Saturday, April 13, 2024
Google search engine
Homeಜಸ್ಟ್ ನ್ಯೂಸ್ಸಹಾಯಹಸ್ತ ನೀಡಿದ ಆದಿಚುಂಚನಗಿರಿ ಶ್ರೀ

ಸಹಾಯಹಸ್ತ ನೀಡಿದ ಆದಿಚುಂಚನಗಿರಿ ಶ್ರೀ

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಎಸ್.ಬಿ.ಜಿ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಅಂತರರಾಷ್ಟ್ರೀಯ ಡಾಡ್ಜ್ ಬಾಲ್ ಸ್ಪರ್ಧೆಗಾಗಿ ಭಾರತ ತಂಡವನ್ನು ಪ್ರತಿನಿಧಿಸುವ ಸಲುವಾಗಿ ಮೇ.23ರಂದು ಮಲೇಷಿಯಾಗೆ ತೆರಳುತ್ತಿರುವವರಿಗೆ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ನೆರವು ನೀಡಿದರು.

ಕ್ರೀಡಾಪಟುಗಳಾದ ಮಾನಸ.ಜಿ ಮತ್ತು ವೇದಾವತಿಯವರನ್ನು ಪ್ರಸನ್ನನಾಥ ಸ್ವಾಮೀಜಿಯವರು ಆಶೀರ್ವದಿಸಿ ಧನಸಹಾಯ ನೀಡಿದರು. ದೇಶ ಹಾಗೂ ತಾವು ಓದಿದ ಕಾಲೇಜಿಗೆ ಕೀರ್ತಿ ತರಬೇಕೆಂದು ಕಿವಿ ಮಾತು ಹೇಳಿ ಕಳುಹಿಸಿಕೊಟ್ಟರು.

ತುರುವೇಕೆರೆ ತಾಲ್ಲೂಕು ಒಕ್ಕಲಿಗರ ಸಂಘದಿಂದ ಹತ್ತು ಸಾವಿರ ರೂಪಾಯಿ ನೀಡಿದರೆ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕ್ರೀಡಾಪಟು ಜಿ.ಮಾನಸಳಿಗೆ ತುರುವೇಕೆರೆಯ ಲಯನ್ಸ್ ಚಾರಿಟಬಲ್ ಟ್ರಸ್ಟ್ ಹತ್ತು ಸಾವಿರ ರೂಪಾಯಿ ಹಾಗೂ ಸಂಶೋಧನಾ ಬರಹಗಾರ ಪ್ರೊ.ಕೆ.ಪುಟ್ಟರಂಗಪ್ಪನವರ ಸ್ನೇಹಿತರು ಮತ್ತು ಹಿತೈಷಿಗಳು ಮೂವತ್ತೈದು ಸಾವಿರ ರೂಪಾಯಿ ನೀಡಿದರು.


ಈ ಸಂದರ್ಭದಲ್ಲಿ ತರಬೇತುದಾರ ಉದಯ್ ಕುಮಾರ್, ಸಂಶೋಧನಾ ಬರಹಗಾರ ಪ್ರೊ.ಕೆ.ಪುಟ್ಟರಂಗಪ್ಪ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?