Saturday, July 27, 2024
Google search engine
Homeಜಸ್ಟ್ ನ್ಯೂಸ್ಸೋಮಣ್ಣ ಉಮೇದುವಾರಿಕೆ ರದ್ದು?

ಸೋಮಣ್ಣ ಉಮೇದುವಾರಿಕೆ ರದ್ದು?

ಚಾಮರಾಜನಗರ: ಇಲ್ಲಿನ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ವಸತಿ ಸಚಿವ ವಿ.ಸೋಮಣ್ಣ ಅವರ ಉಮೇದುವಾರಿಕೆ ರದ್ದು ಆಗುವ ಸಂಭವವಿದೆ.

ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ( ಆಲೂರು ಮಲ್ಲು) ಅವರಿಗೆ ಕರೆ ಮಾಡಿ ಸ್ಪರ್ಧೆಯಿಂದ ಹಿಂತೆಗೆದರೆ ಬಿಜೆಪಿ ಅಧಿಕಾರಕ್ಕೆ ಬಂದರೆ ಗೂಟದ ಕಾರು ಕೊಡುವುದಾಗಿ ಆಮಿಷ ಒಡ್ಡಿದ್ದರು. ಈ ವಿಡಿಯೊ ವ್ಯಾಪಕವಾಗಿ ಹರಿದಾಡಿತ್ತು.

ಇದರ ಆಧಾರದಲ್ಲಿ ಕೇಂದ್ರ ಚುನಾವಣಾ ಆಯೋಗ ದ ಸೂಚನೆ ಮೇರೆಗೆ ಸೋಮಣ್ಣ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 ರ ಅಡಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿತ್ತು. ಈ ಆಧಾರದಲ್ಲಿ ಸೋಮಣ್ಣ ಉಮೇದುವಾರಿಕೆ ರದ್ದುಪಡಿಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ಆರೋಪ ಸಾಬೀತಾದರೆ ಒಂದು ವರ್ಷ ಜೈಲು ಅಥವಾ ದಂಡದ ಶಿಕ್ಷೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?