Thursday, March 28, 2024
Google search engine
Homeಜಸ್ಟ್ ನ್ಯೂಸ್ಶಾಲೆಗೆ ಬಂದ ಮಕ್ಕಳು ಕುಣಿದಾಡಿದರು...

ಶಾಲೆಗೆ ಬಂದ ಮಕ್ಕಳು ಕುಣಿದಾಡಿದರು…

ತುರುವೇಕೆರೆ: ತಾಲ್ಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 2023-24 ನೇ ಸಾಲಿನ ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವದ ಪೂರ್ವ ಸಿದ್ಧತಾ ಕಾರ್ಯ ಸೋಮವಾರ ಭರದಿಂದ ಸಾಗಿತು.

ಪ್ರತಿಯೊಂದು ಶಾಲೆಗಳಲ್ಲೂ ಶಿಕ್ಷಕರು, ಸಿಬ್ಬಂದಿಗಳು ಹಾಗು ಮಕ್ಕಳು ಶಾಲಾ ಆವರಣ, ಕೈ ತೋಟದ ಸ್ವಚ್ಛತಾ ಕಾರ್ಯ ಮಾಡಿದರು. ಬಿಸಿಯೂಟ ತಯಾರಿಸುವ ಕೊಠಡಿ, ಅಡುಗೆ ಪಾತ್ರೆಗಳು, ಆಹಾರ ಪದಾರ್ಥಗಳು, ಕುಡಿಯುವ ನೀರಿನ ಟ್ಯಾಂಕ್ಗಳನ್ನು ಹಾಗು ಶೌಚಾಲಯವನ್ನು ಶುಚಿಗೊಳಿಸಿದರು.

ಇದಾದ ಮೇಲೆ ಎಲ್ಲ ತರಗತಿ ಕೊಠಡಿಗಳ ದೂಳನ್ನು ಒಡೆದು ನೆಲವನ್ನು ಸ್ವಚ್ಛಗೊಳಿಸಿ ಕಟ್ಟಡಗಳ ಶಿಥಿಲಾವ್ಯವಸ್ಥೆಯ ರಿಪೇರಿ ಮಾಡಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಗ್ರಾಮಗಳಲ್ಲಿ ಫ್ಲೆಕ್ಸ್ ಮತ್ತು ಕರ ಪತ್ರ ಹಂಚುವ ಮೂಲಕ ಶಿಕ್ಷಕರು ಮತ್ತು ಮಕ್ಕಳು ಮನೆಮನೆ ದಾಖಲಾತಿ ಆಂದೋಲನ ನಡೆಸಿದರು.

ಆಯಾ ಶಾಲೆಗಳಲ್ಲಿ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಸೇರಿ ಸಭೆ ನಡೆಸಿ ಪ್ರಸಕ್ತ ಸಾಲಿನ ಶೈಕ್ಷಣಿಕ ಕಾರ್ಯಯೋಜನೆಗಳ ಬಗ್ಗೆ ಚಚರ್ಿಸಿದರು.

‘ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ.ಪದ್ಮನಾಭ ಕೆಲ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಪ್ರಾರಂಭೋತ್ಸವದ ಸಿದ್ಧತೆ, ದಾಖಲಾತಿ ಬಿಸಿಯೂಟದ ವ್ಯವಸ್ಥೆ, ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಯ ಸಿದ್ಧತೆ ಪರಿಶೀಲನೆ ನಡೆಸಿ ಶಿಕ್ಷಕರೊಂದಿಗೆ ಸಭೆ ನಡೆಸಿ ಕಳೆದ ಸಾಲಿನ ಫಲಿತಾಂಶದ ಪರಾಮಶರ್ೆ ಮಾಡಿ ಮುಂದಿನ ವರ್ಷದ ಫಲಿತಾಂಶ ಉತ್ತಮ ಪಡಿಸಿಕೊಳ್ಳಬೇಕೆಂದು ಸೂಚಿಸಿದರು.’

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?