Saturday, July 27, 2024
Google search engine
HomeUncategorizedತುರುವೇಕೆರೆ ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಹಲವು ಚರ್ಚೆ

ತುರುವೇಕೆರೆ ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಹಲವು ಚರ್ಚೆ

ತುರುವೇಕೆರೆ: ರಾಜ್ಯದ ಸರ್ಕಾರಿ ನೌಕರರ ಹಿತ ದೃಷ್ಟಿಯಿಂದ ಎನ್.ಪಿ.ಎಸ್ ಗೆ ಬದಲಾಗಿ ಹಳೆ ಪಿಂಚಣಿ ಯೋಜನೆ ತರುವುದು ಮತ್ತು 7ನೇ ವೇತನ ಆಯೋಗವನ್ನು ಶೀಘ್ರವೇ ಜಾರಿ ಮಾಡುವ ಸಂಬಂಧ ಬೇಡಿಕೆಗಳನ್ನು ಸ್ಥಳೀಯ ಶಾಸಕರಾದ ಎಂ.ಟಿ.ಕೃಷ್ಣಪ್ಪನವರ ಮೂಲಕ ಸರ್ಕಾರಕ್ಕೆ ಜ.19 ರಂದು ಮನವಿ ಸಲ್ಲಿಸಲಾಗುವುದೆಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ನಂರಾಜು ಮುನಿಯೂರು ತಿಳಿಸಿದರು.

ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ನೌಕರರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷರಾದ ಷಡಕ್ಷರಿಯವರ ನೇತೃತ್ವದಲ್ಲಿ ಮಂಡ್ಯದಲ್ಲಿ ಜ.6ರಂದು ನಡೆದ ರಾಜ್ಯಕಾರ್ಯಕಾರಣಿ ಸಭೆಯಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿತ್ತು. ಅದರಂತೆ ರಾಜ್ಯದ ಸರ್ಕಾರಿ ನೌಕರರ ಬಹು ನಿರೀಕ್ಷಿತ ಬೇಡಿಕೆಯಂತೆ 7ನೇ ವೇತನ ಆಯೋಗದ ಪರಿಷ್ಕರಣೆ ಮಾಡಿ ಜಾರಿಗೆ ತರುವುದು, ನೌಕರರಿಗೆ ವಿಶೇಷವಾಗಿ ನಗದು ರಹಿತ ಚಿಕಿತ್ಸೆ ನೀಡುವುದು ಮತ್ತು ಬಹಳ ಮುಖ್ಯವಾಗಿ ರಾಜ್ಯದ ಲಕ್ಷಾಂತರ ನೌಕರರ ಹಾಗು ಅವರ ಕುಟುಂಬದವರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಪಿಂಚಣಿ ಯೋಜನೆಯನ್ನು ತೆಗೆದು ಹಾಕಿ, ಹಳೆ ಪಿಂಚಣಿ ಯೋಜನೆಯನ್ನು ಶೀಘ್ರವೇ ಜಾರಿಗೆ ತರುವ ನಿರ್ಣಯಗಳ್ನು ಕೈಗೊಳ್ಳಲಾಗಿದ್ದು.

ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಶಾಸಕರಿಗೆ ಹಾಗು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು. ರಾಜ್ಯ ಸರ್ಕಾರಿ ನೌಕರರ ಬಗ್ಗೆ ವಿಶೇಷ ಕಾಳಜಿ ಇರುವ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಮೂರೂ ಬೇಡಿಕೆಗಳನ್ನು ಈಡೇರಿಸುವ ಭರವಸೆ ಇದೆ ಎಂದ ಅವರು

ತಾಲ್ಲೂಕಿನ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 50 ಲಕ್ಷ ರೂಪಾಯಿಗಳ ಕ್ರಿಯಾ ಯೋಜನೆಯೊಂದಿಗೆ ಮತ್ತು ಜನಪ್ರತಿನಿಧಿಗಳು ಹಾಗು ತಾಲ್ಲೂಕಿನ ನೌಕರರ ಸಹಕಾರದಿಂದ ಮೇಲಂತಸ್ಥಿನ ನೌಕರರ ಸಮುದಾಯ ಭವನವನಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪನವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಶುಕ್ರವಾರ ಸಂಜೆ 4.30ಕ್ಕೆ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿಯವರು ಹಾಗು ಜಿಲ್ಲಾಧ್ಯಕ್ಷರಾದ ಎನ್.ನರಸಿಂಹರಾಜುರವರು ಆಗಮಿಸಲಿದ್ದಾರೆ.

ಸರ್ಕಾರದ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆಗಳ ಸರ್ಕಾರಿ ಅಧಿಕಾರಿಗಳು, ನೌಕರರು, ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಖಜಾಂಚಿ ನಾಗರಾಜು, ಉಪಾಧ್ಯಕ್ಷ ವೀರಪ್ರಸನ್ನ, ರಾಜ್ಯ ಪರಿಷತ್ ಸದಸ್ಯ ಗಿಡ್ಡೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುರಾಜ, ನಿದರ್ೇಶಕರಾದ ಮಮತ, ಅಶ್ವಿನಿ, ಪಾಪಣ್ಣ ಇನ್ನಿತರರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?