Sunday, December 3, 2023
spot_img
Homeತುಮಕೂರ್ ಲೈವ್ಆರೋಗ್ಯದ ಬಗ್ಗೆ ಇರಲಿ ಎಚ್ಚರಿಕೆ

ಆರೋಗ್ಯದ ಬಗ್ಗೆ ಇರಲಿ ಎಚ್ಚರಿಕೆ

ಮಧುಗಿರಿ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಕರ್ನಾಟಕ ನಗರ ಮತ್ತು ಗ್ರಾಮೀಣ ಶೈಕ್ಷಣಿಕ , ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ ವತಿಯಿಂದ ಬುಧವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಿ ವಿತರಣೆ ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿ ದೇವಿ ಉದ್ಘಾಟಿಸಿದರು

ಮಧುಗಿರಿ : ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕೆಂದು ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿ ದೇವಿ ತಿಳಿಸಿದರು.

ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಕರ್ನಾಟಕ ನಗರ ಮತ್ತು ಗ್ರಾಮೀಣ ಶೈಕ್ಷಣಿಕ , ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಿ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯದ ಬಗ್ಗೆ ಯಾರೂ ಕಡಗಣನೆ ಮಾಡಬಾರದು ಎಂದು ತಿಳಿಸಿ, ಮಹಿಳೆಯರಲ್ಲಿ ಕಾಡುವ ರಕ್ತ ಹೀನತೆ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕೆಂದರು. ಬಡ ರೋಗಿಗಳಿಗೆ ಉಚಿತ ಆರೋಗ್ಯ ಶಿಬಿರಗಳು ವರದಾನವಾಗಲಿವೆ ಎಂದರು.ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸುವುದಕ್ಕೆ ಸಂಸ್ಥೆಯು ಮುಂದಾಗಿರುವುದು ಶ್ಲಾಘನೀಯ ಎಂದರು. ಇದರ ಸದುಪಯೋಗ ಜನರು ಪಡೆದುಕೊಳ್ಳಬೇಕೆಂದರು.

ಇದೇ ಸಂದರ್ಭದಲ್ಲಿ 300 ಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು, ಔಷಧವನ್ನು ಪಡೆದುಕೊಂಡರು.

ಡಾ.ಶಿವಪ್ರಸಾದ್ ಮಾತನಾಡಿದರು.ಸಂಸ್ಥೆಯ ಅಧ್ಯಕ್ಷೆ ಮೋಹನ್ ಕುಮಾರಿ, ಪುರಸಭೆ ಮುಖ್ಯಾಧಿಕಾರಿ ಅಮರ್ ನಾರಾಯಣ್, ಆರೋಗ್ಯ ನಿರೀಕ್ಷಕ ಬಾಲಾಜಿ,ವೈದ್ಯರಾದ ರತ್ನಾವತಿ, ಶ್ರೀನಿವಾಸ್ ಯಾದವ್, ನವೀನ್ ಕುಮಾರ್, ತಾ.ಪಂ.ಮಾಜಿ ಸದಸ್ಯ ಶಾಂತಬಾಯಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು