿಷತ್ ನಲ್ಲಿ ಎನ್ರೋಲ್ ಆಗಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದೆ. ಸರಿ ಸುಮಾರು 20 ವರ್ಷಗಳಿಂದ ತುಮಕೂರು ಜಿಲ್ಲಾ ವಕೀಲರ ಸಂಘದಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಾ, ಜಿಲ್ಲಾ ವಕೀಲ ಸಂಘದಲ್ಲಿ ಪ್ರತಿ ವರ್ಷ ನಡೆಯುವ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೆ ನಿಂತು ನಡೆಸಿಕೊಂಡು ಬಂದಿದ್ದೇನೆ.

# ವಕೀಲರಿಗಾಗಿ ಏನೆಲ್ಲ ಮಾಡಿದ್ದೀರಿ?

ಜಿಲ್ಲಾ ವಕೀಲ ಸಂಘದಲ್ಲಿ ವಕೀಲರ ವಿವಿಧೋದ್ದೇಶ ಸಹಕಾರ ಸಂಘವನ್ನು ಪ್ರಾರಂಭಿಸಲು ಸಹಕಾರ ನೀಡಿದ್ದು ನನ್ನ ತ್ರಯ ಮರೆಯಲಾರದ ನೆನಪು. ಇಂದು ವಕೀಲರ ವಿವಿದ್ಧೋದ್ದೇಶ ಸಹಕಾರ ಸಂಘ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅನೇಕರ ಸಂಕಷ್ಟಗಳಿಗೆ ಹೆಗಲಾಗಿರುವೆ.

ಯುವ ವಕೀಲರುಗಳ ಯಾವುದೇ ಸಮಸ್ಯೆಗಳಿದ್ದರೂ ಮುಂದೆ ನಿಂತು ಪರಿಹರಿಸಿ ಕೊಟ್ಟಿದ್ದೇನೆ‌. ನ್ಯಾಯಾಲಯ ಹಾಗೂ ಯುವ ವಕೀಲರ ಸಂಬಂಧ ಸುಧಾರಿಸುವಲ್ಲಿ ಅನೇಕ ರೀತಿಯಲ್ಲಿ ನೆರವಾಗಿರುವೆ. ಯಾವುದೇ ವಕೀಲರಿಗೆ ಸಮಸ್ಯೆ ಎದುರಾದಾಗ ಮುಂದೆ ನಿಂತಿದ್ದೇನೆ.

# ಈ ಸಲ ಚುನಾವಣೆಯಲ್ಲಿ ಗೆದ್ದರೆ ಏನೆಲ್ಲ ಮಾಡುತ್ತೀರಿ?

ವಕೀಲರ ಸಂಘದ ಕಟ್ಟಡವನ್ನು ಅತ್ಯಾಧುನಿಕಗೊಳಿಸಬೇಕಾಗಿದೆ. ವಕೀಲರು ತಮ್ಮ ಕಕ್ಷಿದಾರರೊಂದಿಗೆ ಚರ್ಚಿಸಲು ಬೇಕಾದ ಮುಕ್ತ ವಾತಾವರಣ/ ಸೌಲಭ್ಯವನ್ನು ಕಲ್ಪಿಸಿಕೊಡಬೇಕಾಗಿದೆ. ಆಧುನಿಕ ಸೌಲಭ್ಯ ಒದಗಿಸಬೇಕಾಗಿದೆ. ಪಾರ್ಕಿಂಗ್ ಸಮಸ್ಯೆ ಬಗೆಹರಿಸಬೇಕಾಗಿದೆ.

# ಮತ್ತೇ ಇನ್ನೇನು ಮಾಡುತ್ತೀರಿ?

ತುಮಕೂರು ವಕೀಲರ ಸಂಘಕ್ಕೆ ಒಂದು ದೊಡ್ಡ ಇತಿಹಾವಿದೆ. ಇಲ್ಲಿನ ವಕೀಲರ ವಕೀಲಿಕೆ ಬಗ್ಗೆ ಇಡೀ ರಾಜ್ಯದ ವಕೀಲತ ಸಮೂಹದಲ್ಲಿ ಗೌರವವಿದೆ. ಬಾರ್ ಅಂಡ್ ಬೆಂಚ್ ನಡುವೆ ಸಂಬಂಧ ಸೌಹಾರ್ದಗೊಳಿಸಬೇಕಾಗಿದೆ. ಯುವ ವಕೀಲರನ್ನು ಪ್ರೋತ್ಸಾಹಿಸುವಂಥಹ ವಾತಾವರಣ ಕೋರ್ಟ್ ಒಳಗೆ ಬೇಕಾಗಿದೆ. ವಕೀಲರಿಗೆ ಸೂಕ್ತ ಗೌರವ, ಮನ್ನಣೆ ಸಿಗುವಂಥ ವಾತಾವರಣ ನಿರ್ಮಿಸಲು ನ್ಗಾಯಾಧೀಶರು ಹಾಗೂ ವಕೀಲರೊಂದಿಗೆ ಕೊಂಡಿಯಂತೆ ಕೆಲಸ ನಿರ್ವಹಿಸುವ ಆಸೆ ಇದೆ.

# ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ಹೇಗೆ ತರುತ್ತೀರಿ?

ಜಿಲ್ಲೆಯ ಎಲ್ಲ ಪಕ್ಷಗಳ ಶಾಸಕರುಗಳೊಂದಿಗೆ ನನಗೆ ಉತ್ತಮ ಒಡನಾಟ, ಸಂಬಂಧವಿದೆ. ಸಚಿವರಾಗಿರುವ ಕೆ.ಎನ್.ರಾಜಣ್ಣ ಅವರು ಸಂಘದ ಹಿರಿಯ ಸದಸ್ಯರು. ಸಂಸದ ಜಿ.ಎಸ್.ಬಸವರಾಜು, ಶಾಸಕ ಟಿ.ಬಿ.ಜಯಚಂದ್ರ ಇವರೆಲ್ಲರೂ ಸಂಘದ ಸದಸ್ಯರೇ. ಇವರೆಲ್ಲರ ಸಹಕಾರ ಪಡೆಯುವೆ. ಈ ಸಂಬಂಧ ಬಳಸಿಕೊಂಡು ಸರ್ಕಾರದಿಂದ ಅನುದಾನ ತರಲು ಪ್ರಯತ್ನಪಡುವೆ. ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳ ಅನುಕೂಲ ಪಡೆದುಕೊಳ್ಳುವ ಬಗೆಯನ್ನು ಯೋಚಿಸುವೆ.

# ಗೆದ್ದರೆ ನಿಮ್ಮ ಮೊದಲ ಹೋರಾಟ ಯಾವುದು ಆಗಿರಲಿದೆ?

ಯುವ ವಕೀಲರಿಗೆ ಸರ್ಕಾರ ನೀಡುವ ತರಬೇತಿ ಭತ್ಯೆಗೆ ಸಂಖ್ಯೆಯನ್ನು ನಿಗದಿಪಡಿಸಬಾರದು. ಎಷ್ಟು ಜನ ವಕೀಲರು ಅರ್ಜಿ ಹಾಕುತ್ತಾರೋ ಅವರೆಲ್ಲರಿಗೂ ಶಿಷ್ಯ ವೇತನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರುವೆ. ಇದಕ್ಕಾಗಿ ವಕೀಲರ ಪರಿಷತ್, ವಕೀಲರ ಸಂಘಗಳ ನೆರವು ಯಾಚಿಸಲಾಗುವುದು.

ಪೊಲೀಸ್ ಠಾಣೆಗಳಲ್ಲಿ ವಕೀಲರಿಗೆ ಗೌರವ ಸಿಗುವ ವಾತಾವರಣ ನಿರ್ಮಾಣ ಮಾಡಲು ಪೊಲೀಸ್ ಇಲಾಖೆಯೊಂದಿಗೆ ಸೇರಿ ಒಂದು ಮಾರ್ಗ ದರ್ಶಿ ಸೂತ್ರ ರಚಿಸುವ ಯೋಚನೆ‌ ಇದೆ.

ಸುರೇಶಗೌಡರ ಭಾವನಾತ್ಮಕ ಮಾತು

0

ತುಮಕೂರು: ಕ್ಷೇತ್ರದಲ್ಲಿ ಸಮಬಾಳ್ವೆ, ಸಾಮರಸ್ಯದ ಬದುಕು ಹಾಗೂ ಇಡೀ ದೇಶವೇ ತಿರುಗಿ ನೋಡುವಂತೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದೇ ಮುಂದಿನ ಐದು ವರ್ಷಗಳ ಕಾಲದ ನಮ್ಮ ಗುರಿಯಾಗಿರಬೇಕು ಎಂದು ಶಾಸಕ ಬಿ.ಸುರೇಶಗೌಡರು ಹೇಳಿದರು.

ತುಮಕೂರು ತಾಲ್ಲೂಕು ಪಂಚಾಯತಿ
ಶಾಸಕರ ಕಚೇರಿ ಉದ್ಘಾಟಿಸಿ ಮಾತನಾಡಿದರು.

ನಾನು ಮಾಡಿದ ಅಭಿವೃದ್ಧಿಗಾಗಿ ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ನಂಬಿಕೆ ಹುಸಿಗೊಳಿಸದಂತೆ ಕೆಲಸ ಮಾಡಬೇಕಾಗಿದೆ ಎಂದು ಭಾವನಾತ್ಮಕ ಗೊಂಡರು.

ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಗಲಾಟೆ, ಗೋಜಿಗೆ ಹೋಗಬಾರದು. ಪ್ರತಿಯೊಬ್ಬರು ಸಹೋದರರಂತೆ ಇರಬೇಕು. ಈ ಕ್ಷೇತ್ರದ ಪ್ರತಿ ಮನೆಯ ಮಗ ನಾನು. ನಾನು ಎಲ್ಲರಿಗಾಗಿಯೂ ಕೆಲಸ ಮಾಡುವೆ. ಕಾಂಗ್ರೆಸ್, ಜೆಡಿಎಸ್ ನ ಸಾವಿರಾರು ಕಾರ್ಯಕರ್ತರೂ ಸಹ ನನಗೆ ಮತ ಹಾಕಿದ್ದಾರೆ. ನಿಮಗೆ ದುಃಖ, ನೋವು, ಸಮಸ್ಯೆ ಇದ್ದರೆ ನೇರ ನನ್ನಲ್ಲಿಗೆ ಬಂದು ಸಮಸ್ಯೆ ಬಗೆಹರಿಸಿಕೊಳ್ಳಿ ಎಂದರು.

ಪ್ರತಿ ಸಮಸ್ಯೆ, ಪ್ರತಿ ಗಲಾಟೆಗೂ ರಾಜಕೀಯ ಬಣ್ಣ, ದ್ವೇಷ ಬಳಿಯುವ ಕೆಲಸವನ್ನು ಕೆಲವರು ಮಾಡಿಸುತ್ತಾರೆ. ಅದನ್ನು ಯಾರೂ ನಂಬಬಾರದು, ಕಿವಿಗೊಡಬಾರದು. ಎಲ್ಲ ಪಕ್ಷದ ಕಾರ್ಯಕರ್ತರು ನನ್ನಲ್ಲಿ ಬರಬಹುದು. ನಾನೀನ ಎಲ್ಲರ ಶಾಸಕ. ನಿಮ್ಮ ಕಷ್ಟಗಳನ್ನು ಬಗೆಹರಿಸುವುದೇ ನನ್ನ ಗುರಿಯಾಗಿದೆ ಎಂದರು.

ಹತ್ತು ವರ್ಷಗಳಲ್ಲಿ ಕ್ಷೇತ್ರದಲ್ಲಿ ನಾನು ಮಾಡಿದ ಕೆಲಸಗಳನ್ನು ಕಳೆದ ಐದು ವರ್ಷಗಳಲ್ಲಿ ಮಾಜಿ ಶಾಸಕರು ಹಾಳು ಮಾಡಿದರು. ಇದರಿಂದ ಎಲ್ಲ ಪಕ್ಷಗಳ ಕಾರ್ಯಕರ್ತರೂ, ಮುಗ್ದ ಜನರು ನಲುಗುವಂತಾಯಿತು ಎಂದು ಬಾವುಕರಾದರು.

ಕ್ಷೇತ್ರದ ಅಂರ್ಜಲದಲ್ಲಿ ಅರ್ಸೆನಿಕ್, ಫ್ಲೋರೈಡ್
ಬೆರೆತಿದೆ ಎಂಬ ಕಾರಣಕ್ಕಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಾಡಿದ್ದೆ. ಆದರೆ ಅದನ್ನು ರಾಜಕೀಯ ಕಾರಣಕ್ಕಾಗಿ ಹಾಳು ಮಾಡಿದ್ದರು. ಹೀಗಾಗಿ ನನ್ನ ಕ್ಷೇತ್ರದ ಜನರು ರಾಸಾಯನಿಕ ಬೆರೆತ ನೀರು ಕುಡಿದು ಆರೋಗ್ಯ ಹಾಳು ಮಾಡಿಕೊಂಡರು. ಮಕ್ಕಳ ಬೆಳವಣಿಗೆ ಕುಂಠಿತವಾಯಿತು. ಹೀಗಾಗಿಯೇ ನಾನು ಗೆದ್ದ ತಕ್ಷಣವೇ ಕುಡಿಯುವ ನೀರು ಸರಿಪಡಿಸಲು ಮುಂದಾದೆ ಎಂದು ಹೇಳಿದರು.

ನನ್ನ ಕ್ಷೇತ್ರದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ಇದಕ್ಕಾಗಿ ನಾವೆಲ್ಲರೂ ಸೇರಿ ದುಡಿಯೋಣ ಎಂದು ಕರೆಕೊಟ್ಟರು.

ಜನರ ಕಷ್ಟ ಕಂಡಾಗ ನನಗೆ ಯಾವುದೇ ಪಕ್ಷ ನೆನಪಿಗೆ ಬರುವುದಿಲ್ಲ. ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿ ಎಲ್ಲ ನಾಯಕರು ಬಡವರ ಸೇವೆಯಲ್ಲಿ ತಾರತಮ್ಯ ಮಾಡಬಾರದು ಎಂದೇ ಹೇಳಿದ್ದಾರೆ. ಹೀಗಾಗಿ ಕ್ಷೇತ್ರದ ಎಲ್ಲಾ ಬಡವರು, ನೊಂದವರ ಸೇವಕ ನಾನು. ದಿನಪೂರಾ ನಿಮಗಾಗಿ ಕೆಲಸ ಮಾಡುತ್ತೇನೆ. ಯಾರಿಗೂ ಭಯ, ಅಪನಂಬಿಕೆ ಬೇಡ. ಕಷ್ಟದಲ್ಲಿರುವ ಎಲ್ಲರಿಗೂ ನನ್ನ ಮನೆ, ನನ್ನ ಕಚೇರಿಯ ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದು ಹೇಳಿದರು.

ಅದ್ವಾನವಾಗಿರುವ ಕ್ಷೇತ್ರವನ್ನು ಆರಂಭದಲ್ಲಿ ಸರಿ ದಾರಿಗೆ ತರಬೇಕು ಎಂದುಕೊಂಡಿದ್ದೇನೆ. ಇದಕ್ಕೆ ಎಲ್ಲರೂ ಕೈ ಜೋಡಿಸಬೇಕು. ಯಾರಿಗೆ ನೋವಾದರೂ ಅದನ್ನು ಕ್ಷೇತ್ರಕ್ಕಾಗಿ ಸಹಿಸಿಕೊಳ್ಳಿ. ಸುಧಾರಣೆಯ ಹಾದಿಗೆ ಮುಳ್ಳು ಹಾಕಲು ರಾಜಕೀಯ ಬಣ್ಣ ಬಳಿಯುವವರಿಗೆ ಜನರೇ ಉತ್ತರಿಸಬೇಕು. ಆಹಾರ ಆಗಬಾರದು ಎಂದರು.

ನನ್ನ ಜೀವಾಳವಾಗಿರುವ ನನ್ನ ಪಕ್ಷದ ಸಾಮಾನ್ಯ ಕಾರ್ಯಕರ್ತನೇ ನನಗೆ ದೊಡ್ಡ ಕಾರ್ಯಕರ್ತರು. ಇವರುಗಳು ಯಾವುದೇ ಕಾರಣಕ್ಕೂ ವೈಷಮ್ಯ, ರಾಜಕೀಯ ಒಳಸುಳಿಗೆ ಒಲಿಯಾಗಬಾರದು. ಗ್ರಾಮಗಳಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಯಾರೇ ಕಷ್ಷದಲ್ಲಿರೂ ಅವರಿಗೆ ಕೈ ಚಾಚಿ ಅನುಕೂಲ ಮಾಡಿಕೊಡಬೇಕು. ನಿಮ್ಮ ನಿಮ್ಮ ಸಂಬಂಧಿಕರು, ಹಿರಿಯರ ಮುಂದಾಳತ್ವದಲ್ಲಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಅನಿವಾರ್ಯವಾದಲ್ಲಿ ಮಾತ್ರ ನ್ಯಾಯಾಲಯಗಳ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ. ಹೊಡೆದಾಟ, ಪರಸ್ಪರ ಆರೋಪಗಳ ಮೂಲಕ ನಿಮ್ಮ ಸಮಯ, ಮನಶಾಂತಿಯನ್ನು ಹಾಳು ಮಾಡಿಕೊಳ್ಳಬಾರದು ಎಂದು ಬುದ್ದಿವಾದ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವೈ.ಹೆಚ್. ಹುಚ್ಚಯ್ಯ, ಡಿ.ಎನ್. ಶಂಕರ್, ವಿಜಯಕುಮಾರ್, ಜಯಂತ್ ಗೌಡ, ಮೈದಾಳ ಮಂಜುನಾಥ್,ವೆಂಕಟೇಶ್, ರಮೇಶ್,ರಾಮಚಂದ್ರಯ್ಯ,ಶಿವಕುಮಾರ್, ವೈಟಿ ನಾಗರಾಜ್, ಮದನ್, ರೇಣುಕಮ್ಮ,ರಾಜಶೇಖರ್, ಮಾಯರಂಗಯ್ಯ, ರಗುನಾಥಪ್ಪ ಮತ್ತಿತರರು ಭಾಗವಹಿಸಿದ್ದರು.

ಪರಿಹಾರ ಕೊಡ್ಸಿ ಡಿ.ಸಿ.ಸಾಹೇಬರೇ!

ವರದಿ: ಗಣೇಶ್ ಕೊಡಿಗೇನಹಳ್ಳಿ


ಕೊಡಿಗೇನಹಳ್ಳಿ: ಪುರವರ ಹೋಬಳಿಯ ಸಿದ್ದನಹಳ್ಳಿ ಗ್ರಾಮದ ಜಯರಾಂ ಅವರ ಅಡಿಕೆ ತೋಟ ಮಳೆ ಗಾಳಿಯಿಂದ‌ ಹಾಳಾಗಿದ್ದು, ಕೂಡಲೇ ಪರಿಹಾರ ಕೊಡಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ.

ತೋಟ ಹಾಳಾಗಿರುವುದರಿಂದ ರೈತರ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಬಂದು ಕೂಡಲೇ ನಮಗೆ ನೆರವು ನೀಡಬೇಕು ಎಂದು ಹೇಳಿದ್ದಾರೆ.