Saturday, March 14, 2026
Google search engine
Home Blog Page 74

ಶಿರಾದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ


ಭೀಕರ ರಸ್ತೆ ಅಪಘಾತ 9 ಜನರ ಸಾವು; 14 ಜನರಿಗೆ ತೀವ್ರ ಗಾಯ

ಮೃತರಿಗೆ 2 ಲಕ್ಷ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ | ವಿವಿಧ ಗಣ್ಯರಿಂದ ಸಂತಾಪ

ಶಿರಾ: ಕೂಲಿ ಕೆಲಸಕ್ಕೆಂದು ರಾಯಚೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ರೂಷರ್ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕ್ರೂಜರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ 9 ಜನ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.

14 ಜನ ಗಾಯಾಳುಗಳಾಗಿದ್ದು, ಮೃತಪಟ್ಟವರು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸುಜಾತಾ (25), ಲಕ್ಷ್ಮೀ 13), ವಿನೋದ್ (3), ಕ್ರೂಜರ್ ಚಾಲಕ ಕೃಷ್ಣಪ್ಪ (೨೫), ಸಿದ್ದಯ್ಯಸ್ವಾಮಿ, ಪ್ರಭು, ಬಸಮ್ಮ,  ಎಂದು ತಿಳಿದುಬಂದಿದ್ದು, ಉಳಿದವರ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ವಾಹನವನ್ನು ತೆರವುಗೊಳಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ.

ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಹಾಗೂ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಧಾನಿ ಸೇರಿಸಂತೆ ವಿವಿಧ ಗಣ್ಯರಿಂದ ಸಂತಾಪ

ಈ ದುರ್ಘಟನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ ರೂ. 50 ಸಾವಿರ ಪರಿಹಾರಧನ ಘೋಷಣೆ ಮಾಡಿದ್ದಾರೆ.

ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಭೇಟಿ: ಘಟನೆ ನಡೆದ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್, ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್, ಶಿರಾ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭೀಕರ ರಸ್ತೆ ಅಪಘಾತದ ದುರ್ಘಟನೆ ದುರದೃಷ್ಟಕರ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಮೃತದೇಹಗಳನ್ನು ನಗರದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಲಾಗುವುದು ಎಂದರು.

ಶಿರಾ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ಕುಟುಂಬದವರಿಗೆ ಸಾಂತ್ವನ ಹೇಳಿದ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ವೈದ್ಯಾಧಿಕಾರಿಗಳಾದ ಡಾ.ಶ್ರೀನಾಥ್, ಡಾ.ಡಿ.ಎಂ.ಗೌಡ ಸೇರಿದಂತೆ ಹಲವರು ಹಾಜರಿದ್ದರು. 

ಗೈರಾದ ಪದಾಧಿಕಾರಿಗಳ ವಜಾ ಮಾಡಿ : ಕೆ.ಎಸ್.ಸಿದ್ದಲಿಂಗಪ್ಪ

Publicstory/prajayoga

ಕುಣಿಗಲ್ : ಕಾರಣ ನೀಡದೇ ಸತತವಾಗಿ ಮೂರು ಭಾರಿ ಸಭೆಗೆ ಗೈರು ಹಾಗುವ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ವಜಾಗೊಳಿಸುವಂತೆ ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಾಲೂಕು ಕಸಾಪ ಅಧ್ಯಕ್ಷರಿಗೆ ಸೂಚಿಸಿದರು.

ಪಟ್ಟಣದ ಕನ್ನಡ ಭವನದಲ್ಲಿ ಕಸಾಪ ಸಂಘದ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಪ್ರೇರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇತ್ತೀಚಿಗೆ ಕಸಾಪ ರಾಜ್ಯ ಕೇಂದ್ರ ಸಮಿತಿ ಕೆಲವು ಮಹತ್ವರವಾದ ಕ್ರಮವನ್ನು ಕೈಗೊಂಡಿದೆ. ಅದಕ್ಕೆ ಅನುಗುಣವಾಗಿ ಜಿಲ್ಲಾ ಹಾಗೂ ತಾಲೂಕು ಕಸಾಪ ಘಟಕಗಳು ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ತಾಲೂಕು ಕಸಾಪ ಅಧ್ಯಕ್ಷರು ಪದಾಧಿಕಾರಿಗಳ ಸಭೆ ಕರೆದು ಕನ್ನಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿ, ಅದನ್ನು ಅನುಷ್ಟಾನಗೊಳಿಸುವ ಜವಾಬ್ದಾರಿಯನ್ನು ಕಾರ್ಯಕಾರಿ ಸಮಿತಿ ನಿರ್ವಹಿಸಬೇಕು. ಸಭೆಗೆ ಕಾರಣ ನೀಡದೇ ಸತತವಾಗಿ ಮೂರು ಬಾರಿ ಸಭೆಗೆ ಗೈರಾಗುವ ಪದಾಧಿಕಾರಿಗಳಿಗೆ ನೋಟಿಸ್ ನೀಡದೇ ವಜಾ ಗೊಳಿಸಿ. ವಜಾಗೊಂಡ ಸ್ಥಾನಕ್ಕೆ ಅದೇ ಸಮುದಾಯದವರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈಗಿರುವ ಆಡಳಿತ ಮಂಡಲಿಯ ಪದಾಧಿಕಾರಿಗಳ ಜತೆಗೆ ಹೊಸದಾಗಿ ಸಂಘಟನಾ ಕಾರ್ಯದರ್ಶಿ, ಸಹಾ ಸಂಘಟನಾ ಕಾರ್ಯದರ್ಶಿ ಹಾಗೂ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ವಿವಿಧ ಸಂಘ, ಸಂಸ್ಥೆಗಳ ಐದು ಮಂದಿಯನ್ನು ಹೊಸದಾಗಿ ನಿರ್ದೇಶಕರನ್ನು ನೇಮಕ ಮಾಡಿಕೊಳ್ಳಬೇಕು. ಪರಿಷತ್ ಗೆ ಮಾರ್ಗದರ್ಶನ ಮಾಡಲು ಮಾರ್ಗದರ್ಶಿ ಸಮಿತಿ ರಚಿಸಿ, ವಿವಿಧ ವರ್ಗಗಳ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿಕೊಳ್ಳಬೇಕು. ಕನ್ನಡ ಕೆಲಸಗಳನ್ನು ಹೆಚ್ಚು ಹೆಚ್ಚಾಗಿ ಮಾಡಬೇಕು ಎಂದು ತಿಳಿಸಿದರು.

ಸದಸ್ಯತ್ವಕ್ಕೆ ಒತ್ತು ನೀಡಿ : ಕಸಾಪ ಜನ ಸಾಮಾನ್ಯರ ಪರಿಷತ್ನಾಗಿಸಲು ರಾಜ್ಯದಲ್ಲಿ ಒಂದು ಕೋಟಿ ಸದಸ್ಯರನ್ನಾಗಿ ಮಾಡಲು ರಾಜ್ಯ ಘಟಕ ಕಾರ್ಯಾನ್ಮುಖವಾಗಿದೆ ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸದಸ್ಯತ್ವದ ಅಭಿಯಾನ ನಡೆಸಿ ಇಗಿರುವ ಸದಸ್ಯರ ಜತೆಗೆ ಹೊಸ ಸದಸ್ಯರನ್ನು ನೊಂದಣಿ ಮಾಡಿಕೊಳ್ಳಬೇಕು.
ಕಸಾಪಗೆ ಸದಸ್ಯತ್ವ ನೊಂದಾಯಿಸಿಕೊಳ್ಳುವ ಸೈನಿಕರು, ಅರೆ ಸೈನಿಕರು, ನಿವೃತ್ತ ಸೈನಿಕರಿಗೆ ಶುಲ್ಕವಿಲ್ಲದೆ ಉಚಿತ ಸದಸ್ಯತ್ವ ಮತ್ತು ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಆನ್ಲೈನ್ ಮೂಲಕ ಸದಸ್ಯತ್ವ ಒದಗಿಸಲು ನೂತನ ಆಪ್ ಅಳವಡಿಸಲಾಗಿದೆ. ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರು, ರೈತರಿಗೆ ಯಾವುದೇ ವಿದ್ಯಾರ್ಥಿ ಅರ್ಹತೆ ಅನ್ವಯಿಸುವುದಿಲ್ಲ. ಆದರೆ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ದೃಢೀಕರಣ ಪತ್ರ ಪಡೆದು ಸದಸ್ಯತ್ವ ಪಡೆಯಬಹುದ್ದಾಗಿದೆ. ಇತರೆಯವರು ಸದಸ್ಯರಾಗಲು ಏಳನೇ ತರಗತಿ ಕಡ್ಡಾಯವಾಗಿದೆ. ಈಗಿರುವ ಒಂದು ಸಾವಿರ ಸದಸ್ಯತ್ವ ಶುಲ್ಕ 500 ಮತ್ತು ಕನ್ನಡ ನುಡಿ ಶುಲ್ಕ 500 ರೂ. ಗಳಿಂದ 259 ರೂಗಳಿಗೆ ಇಳಿಸಿ ಅಧುನಿಕ ಗುರುತಿನ ಚೀಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲು 150 ರೂ. ಶುಲ್ಕವನ್ನು ಸದಸ್ಯರು ಕಟ್ಟಬೇಕಾಗಿದೆ. ಈ ದಿಸೆಯಲ್ಲಿ ಕುಣಿಗಲ್ ತಾಲೂಕಿನಲ್ಲಿ ಕನಿಷ್ಠ ಐದು ಸಾವಿರ ಮಂದಿ ಜನರನ್ನು ಕಸಾಪಗೆ ನೊಂದಾಯಿಸಬೇಕೆಂದು ತಿಳಿಸಿದರು.

ಜಿಲ್ಲಾ ಕಸಪಾ ಘಟಕದಿಂದ ಕುಣಿಗಲ್ ತಾಲೂಕು ಕಸಾಪ ಘಟಕಕ್ಕೆ ದತ್ತಿ ನಿಧಿ, ಕಸಾಪ ಸಂಸ್ಥಾಪಕ ದಿನಾಚರಣೆಯ 6500 ರೂ ಚೆಕ್ಅನ್ನು ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ನೀಡಿದರು.

ಈ ವೇಳೆ ಕಸಾಪ ಜಿಲ್ಲಾ ಕಾರ್ಯದರ್ಶಿ ಯೋಗೀಶ್ವರಪ್ಪ, ಕೋಶಾಧ್ಯಕ್ಷ ಎಂ.ಹೆಚ್.ನಾಗರಾಜು, ತಾಲೂಕು ಅಧ್ಯಕ್ಷ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಅಧ್ಯಕ್ಷ ಡಾ.ಕಪನಿಪಾಳ್ಯ ರಮೇಶ್, ಪ್ರಧಾನ ಕಾರ್ಯದರ್ಶಿ ಜಯರಾಮ್, ಕೋಶಾಧ್ಯಕ್ಷ ರಾಮಣ್ಣ, ನಿರ್ದೇಶಕರಾದ ಕೆ.ಆರ್.ರಂಗನಾಥ್, ಕೆ.ಎನ್.ಲೋಕೇಶ್, ದಲಿತ್ನಾರಾಯಣ್, ಲೀಲಾವತಿ, ಜೀವಂಧರ್ಕುಮಾರ್, ಎಂ.ಡಿ.ಮೋಹನ್, ಷರೀಪ್ಉಲ್ಲಾ, ಪ್ರೀತಮ್ಡೇವಿಡ್, ನಳಿನಾಕೃಷ್ಣಪ್ಪ, ಎಡಿಯೂರು ಘಟಕದ ಅಧ್ಯಕ್ಷ ಶಿವಕುಮಾರ್ ಇದ್ದರು.

ಪತ್ರಕರ್ತರು ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡಿ : ರಂಗಸ್ವಾಮಿ  

Publicstory/prajayoga

ಕುಣಿಗಲ್ : ಪತ್ರಿಕಾ ವೃತ್ತಿ ಅತ್ಯಂತ ಪವಿತ್ರವಾದದ್ದು ಹಾಗೂ ಮೌಲ್ಯಧಾರಿತವಾದದ್ದು. ಹಾಗಾಗಿ ಪತ್ರಿಕೆಗಳು ನೊಂದವರ, ಕಣ್ಣೀರು ಒರೆಸುವ ಕೆಲಸ ಮಾಡಬೇಕೆಂದು ಪುರಸಭಾ ಅಧ್ಯಕ್ಷ ರಂಗಸ್ವಾಮಿ ತಿಳಿಸಿದರು.

ಪಟ್ಟಣದ ತಾ.ಪಂ ಸಭಾಂಗಣದಲ್ಲಿ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ 2022 ಹಾಗೂ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಗಾಂಧಿಜಿ, ಜವಹರ ಲಾಲ್ ನೆಹರು, ಡಾ.ಬಿ.ಆರ್.ಅಂಬೇಡ್ಕರ್, ಸರ್ಧಾರ್ ವಲ್ಲಭಾಯಿ ಪಟೇಲ್, ಜಾನ್ಸಿರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಕಿತ್ತೂರುರಾಣಿ ಚನ್ನಮ್ಮ ಮೊದಲಾದ ಲಕ್ಷಾಂತರ ಮಂದಿ ಅವಿರತ ಚಳುವಳಿ, ಹೋರಾಟ ನಡೆಸಿದರು. ಅವರಂತೆ ಪತ್ರಿಕಾ ರಂಗವು ಬ್ರಿಟೀಷರ ಗುಲಾಮ ಗಿರಿಯಿಂದ ಭಾರತವನ್ನು ಮುಕ್ತಗೊಳಿಸುವ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಪ್ರಮುಖ ಪಾತ್ರ ವಹಿಸಿದೆ ಎಂದರು.

ಮಳೆ, ಚಳಿ, ಗಾಳಿ, ಬಿಸಿಲು ಎನ್ನದೇ ರಜೆ ಇಲ್ಲದೆ ಪತ್ರಕರ್ತರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಜೀವನ ಭದ್ರತೆ ಸರ್ಕಾರ ಒದಗಿಸದೇ ಇರುವುದು ಬೇಸರದ ಸಂಗತಿ. ಈ ನಿಟ್ಟಿನಲ್ಲಿ ಈ ಬಾರಿ ಪುರಸಭಾ ಬಜೆಟ್ನಲ್ಲಿ ಪತ್ರಕರ್ತರ ಆರೋಗ್ಯ ವಿಮೆಗೆ ಹಣ ಕಾದಿರಿಸಿ ಈಗಾಗಲೇ 20 ಮಂದಿ ಪತ್ರಿಕಾ ವರದಿಗಾರರಿಗೆ ವಿಮೆ ಮಾಡಿಸಲಾಗಿದೆ. ಮುಂದಿನ ದಿನದಲ್ಲಿ  ಸಂಸದ ಡಿ.ಕೆ.ಸುರೇಶ್, ಶಾಸಕ ಡಾ.ಎಚ್.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪತ್ರಿಕಾ ಭವನಕ್ಕೆ ಹಾಗೂ ಪತ್ರಕರ್ತರಿಗೆ ಪುರಸಭೆವತಿಯಿಂದ ನಿವೇಶನ ಕೊಡಲು ಪ್ರಯತ್ನಿಸುವುದ್ದಾಗಿ ಭರವಸೆ ನೀಡಿದರು.

ನಕಲಿ ಪತ್ರಕರ್ತರ ಹಾವಳಿ ಹೆಚ್ಚಳ :

ಜಿಲ್ಲಾ ಪತ್ರಿಕಾ ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ, ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಇದರಿಂದ ನೈಜ್ಯ ಪತ್ರಕರ್ತರ ಗೌರವಕ್ಕೆ ದಕ್ಕೆಯುಂಟಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಹಣಕ್ಕಾಗಿ ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ಬೆದರಿಸಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ನಖಲಿ ಪತ್ರಕರ್ತರನ್ನು ಹತ್ತಿಕಲು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರಿಕಾ ಸಂಘದಿಂದ ದೂರು ನೀಡಲು ತಿರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪುರಸಭಾ ಸದಸ್ಯ ಕೋಟೆ ನಾಗಣ್ಣ ಮಾತನಾಡಿ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಳಂತೆ ಪತ್ರಿಕಾ ರಂಗವು ನಾಲ್ಕನೇ ಅಂಗವಾಗಿ ಕೆಲಸ ಮಾಡುತ್ತಿದೆ. ಕುಣಿಗಲ್ ತಾಲೂಕು ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ ಆನೇಕ ಮಂದಿ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಬೆರಳೆಣಿಕೆಯಷ್ಟು ಮಾತ್ರ ವೃತ್ತಿ ಪತ್ರಕರ್ತರಿಗೆ ಮಾಶಾಸನ ಸಿಗುತ್ತಿದೆ. ಹಾಗಾಗಿ ಸರ್ಕಾರ ನಿವೃತ್ತಿ ಹಂಚಿನಲ್ಲಿ ಇರುವ ಎಲ್ಲಾ ಪತ್ರಕರ್ತರಿಗೂ ಮಾಶಾಸನ ನೀಡುವ ಮೂಲಕ ಅವರ ಜೀವನದ ಭದ್ರತೆಗೆ ಆಧಾರವಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ಆನಂದ್ಕುಮಾರ್(ಕಾಂಬ್ಲಿ), ಗೋಪಿಅರಸ್, ಪತ್ರಿಕಾ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್,   ತಾಲೂಕು ಕಸಪಾ ಅಧ್ಯಕ್ಷ ಕಪನಿಪಾಳ್ಯರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಗಣಪನ ಮೂರ್ತಿಯೊಂದಿಗೆ ಪುನೀತ್ ಪುತ್ಥಳಿ

Publicstory/prajayoga

– ವಿಶೇಷ ವರದಿ, ಮಿಥುನ್ ತಿಪಟೂರು.

ಅಪ್ಪು ಅವರ ನಗುಮೊಗದ ಗಲ್ಲವ ಹಿಡಿದು ಕುಳಿತ ಗಣಪ ಮೂರ್ತಿ

ತಿಪಟೂರು:  ಗಣೇಶ ಚತುರ್ಥಿ ನಾಡಿನ ಜನರ ಬಹು ಅಚ್ಚುಮೆಚ್ಚಿನ ಹಬ್ಬ. ಒಂದು ದಿನಕ್ಕೆ ಮುಗಿಯದೆ ವಾರ, ತಿಂಗಳು ಪೂರ್ತಿಯೂ ಆಚರಿಸಲ್ಪಡುತ್ತದೆ. ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ನಗರದಲ್ಲಿ ಜನರು ಸಡಗರದಿಂದ ಸಂಭ್ರಮಕ್ಕೆ ಅಣಿಯಾಗುತ್ತಿದ್ದಾರೆ.

ದೇಶದಾದ್ಯಂತ ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಗಣೇಶ ವಿಗ್ರಹ ಮೂರ್ತಿಗಳ ಬೇಡಿಕೆ ಹೆಚ್ಚಾಗಿದೆ. ಕರ್ನಾಟಕದಲ್ಲಿಯೂ ವಿಶೇಷ ರೀತಿಯ ಗಣಪತಿ ವಿಗ್ರಹ ಮೂರ್ತಿ ಗಳಿಗೆ ಭಾರಿ ಬೇಡಿಕೆ ಇದೆ.

ಈ ನಡುವೆ ಡಾ.ರಾಜ್ ಮತ್ತು ಪುನೀತ್ ರಾಜ್ ಕುಮಾರ್ ಅವರ ಗೆಳೆಯರ ಬಳಗದ ವತಿಯಿಂದ ಈ ಬಾರಿ ತಿಪಟೂರಿನಲ್ಲಿ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಇರುವ ಗಣಪತಿ ಮೂರ್ತಿ ತಯಾರಿಸಿರುವುದು ವಿಶೇಷವಾಗಿ ಕಂಡು ಬರುತ್ತಿದೆ‌. 

ಕಲಾವಿದ

ವಿಗ್ರಹ ಕಲಾವಿದ ಚೇತನ್  ಮಾಧ್ಯಮದೊಂದಿಗೆ ಮಾತನಾಡಿ, ನಾವು ಮತ್ತು ನಮ್ಮ ತಂದೆ ಕಳೆದ ಮೂವತ್ತು ವರ್ಷಗಳಿಂದ ಗಣಪತಿ ವಿಗ್ರಹ ತಯಾರಿಕೆಯಲ್ಲಿ ತೊಡಗಿದ್ದೇವೆ. ತಿಪಟೂರು ಗಣಪತಿಯನ್ನು ಎರಡು ವರ್ಷಗಳಿಂದ ನಾನೇ ಮಾಡುತ್ತಿದ್ದೇನೆ. ಈ ಸಲ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಇರುವ ಗಣಪತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಪ್ರತಿಕ್ರಿಯಿಸಿದರು.

ಸೂರ್ಯಪ್ರಕಾಶ್

ಈ ಬಾರಿಯ ಗಣೇಶೋತ್ಸವದಲ್ಲಿ ಪುನೀತ್ ಅಣ್ಣ ಇಲ್ಲದ ಕಾರಣ ಅವರ ಸ್ಮರಣಾರ್ಥವಾಗಿ  ಗಣಪತಿಯೊಂದಿಗೆ ಅವರ ವಿಗ್ರಹ ಮೂರ್ತಿಯನ್ನು ಮಾಡಿಸಲಾಗಿದೆ ಎಂದುಪುನೀತ್ ರಾಜ್ ಕುಮಾರ್ ಗೆಳೆಯರ ಬಳಗದ ಸದಸ್ಯ ಸೂರ್ಯಪ್ರಕಾಶ್ ಪ್ರಜಾಯೋಗ ದಿನ ಪತ್ರಿಕೆ ಹಾಗೂ ಪಬ್ಲಿಕ್ ಸ್ಟೋರಿಗೆ ತಿಳಿಸಿದರು‌.

ತಿಪಟೂರಿನಲ್ಲಿ ಈ ಬಾರಿ ನೂರಕ್ಕೂ ಸ್ಥಳಗಳಲ್ಲಿ ಸರ್ಪದ ಎಡೆಯೊಂದಿಗೆ ಗೌರಿ ಹಾಗೂ ವೆಂಕಟೇಶ್ವರನ ಸ್ವರೂಪದಲ್ಲಿರುವ ಆಕರ್ಷಕ ಗಣಪನ ಮೂರ್ತಿಗಳನ್ನು ಮಾರಾಟ ಮಾಡುತ್ತಿರುವುದು ಎಲ್ಲರ ಗಮನ ಸೆಳೆಯಿತು.

ಬೆಳೆಯುವ ಸಿರಿ ಮೊಳಕೆಯಲ್ಲಿ ; ಮೌಲ್ಯ ತುಂಬಬೇಕು ಮಕ್ಕಳಲ್ಲಿ

0

Publicstory/prajayoga

ಚೇತನ್ ಮೌರ್ಯ, ಶಿಕ್ಷಕರು

ಆಧುನಿಕತೆ ಮುಂದುವರೆದಂತೆ ಮಕ್ಕಳಲ್ಲಿ ಮೌಲ್ಯಗಳು ಕುಸಿಯುತ್ತಿವೆ. ಇದಕ್ಕೆ ಕಾರಣ ಅನೇಕ.  ನಮ್ಮ ಮಕ್ಕಳು ಹುಟ್ಟುತ್ತಾ ಖಾಲಿ ಹಾಳೆಯಂತಿರುತ್ತಾರೆ. ಅವರದು ನಿಷ್ಕಲ್ಮಶ ಮನಸ್ಸು. ಅವರು ಮಾತು ಕಲಿಯುವವರೆಗೆ ನಮ್ಮ ಮಾತುಗಳನ್ನು ಆಲಿಸುತ್ತಾ, ನಂತರ ತೊದಲು ನುಡಿಯ ಮೂಲಕ ಮಾತು ಪ್ರಾರಂಭಿಸುತ್ತಾರೆ. ಇದೆಲ್ಲ ಗೊತ್ತಿರುವ ವಿಚಾರವೇ. ಆದರೆ ಮಕ್ಕಳಿಗೆ ನಾವು ಯಾವ ರೀತಿಯ ನುಡಿಗಳನ್ನು ಕಲಿಸುತ್ತೇವೆ, ಯಾವ ರೀತಿಯ ನಡವಳಿಕೆಗಳನ್ನು ಕಲಿಸುತ್ತೇವೆ, ಮಕ್ಕಳ ಮುಂದೆ ನಾವು ಹೇಗೆ ವರ್ತಿಸುತ್ತೇವೆ ಎಂಬುದು ಬಹಳ ಮುಖ್ಯವಾಗುತ್ತದೆ.

ಮಕ್ಕಳು ಶಾಲೆಗೆ ಸೇರುವ ಮೊದಲೇ ಅನೇಕ ಪಾಠಗಳನ್ನು ಮನೆಯಲ್ಲಿ ಕಲಿತಿರುತ್ತಾರೆ. “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬ ನಾಣ್ನುಡಿಯಂತೆ ಅವರಿಗೆ ಯಾವ ರೀತಿಯ ಸಭ್ಯತೆ ಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರ, ಒಳ್ಳೆಯ ಭಾಷೆ ಜೊತೆಗೆ ಮಾತುಗಳನ್ನು ಹೇಗೆ ಕಲಿಸುತ್ತೇವೆ ಎಂಬ ತಳಹದಿಯ ಮೇಲೆ ಅವರ ಮುಂದಿನ ಭವಿಷ್ಯ ನಿರ್ಧಾರವಾಗುತ್ತದೆ.

ಶಾಲಾ ಜೀವನ, ಕಾಲೇಜು ಜೀವನ, ಉದ್ಯೋಗ ಜೀವನ, ಮುಂದುವರಿಯುತ್ತದೆ. ಮಕ್ಕಳಿಗೆ ಮನೆಯೇ ಮೊದಲ ವಿದ್ಯಾಲಯ. ಪೋಷಕರೇ ಗುರುಗಳು. ನ್ಯೂಟನ್ ಮೂರನೇ ನಿಯಮದಂತೆ ಮಕ್ಕಳಿಗೆ ಕಲಿಸುವ ನಡವಳಿಕೆಯ ಮೇಲೆ,  ಅವರು ನಮ್ಮನ್ನು  ವೃದ್ಯಾಪ್ಯದಲ್ಲಿ ಹೇಗೆ ನೋಡಿಕೊಳ್ಳುತ್ತಾರೆ ಎಂಬುದು ನಿರ್ಧಾರವಾಗುತ್ತದೆ.

“ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ” ಎಂಬಂತೆ ದುರ್ವಿದ್ಯೆ ಗಳನ್ನು ಬಾಲ್ಯದಲ್ಲಿ ಕಲಿತ ಮಕ್ಕಳು ಮುಂದೆ ಒಳ್ಳೆಯ ಪ್ರಜೆಗಳಾಗುವುದು ಅಸಾಧ್ಯ. ಆದ್ದರಿಂದ ಆತ್ಮೀಯ ಪೋಷಕರು ನಿಮ್ಮ ಮಕ್ಕಳಿಗೆ ಒಳ್ಳೆಯ ಭಾಷೆ, ಗುರುಹಿರಿಯರಿಗೆ ಗೌರವ ಕೊಡುವುದು ಮೊದಲಾದ  ಗುಣಗಳನ್ನು ಕಲಿಸಿದರೆ ಅದು ನಿಮಗೆ ವೃದ್ಧಾಪ್ಯದಲ್ಲಿ ಪ್ರತಿಫಲಿಸುತ್ತದೆ‌. ನೀವು ಮಕ್ಕಳ ಮುಂದೆ ನಿಮ್ಮ ತಂದೆ ತಾಯಿಗಳಿಗೆ ನೀವು ತೋರುವ ಕಾಳಜಿ, ಗೌರವವನ್ನು ಮಕ್ಕಳು ನೋಡುತ್ತಿರುತ್ತಾರೆ. ಅವರಿಗೆ ನೀವು ಅಗೌರವ ತೋರಿದರೆ ನಿಮಗೆ ಮುಂದೆ ಅದೇ ಗತಿ.!

ಮನೆಯಲ್ಲಿ ಏಕವಚನ ಬಹುವಚನ ಬೈಗುಳಗಳ ಮೇಲೆ ಹಿಡಿತ ಹಿಡಿತವಿರಲಿ. ಮಕ್ಕಳ ಮುಂದೆ ಇದು ಸಲ್ಲ . ಹಣದ ಕುರಿತಾದ ವಿಷಯಗಳನ್ನು ಮಕ್ಕಳ ಮುಂದೆ ಚರ್ಚಿಸಬೇಡಿ. “ದುಡ್ಡೇ ಜೀವನದಲ್ಲಿ ಮುಖ್ಯ ಎಂಬುದನ್ನು ನೀವು ಅವರ ತಲೆಗೆ ತುಂಬಬೇಡಿ” ಅವರ ವಿದ್ಯಾಭ್ಯಾಸ ಹಾಳಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ಸಮಾಜದಲ್ಲಿ ಉತ್ತಮ ಪ್ರಜೆಗಳ ನಿರ್ಮಾಣದಲ್ಲಿ ತಂದೆ ತಾಯಿಗಳ ಜೊತೆಗೆ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಇಲ್ಲವಾದಲ್ಲಿ “ಮಾಡಿದ್ದುಣ್ಣೋ ಮಹಾರಾಯ” ಎಂಬಂತೆ ಎಲ್ಲರೂ ಪರಿಣಾಮ ಎದುರಿಸಬೇಕಾಗುತ್ತದೆ.

ಬರಹ ಲೇಖಕರ ಅಭಿಪ್ರಾಯ ಹೊರತು, ವೆಬ್‌ಸೈಟ್‌ನ ಅಭಿಪ್ರಾಯವಲ್ಲ

ಕಾರ್ಯಕರ್ತರ ಗುರಿ ಪಕ್ಷ ಅಧಿಕಾರಕ್ಕೆ ತರುವುದು: ಜಯಕುಮಾರ್

Publicstory/prajayoga

ತುಮಕೂರು: ಬ್ಲಾಕ್ ಕಮಿಟಿ, ವಿಲೇಜ್ ಕಮಿಟಿಗಳನ್ನು ಸಶಕ್ತಗೊಳಿಸುವ ಮೂಲಕ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡುವುದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಗುರಿಯಾಗಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್ ಕರೆ ನೀಡಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವವರಿದ್ದಾರೆ. ಅಂತಹವರನ್ನು ಗುರುತಿಸಿ, ಅವರ ಮತಗಳು ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡಬೇಕಿದೆ. ಬಿಜೆಪಿಯ ಆಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಬಿಜೆಪಿಯ ವಿರುದ್ದ ಮತಗಳು ಎಂದಿಗೂ ಜೆಡಿಎಸ್ ಪಕ್ಷದ ಪಾಲಾಗದಂತೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಿದೆ. ಬ್ಲಾಕ್ ಕಮಿಟಿ ಮತ್ತು ವಿಲೇಜ್ ಕಮಿಟಿಗಳು ಬಲಗೊಂಡರೆ, ಸುಲಭವಾಗಿ ಮತದಾರರನ್ನು ಸೆಳೆಯಬಹುದೆಂದರು.

ಬ್ಲಾಕ್ ಮತ್ತು ವಿಲೇಜ್ ಕಮಿಟಿಗಳು ಪಕ್ಷದ ಆಧಾರ ಸ್ತಂಭಗಳಿದ್ದಂತೆ ಹಾಗಾಗಿ ಜಿಲ್ಲೆಯಲ್ಲಿರುವ ಎಲ್ಲಾ 22 ಬ್ಲಾಕ್‌ಗಳಿಗೂ ಮುಂದಿನ 15 ದಿನಗಳ ಒಳಗೆ ಪದಾಧಿಕಾರಿಗಳ ನೇಮಕ ಮಾಡುವುದು ಕಡ್ಡಾಯ. ಇದರ ಜೊತೆಗೆ ಜಿಲ್ಲಾ ಕಾಂಗ್ರೆಸ್‌ಗೆ ಸಂಘಟನಾ ಕಾರ್ಯದರ್ಶಿಗಳನ್ನು ನೇಮಕ ಮಾಡಬೇಕಾಗಿದೆ.ಬೇರೆ ಜಿಲ್ಲೆಗಳಿಗೆ ಹೊಲಿಕೆ ಮಾಡಿದರೆ ತುಮಕೂರು ದೊಡ್ಡ ಜಿಲ್ಲೆ, ಹಾಗೂ ರಾಜಕೀಯವಾಗಿಯೂ ವಿಭಿನ್ನವಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹೇಳಿದಂತೆ ಚುನಾವಣಾ ವರ್ಷವಾಗಿರುವುದರಿಂದ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಬೇಕಿದೆ. ಸಕ್ರಿಯವಾಗಿರುವ ಪದಾಧಿಕಾರಿಗಳಿಗೆ ಪ್ರೋತ್ಸಾಹ ನೀಡಿ,ನಿಷ್ಕ್ರಿಯ ಪದಾಧಿಕಾರಿಗಳನ್ನು ಬದಲಾಯಿಸಿ, ಹೊಸಬರನ್ನು ನೇಮಿಸುವ ಕೆಲಸ ಶೀಘ್ರದಲ್ಲಿಯೇ ಆಗಲಿದೆ. ಯುವ ಕಾಂಗ್ರೆಸ್, ಎನ್.ಎಸ್.ಯು.ಐ ಸೇರಿದಂತೆ ವಿವಿಧ ಮಂಚೂಣಿ ಘಟಕಗಳು ಸಕ್ರಿಯವಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಡಾ.ಎಚ್.ಡಿ.ರಂಗನಾಥ್, ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ,  ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ ಕೆ.ಷಡಕ್ಷರಿ, ಎಸ್.ಷಪಿ ಅಹಮದ್, ವಿಧಾನಪರಿಷತ್ ಸದಸ್ಯ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಆರ್.ರಮೇಶ್, ಕೆಂಚಮಾರಯ್ಯ, ಎಸ್.ವಿ.ವೆಂಕಟೇಶ್,ಕೆಪಿಸಿಸಿ ಉಸ್ತುವಾರಿ ಕೇಶವಮೂರ್ತಿ,ಬಾಲಕೃಷ್ಣ ಮತ್ತಿತರರು ಪಾಲ್ಗೊಂಡಿದದ್ದರು.

ಗುರುತಿನ ಚೀಟಿಗೆ ಆಧಾರ್ ಜೋಡಿಸಿ : ಜಿಪಂ ಸಿಇಒ

0

Publicstory/publicstory

ತುಮಕೂರು: ಚುನಾವಣೆಯನ್ನು ಮತ್ತಷ್ಟು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವ ಕಾರ್ಯಕ್ರಮವನ್ನು ಚುನಾವಣಾ ಆಯೋಗ ಜಾರಿಗೊಳಿಸಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನ ಆವರಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಪಿಕ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಚುನಾವಣೆ ಪಾರದರ್ಶಕವಾಗಿ ನಡೆಯಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಗ ಜಾರಿಗೆ ತಂದಿದೆ.
ಇದರಿಂದ ಚುನಾವಣೆ ಮತ್ತಷ್ಟು ಪಾರದರ್ಶಕವಾಗುತ್ತದೆ. ಚುನಾವಣೆಯನ್ನು ಇನ್ನಷ್ಟು ಪಾರದರ್ಶಕವಾಗಿ ನಡೆಯುವ ಸಲುವಾಗಿ ಮತದಾರರ ಗುರುತಿನ ಚೀಟಿಗೆ ಆಧಾರ್ ನಂಬರ್ ಜೋಡಣೆ ಮಾಡಬೇಕು ಎಂದರು.

ತುಮಕೂರು ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಬಿ. ಕರಿಯಣ್ಣ ಮಾತನಾಡಿ, ಮತದಾನ ಬಹಳ ಪವಿತ್ರವಾದ ಹಕ್ಕು, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳಬೇಕಾದರೆ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಹೀಗಾಗಬೇಕಾದರೆ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತದಾರರ ಗುರುಚಿನ ಚೀಟಿಗೆ ಆಧಾರ್ ನಂಬರ್ ಜೋಡಣೆ ಮಾಡಬೇಕು ಎಂದರು.

ಈ ವೇಳೆ ಜಿ.ಪಂ. ಯೋಜನಾ ಅಭಿಯಂತರ ಶ್ರೀನಿವಾಸ್, ತುಮಕೂರು ವಿವಿ ಕಲಾ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ರಾಜ್ಯ ಕಂಡ ಎಕ್ಸ್ಟ್ರಾಡಿನರಿ ಪೊಲಿಟೀಶನ್ ‘ಅರಸು’

0

Publicstory/prajayoga

ಕಾಂಗ್ರೆಸ್ ಪಕ್ಷದಲ್ಲಿದ್ದ ಹಿರಿಯರು ಅರಸು ಅವರನ್ನು ತೊರೆದು ರೆಡ್ಡಿ ಕಾಂಗ್ರೆಸ್‌ನತ್ತ ಹೋಗಿದ್ದರು. ಆದರೆ ಇದರಿಂದ ಅರಸು ವಿಚಲಿತರಾಗಲಿಲ್ಲ. ಸಮಾಜದ ಕಟ್ಟಕಡೆಯವರನ್ನು, ಎಲ್ಲ ವರ್ಗಗಳ ಯುವಕರನ್ನು ಗುರುತಿಸಿ, ಅವರ ಮೇಲೆ ವಿಶ್ವಾಸವಿರಿಸಿ ಟಿಕೆಟ್ ನೀಡಿ ಚುನಾವಣಾ ಕಣಕ್ಕಿಳಿಸಿದ್ದರು . 224 ಕ್ಷೇತ್ರಗಳ ಪೈಕಿ 149 ಸ್ಥಾನಗಳನ್ನು ಗೆದ್ದರು. ಯುವಶಕ್ತಿಯ ಮೇಲೆ ಅರಸರಿಗೆ ಅಪಾರ ವಿಶ್ವಾಸವಿತ್ತು. ಮತ್ತು ಅವರ ಪ್ರಬುದ್ಧ ರಾಜಕೀಯ ನಡೆ ಗೆದ್ದಿತ್ತು. ಗೆದ್ದ ಪೈಕಿಯಲ್ಲಿ 40 ಕ್ಕೂ ಹೆಚ್ಚು ಉತ್ಸಾಹಿ ತರುಣರಾದ ಎಚ್. ವಿಶ್ವನಾಥ್, ಕೆ ಆರ್ ರಮೇಶ್ ಕುಮಾರ್, ಟಿ ಬಿ ಜಯಚಂದ್ರ ಇನ್ನು ಮುಂತಾದವರನ್ನು ಶಾಸಕರನ್ನಾಗಿ ಮಾಡಿ ವಿಧಾನ ಸೌಧಕ್ಕೆ ಕರೆತಂದಿದ್ದರು.

ಅರಸು ಕಾರ್ಕಳಕ್ಕೆ ಹೋದಾಗ ಸೈಕಲ್ ಹೊಡೆಯುತ್ತಿದ್ದ ಹುಡುಗಾನೊಬ್ಬ ಅರಸುರವರ ಕಣ್ಣಿಗೆ ಬಿದ್ದನು. ಆ ಹುಡುಗನನ್ನು ತಡೆದು ನಿಲ್ಲಿಸಿ ನಿಮ್ಮ ಭಾಗದಲ್ಲಿ ಗೇಣಿದಾರರು ಹೆಚ್ಚಾಗಿದ್ದಾರೆ. ಅವರನ್ನೆಲ್ಲ ಒಟ್ಟಿಗೆ ಸೇರಿಸಿ ಒಂದು ಸಮಾವೇಶ ಏರ್ಪಡಿಸಬಹುದಾ…! ಎಂದು ಕೇಳಿದರು. ಅದಾದ ಸ್ವಲ್ಪ ದಿನದ ನಂತರ ನಾಲ್ಕೈದು ಸಾವಿರ ಜನ ಸೇರಿಸಿ ದೊಡ್ಡ ಸಮಾವೇಶ. ಆ ಸಮಾವೇಶ ಮುಗಿಯುವಷ್ಟರಲ್ಲಿ ಆ ಸಮಾವೇಶವನ್ನು ವ್ಯವಸ್ಥೆ ಮಾಡಿದ ಸೈಕಲ್ ಹುಡುಗನನ್ನು ಅರಸು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಸಿದ್ದರು.

ಆಗ ಚುನಾವಣೆ ಗೆಲ್ಲಲು ಎರಡು ಮುಖ್ಯ ಅಂಶಗಳಿದ್ದವು. ಒಂದು  ಅತ್ಯಂತ ಹಿಂದುಳಿದ ಜಾತಿಗಳನ್ನು ಗುರುತಿಸುವುದು. ಮತ್ತೊಂದು ಗೆಲುವು. ಇವೆರಡರ ತಾಕಲಾಟಕ್ಕೆ ಬಿದ್ದ ಆ ಸೈಕಲ್ ಹುಡುಗ ನಿಜಕ್ಕೂ ಶಾಕ್‌ಗೊಳಗಾಗಿದ್ದ. ದುಡ್ಡಿಲ್ಲ, ಜಾತಿಯಿಲ್ಲ, ಪೂರ್ವಸಿದ್ಧತೆಗಳಿಲ್ಲ. ಆದರೆ ಅರಸು ಮಾತ್ರ  ಅದೃಶ್ಯ ಮತದಾರರಿದ್ದಾರೆ  ನಮ್ಮನ್ನು ಗೆಲ್ಲಿಸುತ್ತಾರೆ ಎಂದು ನಂಬಿದ್ದರು. ಅರಸು ನಂಬಿಕೆಯನ್ನು ಹುಸಿಗೊಳಿಸದ ಕಾರ್ಕಳದ ಜನ ಆಶ್ಚರ್ಯದಾಯಕ ಫಲಿತಾಂಶವನ್ನು ನೀಡಿ ಆ ಸೈಕಲ್ ಹುಡುಗನನ್ನು ಗೆಲ್ಲಿಸಿದ್ದರು. ಆ ಹುಡುಗ ಮುಂದೆ ಕಾರ್ಕಳದಲ್ಲಿ ಸೋಲರಿಯದ ಸರದಾರ ಎನಿಸಿಕೊಂಡ. ಈ ರಾಜ್ಯದ ಮುಖ್ಯಮಂತ್ರಿಯಾದ, ಕೇಂದ್ರದಲ್ಲಿ ಹಲವು ಖಾತೆಗಳ ಮಂತ್ರಿಯಾದ ಪಕ್ಷದ ಪ್ರಭಾವಿ ನಾಯಕನಾಗಿ ಬೆಳೆದು ನಿಂತ . ಅವರೇ ಎಂ ವೀರಪ್ಪಮೊಯ್ಲಿ.

         ಅಧಿಕಾರದಿಂದ ವಂಚಿತರಗಿದ್ದ ದಲಿತರಿಗೆ ಅಧಿಕಾರವನ್ನು ಕಲ್ಪಿಸಿದ್ದರು. ಎಸ್ ನಿಜಲಿಂಗಪ್ಪರವರ ಕಾಲದಲ್ಲಿ ಒಬ್ಬ ದಲಿತ ಮಂತ್ರಿ ಮಾಡಲಾಗಿತ್ತು. ಅದನ್ನು ಬಿಟ್ಟರೆ ಚೆನ್ನಿಗರಾಯ ಸ್ಪೀಕರ್ ಆಗಿದ್ದರು. ಕರ್ನಾಟಕದ ರಾಜಕಾರಣದಲ್ಲಿ ಇತಿಹಾಸದಲ್ಲಿ ದಲಿತರಿಗೆ ಸ್ಥಾನಮಾನ ಅವಕಾಶವನ್ನು ಅನುಭವಿಸುವ ಸರ್ಕಾರ ಮಾಡಿಕೊಟ್ಟಿರಲಿಲ್ಲ ಇದನ್ನ ಹತ್ತಿರದಿಂದ ಕಂಡಂತಹ ದೇವರಾಜು ಅರಸು ಕಾಲದಲ್ಲಿ ಐವರು ದಲಿತ ನಾಯಕರನ್ನು ಮಂತ್ರಿ ಮಾಡಿದ್ದರು. ಇದು ಸಾಮಾನ್ಯ ಸಂಗತಿಯಲ್ಲ. ಕರ್ನಾಟಕದ ರಾಜಕಾರಣವನ್ನು ಗಮನಿಸಿದರೆ ಲಿಂಗಾಯಿತರು,ಬ್ರಾಹ್ಮಣರು ಮತ್ತು ಒಕ್ಕಲಿಗರುಗಳೇ ಪ್ಯೂಡಲ್  ದರ್ಬಾರು. ಅವರಿಗೆ ದಲಿತರು ಎಂದರೆ ಅಷ್ಟಕ್ಕಷ್ಟೇ. ಅದನ್ನು ಹತ್ತಿರದಿಂದ ಕಂಡಿದ್ದ  ಅರಸು 1972ರಲ್ಲಿ ವಿದ್ಯಾವಂತ ದಲಿತರನ್ನು ಹುಡುಕಿ  ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಿ ಮಂತ್ರಿ ಮಾಡಿದ್ದರು.
ನೆಲೆಯಿಲ್ಲದ “ಹೇಳವರು” ಎಂಬ ಅಲೆಮಾರಿ ಜನಾಂಗಕ್ಕೆ ನೆಲೆಯನ್ನು ಕಲ್ಪಿಸಲು ಮುಂದಾದರು, ಕಾರ್ಯಕ್ರಮ ರೂಪಿಸಿದರು. ಅವರನ್ನು ಭೂಮಾಲೀಕರನ್ನಾಗಿಸಿದರು. ಇಂದು ಆ ಹಟ್ಟಿಗೆ “ದೇವರಾಜು ಅರಸು ಹೆಳವರ ಹಟ್ಟಿ” ಎಂದು ನಾಮಕರಣ ಮಾಡಲಾಗಿದೆ.
     ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದ ಅರಸು. ಜನರು ಅರಣ್ಯವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿ ಕಡಿದು ಹಾಳು ಮಾಡುತ್ತಿದ್ದರು. ಇದನ್ನು ಮನಗಂಡು ಮೈಸೂರಿನಲ್ಲಿ “ಟ್ರೀ ಪ್ರೊಟೆಕ್ಷನ್ ಆಕ್ಟ್ ” ಘೋಷಿಸಿದರು. ಅದು 1976ರಲ್ಲಿ ಕಾಯ್ದೆಯಾಗಿ ರೂಪುಗೊಂಡಿತು.
ಭೂಸುಧಾರಣೆಗಳು ವಿಶೇಷವಾಗಿ ಶ್ಲಾಘಿಸಲ್ಪಟ್ಟವು ಏಕೆಂದರೆ ಅವು ಜಮೀನ್ದಾರ ವ್ಯವಸ್ಥೆಯನ್ನು ಅಳಿಸುವಲ್ಲಿ ಪ್ರಮುಖ ಪಾತ್ರವಹಿಸಿದವು. ಇಲ್ಲಿಯವರೆಗೆ ಬಂಧಿತ ಕಾರ್ಮಿಕರೆಂದು ಪರಿಗಣಿಸಲ್ಪಟ್ಟ ರೈತರಿಗೆ ಅವರು ಸ್ವಾಭಿಮಾನ ಮತ್ತು ಘನತೆಯ ಭಾವವನ್ನು ನೀಡಿದರು. ದೇವರಾಜು ಅರಸು ಅವರು ಮಾಡಿದ ಪ್ರಯತ್ನಗಳು ಮತ್ತು ಬದಲಾವಣೆಗಳಿಂದಾಗಿ ಸಾಮಾಜಿಕ ನ್ಯಾಯದ ಪ್ರಶ್ನೆಯು ದಿನದ ಬೆಳಕನ್ನು ಕಂಡಿತು.
ಹೂಳುವುದಕ್ಕೂ ಜಾಗವಿಲ್ಲದ ಜನಕ್ಕೆ,  ಅಳಿಯ ಬಂದರೆ ಅತ್ತೆ – ಮಾವ ಮನೆಯಿಂದ ಹೊರಗೆ ಮಲಗುವ ಸ್ಥಿತಿಯಿದ್ದ ಮನೆ ಇಲ್ಲದ ಬಡವರಿಗೆ,  ಹೆಂಡತಿಯ ತಾಳಿಯನ್ನು ಅಡವಿಟ್ಟಿದ್ದ ರೈತನಿಗೆ,  ದನಿ ಕಳೆದುಕೊಂಡಿದ್ದ ಅಸಹಾಯಕರಿಗೆ, ಶೋಷಣೆಗೊಳಗಾಗಿದ್ದ ಮಹಿಳೆಯರಿಗೆ, ಪುಡಿ ಸಾಲಕ್ಕೆ ಭೂಮಾಲೀಕರ ಮನೆಯಲ್ಲಿ ಜೀತಕ್ಕಿದ್ದವರಿಗೆ ಸ್ವಾಭಿಮಾನದಿಂದ ಬದುಕುವಂತಹ ಸ್ಥಿತಿ ನಿರ್ಮಿಸಿ ಕೊಟ್ಟವರು ದೇವರಾಜ ಅರಸು. ಇಂತಹ ಕಾಂಕ್ರೀಟ್ ಕಾರ್ಯಕ್ರಮಗಳನ್ನು ಕೊಟ್ಟ ದೇವರಾಜ ಅರಸು ಈ ದೇಶ ಕಂಡ ಮಹಾನ್ ರಾಜಕಾರಣಿ. ಭಾರತದ ರಾಜಕೀಯ ಇತಿಹಾಸದಲ್ಲಿ ಸದಾ ಸ್ಮರಣೀಯರಾಗಿದ್ದಾರೆ.

      ದೇವರಾಜು ಅರಸು ಎಂದಾಕ್ಷಣ ನಮಗೆ ಹಳ್ಳಿ ನೆನಪಾಗುತ್ತದೆ. ಅರಸು ಹಳ್ಳಿಯಿಂದ ಬಂದವರು ಕೃಷಿ ಕುಟುಂಬದ ಕಷ್ಟ-ಸುಖ ಉಂಡವರು. ಆ ಕಾಲಕ್ಕೆ ಪದವಿ ಪಡೆದಿದ್ದರೂ ಸರ್ಕಾರಿ ಕೆಲಸಕ್ಕೆ ಹೋಗದೆ ಹಳ್ಳಿಗೆ ಮರಳಿ ಮಣ್ಣಿನೊಂದಿಗೆ ಬೆರೆತು ಬದುಕಿದ್ದವರು. ಯಾವುದೇ ಕಾರ್ಯಕ್ರಮಕ್ಕೆ ಹೋದರು ಸಹ ಹಳ್ಳಿಜನರ ಬಗ್ಗೆ ಅನುಕಂಪ ಇರುವುದಾಗಿ ಒತ್ತಿ ಒತ್ತಿ ಹೇಳುತ್ತಿದ್ದರು. ಹಳ್ಳಿ ಜನಗಳಿಗೆ ಮೊದಲ ಆದ್ಯತೆ ನೀಡುತ್ತಿದ್ದರು.
     ದೇವರಾಜು ಅರಸುರವರು ಊಟಕ್ಕೆ ಬಹಳ ಬೆಲೆ ಕೊಡುತ್ತಿದ್ದರು. ರುಚಿಕಟ್ಟಾದ ಊಟವನ್ನು ಇಷ್ಟಪಟ್ಟು ಮಾಡುತ್ತಿದ್ದರು. ಉತ್ತರ ಕರ್ನಾಟಕದ ಕಡೆ ಬಂದರೆ ಅಲ್ಲಿನ ಸ್ಥಳೀಯ ಆಹಾರವನ್ನು ಸೇವಿಸಿದ್ದರು. ಅರಸುರವರು ಜೈನ ಸಮುದಾಯಕ್ಕೆ ಸೇರಿದವರಾಗಿದ್ದರೂ ಸಹ
ನಾನ್ ವೆಜ್ ಪ್ರಿಯರಾಗಿದ್ದರು. ನಾಟಿ ಕೋಳಿ ಸಾರು ರಾಗಿ ಮುದ್ದೆಯು ಅಚ್ಚುಮೆಚ್ಚಿನ ಊಟವಾಗಿತ್ತು.
            ದೇವರಾಜು ಅರಸು ಮುಖ್ಯಮಂತ್ರಿ ಆಗಿದ್ದಾಗ ವಿರೋಧ ಪಕ್ಷ ಪ್ರಬಲವಾಗಿತ್ತು. ಎಚ್ ಡಿ ದೇವೇಗೌಡ, ರಾಮಕೃಷ್ಣ ಹೆಗ್ಗಡೆ, ಎ ಕೆ ಸುಬ್ಬಯ್ಯರವರಂತಹ ಘಟಾನುಘಟಿಗಳು ವಿರೋಧ ಪಕ್ಷದಲ್ಲಿದ್ದರು.  ಅಷ್ಟೇ ಅಲ್ಲದೆ, ದೇವರಾಜ ಅರಸು ರವರಿಗೆ ತಮ್ಮದೇಯಾದ ಪಕ್ಷದವರಾದ ಕಾಂಗ್ರೆಸ್ ನಲ್ಲಿ ವಿರೋಧ ಇತ್ತು. ಅರಸು ರವರಿಗೆ ಒಳಗೆ ಮತ್ತು ಹೊರಗೆ ಎರಡು ಕಡೆಯಿಂದ ವಿರೋಧ ವಿದ್ದರೂ ಶಾಸನಸಭೆಯನ್ನು ಅರಸರು ಜಾಣ್ಮೆಯಿಂದ ಬುದ್ಧಿವಂತಿಕೆ ಮತ್ತು ಮತ್ಸದಿತನದಿಂದ ಸಮರ್ಥವಾಗಿ ನಿರ್ವಹಿಸುತ್ತಿದ್ದರು.
        ಉಪಚುನಾವಣೆಯಲ್ಲು ಇಂದಿರಾಗಾಂಧಿಯನ್ನು ಗೆಲ್ಲಿಸಿದ್ದೇ ಅರಸು ರವರಿಗೆ  ಮುಳುವಾಯಿತೇನೋ…? 1978 ರಲ್ಲಿ ಚಿಕ್ಕಮಗಳೂರಿನ ಲೋಕಸಭೆಯ ಉಪಚುನಾವಣೆಯಲ್ಲಿ ಇಂದಿರಾಗಾಂಧಿಯವರನ್ನು 16,000 ಮತಗಳ ಅಂತರದಿಂದ ಭರ್ಜರಿ ವಿಜಯದ ನಂತರ ದೇವರಾಜ ಅರಸು ರವರ ದುರಂತದ ದಿನಗಳು ಆರಂಭವಾದವು. ದೇಶಾದ್ಯಂತ ಅರಸುರವರ ಜನಪ್ರಿಯತೆ ಕಂಡು ಅಸೂಯೆ ಪಡುವ ಕೆಲವರು ಕಾಂಗ್ರೆಸ್ ನಲ್ಲಿ ಇದ್ದರು. ನಿರಂತರವಾಗಿ ಅರಸು ವಿರುದ್ಧ ಪಿತೂರಿ ಮಾಡುತ್ತಿದ್ದರು. ಜೊತೆಗೆ ಚಿಕ್ಕಮಗಳೂರು ಚುನಾವಣೆಯ ವಿಜಯದ ನಂತರ ಅವರನ್ನು ರಾಷ್ಟ್ರ ಗಮನಿಸುತ್ತಿದ್ದು. ಈ ಕೆಲವು ಮಾಧ್ಯಮಗಳು ಅರಸರನ್ನು ಹೊಗಳಿ ಅಟ್ಟಕ್ಕೇರಿಸಿದ್ದವು ಇದೇ ಅವರ ಕಣ್ಣುರಿಗೆ ಕಾರಣವಾಗಿತ್ತು.

        ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗ್ರಾಮದಲ್ಲಿ ಪುರಾತನ ತಾಳೆಗರಿ ಬರಹ ಓದಿ ಭವಿಷ್ಯ ನುಡಿಯುವ ಕೋಡಿಮಠದ ಸ್ವಾಮೀಜಿಯೊಬ್ಬರಿದ್ದರು. “ಅರಸು ರವರಿಗೆ ಭಾರತ ಪ್ರಧಾನಿಯಾಗುವ ಯೋಗವಿದೆ” ಎಂದು ಸ್ವಾಮೀಜಿ ಭವಿಷ್ಯವಾಣಿ ನುಡಿದಿದ್ದು ಎಲ್ಲಾ ಕಡೆ ಪ್ರಚಾರವಾಗಿತ್ತು. ಕಾಕತಾಳಿಯ ಏನೋ ಇದೆ ಸ್ವಾಮೀಜಿ ಇಂದಿರಾ ಗಾಂಧಿಗೂ ಭವಿಷ್ಯ ನುಡಿದಿದ್ದರು. ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಅವರನ್ನು ದೆಹಲಿಗೆ ವಿಮಾನದಲ್ಲಿ ಕರೆದುಕೊಂಡು ಹೋಗಿದ್ದರು ಹಾಗಾಗಿ ಆ ಸ್ವಾಮೀಜಿಯ ಮಾತಿನ ಬಗ್ಗೆ ಭವಿಷ್ಯಕ್ಕೆ ರಾಜಕೀಯ ವಲಯದಲ್ಲಿ ಬೆಲೆ ಇತ್ತು.
ಅರಸು ತಮ್ಮ ಅಧಿಕಾರ ಕಳೆದುಕೊಳ್ಳಲು ಮೂರು ಮುಖ್ಯ ತಪ್ಪು ಹೆಜ್ಜೆಗಳನ್ನಿಟ್ಟರು ಎಂದು ಭಾಸವಾಗುತ್ತದೆ. ಮೊದಲನೆಯದು ಇಂದಿರಾ ಗಾಂಧಿಯವರನ್ನು ಎದುರು ಹಾಕಿಕೊಂಡಿದ್ದು, ಎರಡನೆಯದು ಸ್ವಂತ ಪಕ್ಷ ಕಟ್ಟಿದ್ದು, ಮೂರನೆಯದು ಜ್ಯೋತಿಷಿಗಳ ಮಾತು ಕೇಳಿದ್ದು.
ಇಂದಿರಾ ಗಾಂಧಿಯವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಿದ ನಂತರ ಅರಸುರವರ ಅಹಂ ಹೆಚ್ಚಾಯಿತು. ಅದಕ್ಕೆ ಸರಿಯಾಗಿ ಮಾಧ್ಯಮಗಳು ಗಾಳಿಯಲ್ಲಿ ಕಲ್ಲು ಹೊಡೆದು ಉಬ್ಬಿಸಿ ಹಾಳು ಮಾಡಿದವು.
ರಾಷ್ಟ್ರೀಯ ನಾಯಕನೆಂದು ಭ್ರಮಿಸಿ ಸ್ವಂತ ಪಕ್ಷ ಕಟ್ಟಿ ಚುನಾವಣೆಗೆ ಸ್ಪರ್ಧಿಸಿದರು. ಸೋತು ಮನೆಗೆ ಬಂದರು. ಇವುಗಳಿಗೆಲ್ಲ ಕಾರಣ ಅವರನ್ನು ದಾರಿ ತಪ್ಪಿದ ಚಿಲ್ಲರೆ ಜ್ಯೋತಿಷಿಗಳು. ಅವರ ಮಾತು ಕೇಳಿ ದೇವರಿಗೆ, ದೆವ್ವಕ್ತಿ, ಕಲ್ಲಿಗೆ, ಮರಕ್ಕೆ ಕೈ ಮುಗಿದರು. ಅವರ ವ್ಯಕ್ತಿತ್ವಕ್ಕೆ ಮುಖಕ್ಕೆ ಮಸಿ ಬಳಿದುಕೊಂಡರು.

ಸಿದ್ದು ಬಿಎಸ್ ಸೂರನಹಳ್ಳಿ, ತಿಪಟೂರು

ಬರಹ ಲೇಖಕರ ಅಭಿಪ್ರಾಯ, ವೆಬ್‌ಸೈಟ್‌ನ ಅಭಿಪ್ರಾಯ

ಬಿಜೆಪಿ‌ ವಿರುದ್ಧ ಸಿದ್ದರಾಮಯ್ಯ ಕಠೋರ ವಾಗ್ದಾಳಿ

Publicstory/prajayoga

ಬೆಂಗಳೂರು : ಕೊಡಗು ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಿರುವುದರಿಂದ ಕಾನೂನಿಗೆ ಮನ್ನಣೆ ನೀಡಿ ಆಗಸ್ಟ್ 26ರ ಪ್ರತಿಭಟನೆಯನ್ನು ಮುಂದೂಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಪಕ್ಷದ ನಾಯಕರ ಜೊತೆ ಚರ್ಚಿಸಿ ಪ್ರತಿಭಟನೆಯ ಮುಂದಿನ ದಿನವನ್ನು ನಿರ್ಧಾರ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊಡಗಿನಲ್ಲಿ ನಡೆದ ಮೊಟ್ಟೆ ಎಸೆತಕ್ಕೆ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದ ಮುಖಾಂತರ ಪ್ರತಿಕ್ರಿಯಿಸಿರುವ ಅವರು,  ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಭದ್ರತಾ ವೈಫಲ್ಯ ಮತ್ತು ಅತಿವೃಷ್ಟಿ ಪರಿಹಾರದಲ್ಲಿ ಸ್ಥಳೀಯ ಶಾಸಕರ ಭ್ರಷ್ಟಾಚಾರದ ವಿರುದ್ಧ ನಾವು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೆವು. ಲಕ್ಷಾಂತರ ಮಂದಿ ಭಾಗವಹಿಸುವ ಈ ಸಮಾವೇಶದಲ್ಲಿ ಸರ್ಕಾರದ ವೈಫಲ್ಯ ಬಯಲಾಗುತ್ತದೆ ಎಂಬ ಭೀತಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ನಮ್ಮ ಪ್ರತಿಭಟನೆಗೆ ಹೆದರಿ ಅದನ್ನು ರದ್ದುಪಡಿಸಬೇಕೆಂಬ ಉದ್ದೇಶದಿಂದಲೇ ಬಿಜೆಪಿ ಅದೇ ದಿನ ಜನಜಾಗೃತಿ ಸಮಾವೇಶ ನಡೆಸಲು ಹೊರಟಿದೆ. ಪೊಲೀಸರ ನಿಷ್ಕ್ರಿಯತೆಯನ್ನು ಮುಚ್ಚಿಹಾಕುವ ದುರುದ್ದೇಶದಿಂದಲೇ ಪಕ್ಷದಿಂದ ಸಮಾವೇಶ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಜನ ಸುಲಭದಲ್ಲಿ ಅರ್ಥಮಾಡಿಕೊಳ್ಳುತ್ತಾರೆ.

ಕೊಡಗಿನ ಜನರು ನೇರ ನಡೆ-ನುಡಿಯ ನ್ಯಾಯದ ಪರವಾಗಿರುವ ಜನ. ನಮ್ಮ ಪ್ರತಿಭಟನೆ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧವಾಗಿತ್ತೇ ಹೊರತು ಕೊಡಗಿನ ಜನರ ವಿರುದ್ಧವಾಗಿರಲಿಲ್ಲ. ಅಲ್ಲಿನ ಜನ ಬಿಜೆಪಿ ಶಾಸಕರ ವಿರುದ್ಧ ತಿರುಗಿಬಿದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರುಬಿಜೆಪಿಗೆ ಬುದ್ಧಿ ಕಲಿಸಲಿದ್ದಾರೆ.
ಪ್ರತಿಭಟನೆ ವಿರೋಧ ಪಕ್ಷದ ಹಕ್ಕು. ಆಡಳಿತ ಪಕ್ಷ ಪ್ರತಿಭಟನೆಗೆ ಕಾರಣ ತಿಳಿದುಕೊಂಡು ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಆದರೆ ಶಾಸಕ ಬೋಪಯ್ಯ ಅವರು ಕೊಡಗಿಗೆ ಬರಲಿ ನೋಡ್ಕೋತಿವಿ ಎಂದು ನನಗೆ ಸವಾಲು ಹಾಕುತ್ತಾರೆ. ಇದೇ ರೀತಿ ಸವಾಲು ಹಾಕಿದ್ದ ಬಳ್ಳಾರಿ ರೆಡ್ಡಿಗಳು ಏನಾದರೂ ಎನ್ನುವುದು ಇವರ ನೆನಪಲ್ಲಿರಲಿ.
ನನ್ನ ಮೇಲೆ ಮೊಟ್ಟೆ ಒಡೆದದ್ದು ತಪ್ಪು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈಗ ಇವರಿಬ್ಬರು ಅದೇ ಘಟನೆಯ ವಿರುದ್ಧ ನಾವು ಮಾಡುವ ಪ್ರತಿಭಟನೆಯನ್ನೂ ತಪ್ಪು ಎಂದು ಹೇಳುತ್ತಿದ್ದಾರೆ. ಯಾಕಿಂತಹ ದ್ವಂದ್ವ?

ವಾಸ್ತವದಲ್ಲಿ ನಾನು ಕೊಡಗಿನಲ್ಲಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ನಾನು ಆ ದಿನ ಕಳಲೆಪಲ್ಯ ಮತ್ತು ಅಕ್ಕಿರೊಟ್ಟಿ ತಿಂದಿದ್ದೆ. ಇದನ್ನು ಮಾಜಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರೂ ಹೇಳಿದ್ದಾರೆ. ವಾದಕ್ಕಾಗಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಬಾರದು ಎಂದು ಎಲ್ಲಿ ಹೇಳಿದೆ? ಎಂದು ಪ್ರಶ್ನಿಸಿದ್ದೆ.
ಮಾಂಸ ತಿಂದು ದೇವಸ್ಥಾನಕ್ಕೆ ಹೋದರೂ ತಪ್ಪಲ್ಲ ಎಂದು ಹಿಂದೂ ಸಂಘಟನೆಯ ಪ್ರಮೋದ್ ಮುತಾಲಿಕ್ ಹೇಳಿದ್ದಾರಂತೆ. ಅದೇ ರೀತಿ ಜ್ಯೋತಿಷಿ ದೈವಜ್ಞ ಸೋಮಯಾಜಿಯವರು ಹೇಳಿದ್ದಾರೆ. ಬಿಜೆಪಿ ಪಕ್ಷದ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡರೂ ಇಂತಹ ವಿಷಯಗಳನ್ನೆಲ್ಲ ವಿವಾದ ಮಾಡಬಾರದು ಎಂದು ಹೇಳಿದ್ದಾರೆ.

ಮಾಂಸಾಹಾರ ಮನುಷ್ಯನ ವೈಯಕ್ತಿಕ ವಿಚಾರ. ಯಾವುದಾದರೂ ಧಾರ್ಮಿಕ ಕೇಂದ್ರಗಳಲ್ಲಿ ಅಂತಹ ನಿರ್ಬಂಧಗಳಿದ್ದರೆ ಖಂಡಿತ ನಾವು ಅದನ್ನು ಪಾಲಿಸಬೇಕು. ನನಗೆ ತಿಳಿದಂತೆ ಎಲ್ಲಿಯೂ ಮೀನು-ಮಾಂಸ ತಿಂದು ದೇವಸ್ಥಾನಕ್ಕೆ ಬರಬಾರದು ಎಂಬ ನಿರ್ಬಂಧ ಇಲ್ಲ. ಹೀಗಿದ್ದಾಗ ಯಾಕೆ ಈ ವಿವಾದ?
ಹಂದಿ ಮಾಂಸ ತಿಂದು ಮಸೀದಿಗೆ ಹೋಗ್ತಿರಾ? ಎಂದು ಸಂಸದ ಪ್ರತಾಪ ಸಿಂಹ ಕೇಳಿದ್ದಾರೆ. ನಾನು ನನ್ನ ಜೀವನದಲ್ಲಿ ಹಂದಿ ಮಾಂಸ ತಿಂದಿಲ್ಲ, ತಿನ್ನುವವರನ್ನು ಬೇಡ ಎನ್ನುವುದಿಲ್ಲ. ನನಗೆ ತಿಳಿದ ಹಾಗೆ ಮಸೀದಿಯಲ್ಲಿ ಅಂತಹ ನಿರ್ಬಂಧ ಇಲ್ಲ. “ಬೇಕಾದರೆ ಪ್ರತಾಪಸಿಂಹನೇ ಹಂದಿ ತಿಂದು ಹೋಗಲಿ”.
ರಾಜ್ಯ ಸರ್ಕಾರದ ವಿರುದ್ಧ ಜನ ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಜನಾಕ್ರೋಶವನ್ನು ಬೇರೆ ಕಡೆ ತಿರುಗಿಸುವ ಉದ್ದೇಶದಿಂದಲೇ ಇಂತಹ ಧರ್ಮ-ದೇವರಿಗೆ ಸಂಬಂಧಿಸಿದ ವಿವಾದವನ್ನು ಸೃಷ್ಟಿಸಿ ನನ್ನನ್ನು ಹಿಂದುವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.  ಪ್ರಜ್ಞಾವಂತ ಮತದಾರರಿಗೆ ಈ ಕಳ್ಳಾಟವೆಲ್ಲ ಗೊತ್ತಾಗಿದೆ. 

ಕೊಡಗು ಜಿಲ್ಲೆ 2019, 2020, 2021 ಮತ್ತು ಈ ವರ್ಷ ನಿರಂತರವಾಗಿ ಅತಿವೃಷ್ಟಿಗೆ ಈಡಾಗಿದೆ. ನಮ್ಮ ಸರ್ಕಾರ 750 ಮನೆಗಳನ್ನು ಕಟ್ಟಿಸಿಕೊಟ್ಟಿದ್ದನ್ನು ಬಿಟ್ಟರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಯಾವ ಹೊಸ ಮನೆ ಕಟ್ಟಿಕೊಟ್ಟಿಲ್ಲ, ಪರಿಹಾರವನ್ನೂ ಸರಿಯಾಗಿ ವಿತರಿಸಿಲ್ಲ, ಕುಸಿದುಬಿದ್ದಿರುವ ಸೇತುವೆ-ರಸ್ತೆಗಳು ದುರಸ್ತಿಯಾಗಿಲ್ಲ.
ಮಳೆಯಿಂದ ಮಣ್ಣು ಕುಸಿದ ಜಾಗಗಳಲ್ಲಿ  ಸೇತುವೆಯ ಬದಲಿಗೆ ವೆಂಟೆಡ್ ಡ್ಯಾಮ್ ಕಟ್ಟಿದ್ದಾರೆ. ಇದರಿಂದ ಕಸ-ಕಲ್ಲು, ಮರದ ತುಂಡುಗಳು ಹರಿವ ನೀರಿಗೆ ಅಡ್ಡವಾಗಿ, ಮನೆ-ಶಾಲೆಗಳಿಗೆ ನೀರು ನುಗ್ಗಿದೆ. ಕೆಲವುಸಂತ್ರಸ್ತರಿಗೆ ಹತ್ತು ಸಾವಿರ ರೂಪಾಯಿ ಪರಿಹಾರದ ಚೆಕ್ ಕೊಟ್ಟು ಸುಮ್ಮನಾಗಿದ್ದಾರೆ. 

ಮಡಿಕೇರಿಯಲ್ಲಿ ಮಿನಿವಿಧಾನಸೌಧ ನಿರ್ಮಿಸಲಾಗಿದ್ದು ಅದಕ್ಕೆ ತಡೆಗೋಡೆ ಕಟ್ಟಿದ್ದಾರೆ. ಏಳುವರೆ ಕೋಟಿ ರೂಪಾಯಿ ವೆಚ್ಚದ ಈ ತಡೆಗೋಡೆ ಆಗಲೇ ಬಿದ್ದುಹೋಗಿದೆ. ಮುಖ್ಯಮಂತ್ರಿಯವರ ಭೇಟಿಯ ವೇಳೆಯೂ ಅದನ್ನು ಮುಚ್ಚಿಟ್ಟಿದ್ದಾರೆ. ನಾನು ಕೂಡಾ ಅಲ್ಲಿಗೆ ಹೋಗಬಾರದೆಂದು ಶಾಸಕರು ಮತ್ತು ಗುತ್ತಿಗೆದಾರರು ಸೇರಿ ನನ್ನ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಅತಿವೃಷ್ಟಿ ಪರಿಹಾರ ಕಾರ್ಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರಿಹಾರ ಕಾಮಗಾರಿಗಳನ್ನು ನೋಡಿದರೆ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿರುವುದು ಗೊತ್ತಾಗುತ್ತದೆ. ಕಳೆದ ಮೂರು ವರ್ಷಗಳ ಅತಿವೃಷ್ಟಿ ಕಾಮಗಾರಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ರಾಜ್ಯ ಸರ್ಕಾರ ಸಮಗ್ರವಾಗಿ ತನಿಖೆ ಮಾಡಬೇಕೆಂದು ಒತ್ತಾಯಿಸುತ್ತಿದ್ದೇನೆ.

ಕೊಡಗಿನಲ್ಲಿ ನನ್ನ ವಿರುದ್ದ ನಡೆದ ಪ್ರತಿಭಟನೆ ಪೂರ್ವಯೋಜಿತವೆನ್ನುವುದು ಪೊಲೀಸರ ನಿಷ್ಕ್ರಿಯತೆಯಿಂದ ಸ್ಪಷ್ಟವಾಗಿದೆ. ಮೊದಲ ಸಲ ಪ್ರತಿಭಟನೆ ನಡೆದಾಗಲೇ ಪೊಲೀಸರು ಎಚ್ಚರಿಕೆ ವಹಿಸಬೇಕಾಗಿತ್ತು. ಆದರೆ ಅವರು ಕಣ್ಣುಮುಚ್ಚಿಕೊಂಡು ಷಾಮೀಲಾಗಿದ್ದ ಕಾರಣದಿಂದಲೇ ನಂತರ 3-4 ಕಡೆ ಪ್ರತಿಭಟನೆ ನಡೆದವು.
ಬಿಜೆಪಿ ನಾಯಕರು ಹುಟ್ಟು ಸುಳ್ಳುಕೋರರು. ಮೊಟ್ಟೆ ಎಸೆದವನು ಕಾಂಗ್ರೆಸ್ ಕಾರ್ಯಕರ್ತನೆಂದು ಈಗ ಸುಳ್ಳು ಹೇಳುತ್ತಿದ್ದಾರೆ. ಮಾಜಿ ಸಚಿವ ಜಿವಿಜಯ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರೂ ಮೊಟ್ಟೆ ಎಸೆದ ಸಂಪತ್ ನಮ್ಮ ಪಕ್ಷದವನಲ್ಲ, ಬಿಜೆಪಿಯವನು ಎಂದು ಹೇಳಿ ಬಿಜೆಪಿ ಸುಳ್ಳನ್ನು ಬಯಲು ಮಾಡಿದ್ದಾರೆ ಎಂದು  ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಬೂಸ ಹೊತ್ತ ಲಾರಿ ಪಲ್ಟಿ

Publicstory/prajayoga

– ವರದಿ, ವೆಂಕಟೇಶ್ ನಾಗಲಾಪುರ

ತುಮಕೂರು: ನಗರದ ಹೊರ ವಲಯ  ಮರಳೂರು ರಿಂಗ್ ರಸ್ತೆಯಲ್ಲಿ ಲಾರಿ ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು‌ ಬೆಳಿಗ್ಗೆ ನಡೆದಿದೆ‌.

ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಗುಬ್ಬಿಯ ಕಡೆ ಚಲಿಸುತ್ತಿದ್ದ ಬೂಸದ ಮೂಟೆ ಹೊತ್ತ ಲಾರಿಯು ವೇಗವಾಗಿ ಸಾಗುತ್ತಿತ್ತು. ಈ ವೇಳೆ ಚಾಲಕನಿಗೆ ನಿಯಂತ್ರಣ ಸಿಗದೆ ಲಾರಿ ಉರುಳಿ ಬಿದ್ದಿರಬಹುದು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.
ಈ ಅಪಘಾತದಿಂದ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.