ತುಮಕೂರು: ಗೃಹ ಸಚಿವ ಡಾ.ಜಿ
ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಟೆಲಿಕಾಂ ಇಂಜಿನಿಯರಿಂಗ್ ತೃತೀಯ ಸೆಮಿಸ್ಟರ್’ನಲ್ಲಿ ಓದುತ್ತಿದ್ದ ಬನಸಿರಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಈಕೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಮೂಲದ ಶಿವಪುರ ಗ್ರಾಮದವಳು. ಗುರುವಾರ ಮಧ್ಯಾಹ್ನ ಊಟ ಮುಗಿಸಿಕೊಂಡು ಬಂದ ಈಕೆ ತಾನು ತಂಗಿದ್ದ 101ಬಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ.
ಖಿನ್ನತೆಯೇ ಇದಕ್ಕೆ ಕಾರಣ ಎನ್ನಲಾಗಿದೆ.