Tuesday, July 23, 2024
Google search engine
Homeಪೊಲಿಟಿಕಲ್ಊರ್ಡಿಗೆರೆಗೆ ಕಾಲೇಜು, ದೇವರಾಯನದುರ್ಗಕ್ಕೆ ರೋಪ್ ವೇ

ಊರ್ಡಿಗೆರೆಗೆ ಕಾಲೇಜು, ದೇವರಾಯನದುರ್ಗಕ್ಕೆ ರೋಪ್ ವೇ

ತುಮಕೂರು; ಊರ್ಡಿಗೆರೆ ಹೋಬಳಿ ಸರ್ವತ್ತೋಮುಖ ಅಭಿವೃದ್ಧಿ ನನ್ನ ಮುಂದಿನ ಗುರಿಯಾಗಿದೆ. ಊರ್ಡಿಗೆರೆಗೆ ಪದವಿ ಕಾಲೇಜು ಹಾಗೂ ದೇವರಾಯನದುರ್ಗಕ್ಕೆ ರೋಪ್ ವೇ ಅಳವಡಿಸಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ ಪಡಿಸುವ ಭರವಸೆಯನ್ನು ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡ ನೀಡಿದರು.

ಇಲ್ಲಿನ ಊರ್ಡಿಗೆರೆ, ದೇವರಾಯನದುರ್ಗಕ್ಕೆ ಬುಧವಾರ ಭೇಟಿ ನೀಡಿ ಬಿರುಸಿನ‌ ಚುನಾವಣಾ ಪ್ರಚಾರ ನಡೆಸಿದರು.

ಮತದಾರರೊಂದಿಗೆ ಮಾತನಾಡಿದ ಅವರು, ಊರ್ಡಿಗೆರೆಗೆ ಕಾಲೇಜಿನ ಅಗತ್ಯವಿದೆ. ಇಲ್ಲಿಗೆ ವಸಂತನರಾಸಪುರ, ದಾಬಸಪೇಟೆ ಕೈಗಾರಿಕಾ ಪ್ರದೇಶ ಎರಡೂ ಹತ್ತಿರದಲ್ಲಿವೆ. ಇವುಗಳ ಪ್ರಯೋಜನ ಪಡೆಯಬೇಕಾದರೆ ಇಲ್ಲಿನ ಮಕ್ಕಳಿಗೆ ಉನ್ನತ ಶಿಕ್ಷಣದ ಅಗತ್ಯವಿದೆ. ಹೆಣ್ಣು ಮಕ್ಕಳಿಗೆ ಮನೆ ಬಾಗಿಲಲ್ಲೇ ಶಿಕ್ಷಣ ಸಿಗುವಂತಾಗಬೇಕಾಗಿದೆ ಎಂದರು.
ನಾನು ಶಾಸಕ‌ನಾಗಿ ಆಯ್ಕೆಯಾದರೆ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುತ್ತೇನೆ.‌ ಹಳ್ಳಿ ಮಕ್ಕಳಿಗೆ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ಒದಗಿಸುತ್ತೇನೆ ಎಂದು ಪೋಷಕರಿಗೆ ಭರವಸೆ ನೀಡಿದರು.

ದೇವರಾಯನದುರ್ಗ ಇತಿಹಾಸ ಪ್ರಸಿದ್ಧ ಸ್ಥಳವಾಗಿದೆ. ಬೆಟ್ಟಕ್ಕೆ ರೋಪ್ ವೇ ಅಳವಡಿಸಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ ಪಡಿಸುತ್ತೇನೆ ಎಂದರು.
ರೋಪ್ ವೇ ಅಳವಡಿಸುವುದರಿಂದ ಸಾವಿರಾರು ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ಇದರಿಂದ ಇಲ್ಲಿ ಉದ್ಯೋಗದ ಜತೆಗೆ ಸ್ಥಳೀಯರಿಗೆ ಸ್ಥಳೀಯ ವಹಿವಾಟಿಗೂ ಅವಕಾಶವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಪ್ರಚಾರದ ವೇಳೆ ಮಹಿಳಾ ಮತದಾರರು ಮಾಜಿ ಶಾಸಕರೊಂದಿಗೆ ಮಾತುಕತೆ ನಡೆಸಿದರು. ಅಭಿವೃದ್ಧಿ ಕುರಿತ ತಮ್ಮ ಬೇಡಿಕೆಗಳನ್ನು ಮುಂದಿಟ್ಟರು.

ಪ್ರಚಾರದಲ್ಲಿ ಅನೇಕ ಮುಖಂಡರು ಹಾಜರಿದ್ದರು. ಜೆಡಿಎಸ್ ನ ಕಾರ್ಯಕರ್ತರನೇಕರು ಸುರೇಶಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?