ತುರುವೇಕೆರೆ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರ ಮಹಾ ಸಮ್ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.27ರಂದು ಹಮ್ಮಿಕೊಳ್ಳಲಾಗಿದ್ದು ತಾಲ್ಲೂಕಿನಿಂದ ಒಂದು ಸಾವಿರಕ್ಕೂ ಹೆಚ್ಚು ನೌಕರರು ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದಾರೆ ಎಂದು ಸಕರ್ಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ನಂರಾಜುಮುನಿಯೂರು ತಿಳಿಸಿದ್ದಾರೆ.
ಪಟ್ಟಣದಲ್ಲಿರುವ ವಿವಿಧ ಇಲಾಖೆಗಳ ನೌಕರರಿಗೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ವಿತರಿಸಿ ಮಾತನಾಡಿದ ಅವರು ಕಳೆದ ಏಳು ವರ್ಷಗಳ ನಂತರ ಸರ್ಕಾರಿ ನೌಕರರ ಸಮ್ಮೇಳವನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನ ಶಾಸಕರು ಹಾಗು ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರೂ ಆಗಿರುವ ಎಂ.ಟಿ.ಕೃಷ್ಣಪ್ಪನವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಕೇಂದ್ರಬಿಂದುವಾಗಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ನಮ್ಮ ಹಕ್ಕು ನೆಮ್ಮದಿಯ ಬದುಕಿಗಾಗಿ ನಮ್ಮ ಬೇಡಿಕೆಗಳು ಎಂಬ ಘೋಷಣೆಯಡಿ ಹಳೆಪಿಂಚಣಿ ಯೋಜನೆ ಮರು ಜಾರಿ, 7ನೇತನ ಆಯೋಗದ ವರದಿಯ ಅನುಷ್ಠಾನ ಹಾಗು ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಂತಹ ಬೇಡಿಕೆಗಳ ಈಡೇರಿಗೆ ಮನವಿಸಲಾಗುತ್ತದೆ. ಈ ವೇಳೆ 4 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ. ಆದ್ದರಿಂದ ತಾಲ್ಲೂಕಿನ ಸಮಸ್ಥ ನೌಕರ ಬಂಧುಗಳು ಸಮ್ಮೇಳನಕ್ಕೆ ಭಾಗವಹಿಸುವ ಮೂಲಕ ತಮ್ಮ ಶಕ್ತಿಯನ್ನು ಪ್ರದರ್ಶಿಸಿ ನಮ್ಮ ಹಕ್ಕುಗಳನ್ನು ಪಡೆಯಬೇಕಿದೆ ಎಂದ ಅವರು.
ತಾಲ್ಲೂಕಿನ ವಿವಿಧ ಇಲಾಖೆಗಳ ನೌಕರರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ. ಫೆ.27ರ ಬೆಳಗ್ಗೆ 6 ಗಂಟೆಗೆ ಎಲ್ಲ ನೌಕರರು ಸಂಘದ ಕಚೇರಿ ಮುಂದೆ ಬನ್ನಿ. ಇಲ್ಲಿಯೇ ತಿಂಡಿ ಮತ್ತು ಬಸ್ ಸೌಕರ್ಯ ಇರಲಿದೆ. ಇದೇ ರೀತಿ ದಂಡಿನಶಿವರ ಮತ್ತು ಮಾಯಸಂದ್ರದಿಂದ ಬರುವ ನೌಕರರಿಗೆ ಅಲ್ಲಿಯೇ ಬಸ್ ಬರಲಿದೆ. ಸಮ್ಮೇಳನಕ್ಕೆ ಭಾಗವಹಿಸುವ ನೌಕರ ಬಂಧುಗಳಿಗೆ ಓ.ಓ.ಡಿ ಸೌಲಭ್ಯವಿದೆ. ಈ ಬಾರಿ ಹೆಚ್ಚಿನ ಸಂಖ್ಯೆ ಮಹಿಳಾ ನೌಕರರು ಭಾಗವಹಿಸುವ ನಿರೀಕ್ಷೆ ಇದೆ.
ಫೆ.21 ಮತ್ತು 22ರಂದು ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸಕರ್ಾರಿ ನೌಕರರ ಜಿಲ್ಲಾ ಕ್ರೀಡಾಕೂಟ ಹಾಗು ಸಾಂಸ್ಕೃತಿಕ ಕಾರ್ಯಕ್ರಮ ಕೂಡ ಇರಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಎರಡೂ ಕಾರ್ಯಕ್ರಮಕ್ಕೆ ತಾಲ್ಲೂಕಿನ ನೌಕರರು ಆಗಮಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಸಂಘದ ಖಜಾಂಚಿ ನಾಗರಾಜು ಎಚ್.ಸಿ, ರಾಜ್ಯಪರಿಷತ್ ಸದಸ್ಯ ಎಂ.ವಿ.ಗಿಡ್ಡೇಗೌಡ, ಉಪಾಧ್ಯಕ್ಷರಾದ ವೀರಪ್ರಸನ್ನ ಚಂದ್ರಹಾಸ ಮತ್ತು ಬಾಲಾಜಿ, ಪ್ರಾಥಮಿಕ ಜಿಲ್ಲಾ ಕೋಶಾಧ್ಯಕ್ಷ ಷಣ್ಮುಖಪ್ಪ, ಸಾವಿತ್ರಿಭಾಪುಲೆ ಸಂಘದ ತಾಲ್ಲೂಕು ಅಧ್ಯಕ್ಷೆ ಎಂ.ಟಿ.ಭವ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಪಿ.ರಾಘವೇಂಧ್ರ, ಜಿಲ್ಲಾ ಸಕರ್ಾರಿ ನೌಕರರ ಸಂಘದ ಉಪಾಧ್ಯಕ್ಷ ಸಾ.ಸಿ.ದೇವರಾಜು, ಪ್ರೌಢ ಶಾಲಾ ಶಿಕ್ಷಕರ ಸಂಘದ ಗುರುರಾಜ್, ಸಂಘದ ಪದಾಧಿಕಾರಿ ರಂಗರಾಮಯ್ಯ ಇನ್ನಿತರರು ಇದ್ದರು.